AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿಗೆ ಆಗಮಿಸಿದ್ದ ಯುಪಿ ಭಕ್ತರು ಮತ್ತು ಸ್ಥಳೀಯರ ನಡುವೆ ಗಲಾಟೆ, ಬಸ್​ಗಳಿಗೆ ಕಲ್ಲು ಎಸೆತ

ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದಿದ್ದ ಭಕ್ತರು ಮತ್ತು ಸ್ಥಳೀಯರ ನಡುವೆ ಗಲಾಟೆ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ನಡೆದಿದೆ. ವಿದ್ಯುತ್ ವೈಯರ್ ತುಂಡಾಗುವಂತೆ ಬಸ್ ಚಾಲನೆ ಮಾಡಿದ್ದಾರೆ ಅಂತ ಆರೋಪಿಸಿ ಸ್ಥಳೀಯರು ಜಗಳ ಎತ್ತಿದ್ದು, ಗಲಾಟೆ ವೇಳೆ ಭಕ್ತರು ಆಗಮಿಸಿದ್ದ ಬಸ್​ಗಳಿಗೆ ಕಲ್ಲು ಎಸೆದಿದ್ದಾರೆ.

ಅಂಜನಾದ್ರಿಗೆ ಆಗಮಿಸಿದ್ದ ಯುಪಿ ಭಕ್ತರು ಮತ್ತು ಸ್ಥಳೀಯರ ನಡುವೆ ಗಲಾಟೆ, ಬಸ್​ಗಳಿಗೆ ಕಲ್ಲು ಎಸೆತ
ಅಂಜನಾದ್ರಿಗೆ ಆಗಮಿಸಿದ್ದ ಯುಪಿಯ ಭಕ್ತರು ಮತ್ತು ಸ್ಥಳೀಯರ ನಡುವೆ ಗಲಾಟೆ, ಬಸ್​ಗಳಿಗೆ ಕಲ್ಲು ತೂರಾಟ (ಫೋಟೋ: ಘಟನೆ ಖಂಡಿಸಿ ಗಂಗಾವತಿ ಠಾಣೆಗೆ ಮುತ್ತಿಗೆ ಹಾಕಿದ ಉತ್ತರ ಪ್ರದೇಶದ ಭಕ್ತರು)
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Jan 02, 2024 | 10:15 PM

Share

ಕೊಪ್ಪಳ, ಜ.2: ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದು ವಾಪಸ್ ಆಗುತ್ತಿದ್ದ ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ ನಡೆದ ಘಟನೆ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ನಡೆದಿದೆ. ಗಲಾಟೆ ವೇಳೆ ಬಸ್​ಗಳಿಗೆ ಕಲ್ಲು ತೂರಲಾಗಿದ್ದು, ಇಬ್ಬರು ಭಕ್ತರಿಗೆ ಗಾಯಗಳಾಗಿವೆ.

ಉತ್ತರ ಪ್ರದೇಶದದಿಂದ ನಾಲ್ಕು ಬಸ್​ಗಳಲ್ಲಿ ಹನುಮಂತನ ಭಕ್ತರು ಅಂಜನಾದ್ರಿಗೆ ಆಗಮಿಸಿದ್ದರು. ವಾಪಸ್ ಆಗುತ್ತಿದ್ದಾಗ ಬಸ್​ಗಳನ್ನು ತಡೆದ ಸ್ಥಳೀಯರು ಜಗಳ ಎತ್ತಿದ್ದಾರೆ. ವಿದ್ಯುತ್ ವೈಯರ್ ತುಂಡಾಗುವಂತೆ ಬಸ್ ಚಾಲನೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಗಲಾಟೆ, ಮಾತಿನ ಚಕಮಕಿ ನಡೆದಿದ್ದು, ಉತ್ತರ ಪ್ರದೇಶದ ಬಸ್ ಮೇಲೆ ಸ್ಥಳೀಯರು ಕಲ್ಲೆಸೆದಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ ಅಂಜನಾದ್ರಿ ಬೆಟ್ಟ

ಘಟನೆಯಲ್ಲಿ ಉತ್ತರಪ್ರದೇಶ ಮೂಲದ ರಾಮಕುಮಾರ್ ಹಾಗೂ ಮೋನು ಎಂಬವರ ತಲೆಗೆ ಗಾಯಗಳಾಗಿದ್ದು, ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಖಂಡಿಸಿ ಗಂಗಾವತಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉತ್ತರ ಪ್ರದೇಶದ ನೂರಾರು ಭಕ್ತರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್