AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳನ್ನು ಬಂಧಿಸಿದ್ರೆ ಮಾತ್ರ ಮನೆಗೆ ಬನ್ನಿ; ಗೃಹ ಸಚಿವ ಜಿ.ಪರಮೇಶ್ವರಗೆ ಪಿಎಸ್​ಐ ಪರಶುರಾಮ ಕುಟುಂಬ ಸೂಚನೆ

ಯಾದಗಿರಿ ಪಿಎಸ್ಐ ಆಗಿದ್ದ ಪರಶುರಾಮ್ ಐದು ದಿನದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅದರಂತೆ ಪರಶುರಾಮ್ ಅವರ ಸ್ವಗ್ರಾಮವಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಇಂದು ತಿಥಿ ಕಾರ್ಯ ನಡೆದಿದ್ದು, ವಿಧಿ-ವಿಧಾನಗಳನ್ನು ಪತ್ನಿ ನಡೆಸಿದ್ರೆ, ಇನ್ನೊಂದೆಡೆ ಹೆತ್ತ ತಾಯಿಯ ಕಣ್ಣಾಲೆಗಳು ಕೂಡ ತೇವುಗೊಂಡಿದ್ದವು.

ಆರೋಪಿಗಳನ್ನು ಬಂಧಿಸಿದ್ರೆ ಮಾತ್ರ ಮನೆಗೆ ಬನ್ನಿ; ಗೃಹ ಸಚಿವ ಜಿ.ಪರಮೇಶ್ವರಗೆ ಪಿಎಸ್​ಐ ಪರಶುರಾಮ ಕುಟುಂಬ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರಗೆ ಮೃತ ಪರಶುರಾಮ ಕುಟುಂಬ ಸೂಚನೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 06, 2024 | 8:32 PM

Share

ಕೊಪ್ಪಳ, ಆ.06: ಪಿಎಸ್ಐ ಪರಶುರಾಮ(PSI Parashurama)ಬಾರದ ಲೋಕಕ್ಕೆ ಹೋಗಿ ಐದು ದಿನವಾಯ್ತು. ಆದ್ರೆ, ಇಲ್ಲಿವರೆಗೆ ಆತನ ಸಾವು ಹೇಗಾಯ್ತು, ಯಾಕಾಯ್ತು ಎನ್ನುವ ಸತ್ಯ ಹೊರಬಂದಿಲ್ಲ. ಇನ್ನೊಂದೆಡೆ ಕುಟುಂಬದವರು ಕಣ್ಣೀರು ಸುರಿಸುತ್ತಲೇ ಇಂದು ಐದನೇ ದಿನದ ತಿಥಿ ಕಾರ್ಯವನ್ನು ಮಾಡಿದರು. ಇನ್ನು ನಾಳೆ(ಆ.07) ಮೃತ ಪರಶುರಾಮ್ ಸ್ವಗ್ರಾಮಕ್ಕೆ ಗೃಹ ಸಚಿವರು ಬರುತ್ತಿದ್ದಾರೆ. ಆದ್ರೆ, ಆರೋಪಿಗಳನ್ನು ಬಂಧಿಸದೇ ಗ್ರಾಮಕ್ಕೆ ಬರಬೇಡಿ ಎಂದು ಪರಶುರಾಮ್ ಕುಟುಂಬ ಮತ್ತು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಯಾದಗಿರಿ ಪಿಎಸ್ಐ ಆಗಿದ್ದ ಪರಶುರಾಮ್ ಐದು ದಿನದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಮ್ಮಳಿಸಿ ಬರುತ್ತಿರೋ ದುಖಃದ ನಡುವೆಯೇ ಪತಿಯ ಭಾವಚಿತ್ರಕ್ಕೆ ಕೈಮುಗಿದು, ಪರಶುರಾಮ್ ಅವರ ಸ್ವಗ್ರಾಮವಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಇಂದು ತಿಥಿ ಕಾರ್ಯ ನಡೆದಿದ್ದು, ವಿಧಿ-ವಿಧಾನಗಳನ್ನು ಪತ್ನಿ ನಡೆಸಿದ್ರೆ, ಇನ್ನೊಂದೆಡೆ ಹೆತ್ತ ತಾಯಿಯ ಕಣ್ಣಾಲೆಗಳು ಕೂಡ ತೇವುಗೊಂಡಿದ್ದವು. ಇಡೀ ಕುಟುಂಬ ನೋವಲ್ಲಿಯೇ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಇದನ್ನೂ ಓದಿ:ಪಿಎಸ್ಐ ಪರಶುರಾಮ ಸಾವು ಪ್ರಕರಣ: ಶಾಸಕ ಸ್ಥಾನದಿಂದ ಚೆನ್ನಾರೆಡ್ಡಿಯನ್ನು ವಜಾಗೊಳಿಸುವಂತೆ ಸ್ಪೀಕರ್​ಗೆ ಪತ್ರ

ಇದೇ ಸಮಯದಲ್ಲಿ ಆಗಮಿಸಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ‘ತಿಥಿ ಕಾರ್ಯದಲ್ಲಿ ಭಾಗಿಯಾದರು. ನಂತರ ಕುಟುಂಬದವರನ್ನು ಭೇಟಿ ಮಾಡಿದ ಛಲವಾದಿ ನಾರಾಯಣಸ್ವಾಮಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮೃತ ಪರಶುರಾಮ್ ಪತ್ನಿಗೆ, ತಮ್ಮ ಒಂದು ತಿಂಗಳ ವೇತನದ ಚೆಕ್​ನ್ನು ನೀಡಿದರು. ನಂತರ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ‘ಘಟನೆ ನಡೆದು ಐದು ದಿನವಾದರೂ ಇಲ್ಲಿವರೆಗೆ ಆರೋಪಿಗಳ ಬಂಧನವಾಗಿಲ್ಲ. ಎಐಸಿಸಿ ಅಧ್ಯಕ್ಷರು ಮತ್ತು ಸಿಎಂ ಯಾದಗಿರಿ ಶಾಸಕ ಮತ್ತು ಅವರ ಪುತ್ರನ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಆರೋಪಿಗಳ ಬಂಧನಕ್ಕೆ ಪರಶುರಾಮ ಕುಟುಂಬ ಆಗ್ರಹ

ಇನ್ನು ಪರಶುರಾಮ್ ಸಾವಿನ ಬಗ್ಗೆ ಸಿಐಡಿ ತನಿಖೆ ಆರಂಭಿಸಿದೆ. ಇದರ ನಡುವೆ ಪರಶುರಾಮ್ ಅವರ ದೇಹದ ವಿವಿಧ ಅಂಗಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಸಿಐಡಿಯವರು ಕಾಯುತ್ತಿದ್ದಾರೆ. ಇನ್ನು ಘಟನೆ ನಡೆದು ಐದು ದಿನವಾದರೂ ಕೂಡ ಆರೋಪಿಗಳ ಬಂಧನವಾಗಿಲ್ಲ. ಇದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಸಮಯದಲ್ಲಿ ನಾಳೆ(ಆ.07) ಪರಶುರಾಮ್ ನಿವಾಸಕ್ಕೆ ಗೃಹ ಸಚಿವ ಜಿ ಪರಮೇಶ್ವರ ಭೇಟಿ ನೀಡಲು ಬರುತ್ತಿದ್ದಾರೆ. ಆದ್ರೆ, ಗೃಹ ಸಚಿವರು ಗ್ರಾಮಕ್ಕೆ ಬರುವ ಮೊದಲು ಆರೋಪಿಗಳನ್ನು ಬಂಧಿಸಬೇಕು. ಆರೋಪಿಗಳನ್ನು ಬಂಧಿಸದೇ ಬರುವುದು ಬೇಡ ಎಂದು ಕುಟುಂಬದವರು ಮತ್ತು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಒಂದಡೆ ಪರಶುರಾಮ್ ಸಾವಿನ ಬಗ್ಗೆ ಸಿಐಡಿ ತಂಡ ತನಿಖೆ ಆರಂಭಿಸಿದೆ. ಆದ್ರೆ, ಇನ್ನೊಂದೆಡೆ ಕುಟುಂಬದವರು ಮತ್ತು ಬಿಜೆಪಿ ನಾಯಕರು ನಿಸ್ಪಕ್ಷಪಾತವಾದ ತನಿಖೆಯಾಗಬೇಕಾದರೆ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದೀಗ ರಾಜಕೀಯ ತಿರುವು ಪಡೆದುಕೊಂಡಿರುವ ಈ ಪ್ರಕರಣ, ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದು ಕಾಲವೇ ಉತ್ತರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Tue, 6 August 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್