AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಸುತ್ತಮುತ್ತ ಅಕ್ರಮವಾಗಿ ರೆಸಾರ್ಟ್​ ನಡೆಸುತ್ತಿದ್ದ 11 ಮಾಲೀಕರ ವಿರುದ್ಧ ದೂರು ದಾಖಲು

ಹಂಪಿ ವಿಶ್ವಪರಂಪರೆ ಪ್ರಾಧಿಕಾರ ವ್ಯಾಪ್ತಿಯ ಅನಧಿಕೃತ ರೇಸಾರ್ಟ್​ಗಳು ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹಂಪಿ ಪ್ರದೇಶ ನಿರ್ವಹಣಾ ಪ್ರಾಧಿಕಾರದಿಂದ ಅನುಮತಿ ಪಡೆಯದೆ ರೆಸಾರ್ಟ್​ ನಡೆಸ್ತಿದ್ದ ಹಿನ್ನೆಲೆ 11 ರೆಸಾರ್ಟ್ ಮಾಲೀಕರು ಮತ್ತು ಭೂಮಾಲೀಕರ ವಿರುದ್ದ ದೂರು ಸಲ್ಲಿಸಲಾಗಿದೆ.

ಹಂಪಿ ಸುತ್ತಮುತ್ತ ಅಕ್ರಮವಾಗಿ ರೆಸಾರ್ಟ್​ ನಡೆಸುತ್ತಿದ್ದ 11 ಮಾಲೀಕರ ವಿರುದ್ಧ ದೂರು ದಾಖಲು
ಹಂಪಿ(ಸಾಂದರ್ಭಿಕ ಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Aug 13, 2023 | 12:35 PM

Share

ಕೊಪ್ಪಳ, ಆ.13: ಹಂಪಿ(Hampi) ಸುತ್ತಮುತ್ತ ಅಕ್ರಮವಾಗಿ ರೆಸಾರ್ಟ್​ ನಡೆಸುತ್ತಿದ್ದ 11 ರೆಸಾರ್ಟ್ ಮಾಲೀಕರು ಹಾಗೂ ಭೂಮಾಲೀಕರ ವಿರುದ್ದ ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂಪಿ ಪ್ರದೇಶ ನಿರ್ವಹಣಾ ಪ್ರಾಧಿಕಾರದಿಂದ ಅನುಮತಿ ಪಡೆಯದೆ ರೆಸಾರ್ಟ್​ ನಡೆಸ್ತಿದ್ದ ಹಿನ್ನೆಲೆ ದೂರು ಸಲ್ಲಿಸಲಾಗಿದೆ. ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೇ ರೇಸಾರ್ಟ್​ ನಡೆಸುತ್ತಿದ್ದರು. ಈ ಹಿನ್ನಲೆ ಅಧಿಕಾರಿಗಳು ನಿನ್ನೆ ಖುದ್ದು ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿ ಪರೀಶಿಲನೆ ಮಾಡಿದ್ದರು. ಈ ವೇಳೆ ಅನುಮತಿ ಪಡೆಯದೆ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿರುವುದು ಸಾಬೀತು ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಹಂಪಿ ವಿಶ್ವಪರಂಪರೆ ಪ್ರಾಧಿಕಾರ ವ್ಯಾಪ್ತಿಯ ಅನಧಿಕೃತ ರೇಸಾರ್ಟ್​ಗಳು ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗಂಗಾವತಿ ತಾಲೂಕಿನ ಆನೆಗುಂದಿ ಸುತ್ತಮುತ್ತಲಿನ ಪೀಪಲ್ ಟ್ರಿ ರೇಸಾರ್ಟ್​, ನೇಚರ್ ಕಾಟೇಜ್, ವೈಲ್ಡ್ ಸ್ಟೋನ್ ಸಾಣಾಪುರ, ದಿ ಕಿಂಗ್, ಲೇಜಿ ಪಾಂಡಾ, ಕೊಕೊನೆಟ್ ಟ್ರಿ ಸೇರಿದಂತೆ 11 ರೇಸಾರ್ಟ್​ ಮಾಲೀಕರ ವಿರುದ್ಧ ಹಾಗೂ ರೆಸಾರ್ಟ್​​ನ ಭೂ ಮಾಲೀಕರ ವಿರುದ್ಧವೂ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Hampi: ಕಣ್ಣಿಗೆ ಕಟ್ಟುವಂತಿದೆ ಹಂಪಿಯ ಗತಕಾಲದ ವೈಭವದ AI ಚಿತ್ರಗಳು

ವಿಶ್ವ ಪಾರಂಪರಿಕ ಸ್ಥಳವಾದ ಹಂಪಿಗೆ ಸಾವಿರಾರು ಪ್ರವಾಸಿಗರು ಪ್ರತಿ ದಿನ ಭೇಟಿ ನೀಡುತ್ತಾರೆ. ಅದರಲ್ಲೂ ಹಂಪಿಗೆ ಹೆಚ್ಚಾಗಿ ಫಾರಿನರ್ಸ್​ಗಳು ಭೇಟಿ ನೀಡುತ್ತಾರೆ. ಇದನ್ನೇ ಬಂಡವಾಳವಾಗಿಟ್ಟುಕೊಂಡು ರೆಸಾರ್ಟ್​ಗಳಲ್ಲಿ ಅಕ್ರಮವಾಗಿ ಗಾಂಜಾದಂತಹ ಮಾದಕ ದ್ರವಗಳ ಸೇವನೆಯಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಇನ್ನು ಅಂಜನಾದ್ರಿ ಬೆಟ್ಟದ ಬಳಿ ಕೂಡ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಧ್ವನಿ ಎತ್ತಿದ್ದರು. ಈ ಬೆನ್ನಲ್ಲೆ ನಿನ್ನೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ  ಅಕ್ರಮವಾಗಿ ರೆಸಾರ್ಟ್​ ನಡೆಸುತ್ತಿದ್ದ 11 ರೆಸಾರ್ಟ್ ಮಾಲೀಕರು ಹಾಗೂ ಭೂಮಾಲೀಕರ ವಿರುದ್ದ ದೂರು ದಾಖಲಿಸಿದ್ದಾರೆ.

ಇನ್ನು ಈ ರೀತಿ ಅಕ್ರಮವಾಗಿ ತೆರೆಯಲಾದ ರೆಸಾರ್ಟ್​ಗಳ ವಿರುದ್ಧ ದೂರು ದಾಖಲಿಸುತ್ತಿರುವುದು ಇದೇ ಮೊದಲೇನಲ್ಲ.  ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಲ್ಲಿ ಸಾಣಾಪುರದಲ್ಲಿ ಅಕ್ರಮ ರೆಸಾರ್ಟ್ ಗಳಿಗೆ ಕೊಪ್ಪಳ ಜಿಲ್ಲಾಡಳಿತ ಬೀಗ ಜಡಿದಿತ್ತು. ಹಂಪಿ, ಅಂಜನಾದ್ರಿ, ಆನೆಗೊಂದಿಗೆ ಬರುವ ವಿದೇಶಿ ಹಾಗೂ ದೇಶೀಯ ಪ್ರವಾಸಿಗರ ವಾಸ್ತವ್ಯ, ಊಟ ತಿಂಡಿಗಾಗಿ ಸಾಣಾಪುರ ಬಳಿಯಲ್ಲಿ ನಿರ್ಮಿಸಲಾಗಿದ್ದ  ರೆಸಾರ್ಟ್ ಗಳು ಹಾಗೂ ಹೋಂ ಸ್ಟೇಗಳನ್ನು ಮುಚ್ಚಿಸಲಾಗಿತ್ತು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:34 pm, Sun, 13 August 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ