AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಎಸ್​​ಪಿ ವರ್ಗಾವಣೆಗೆ ಕಾಂಗ್ರೆಸ್​ ಶಾಸಕರಿಂದಲೇ ವಿರೋಧ: ಶಿವರಾಜ್ ತಂಗಡಗಿ ವಿರುದ್ಧ ಆಕ್ರೋಶ

2023ರ ಫೆಬ್ರವರಿ 24ರಿಂದ ಕೊಪ್ಪಳ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಯಶೋಧಾ ಎಸ್​. ವಂಟಗೋಡಿ ಅವರನ್ನು ಕರ್ನಾಟಕ ಸರ್ಕಾರ ಗುರುವಾರ ವರ್ಗಾವಣೆ ಮಾಡಿದೆ. ಆದರೆ, ಈ ವರ್ಗಾವಣೆಗೆ ಕಾಂಗ್ರೆಸ್​ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ.

ಕೊಪ್ಪಳ ಎಸ್​​ಪಿ ವರ್ಗಾವಣೆಗೆ ಕಾಂಗ್ರೆಸ್​ ಶಾಸಕರಿಂದಲೇ ವಿರೋಧ: ಶಿವರಾಜ್ ತಂಗಡಗಿ ವಿರುದ್ಧ ಆಕ್ರೋಶ
ಎಸ್​ಪಿ ಯಶೋಧಾ ಎಸ್​. ವಂಟಗೋಡಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 05, 2024 | 11:57 AM

Share

ಕೊಪ್ಪಳ, ಜುಲೈ 05: ಕರ್ನಾಟಕ ಸರ್ಕಾರ (Karnataka Government) ಗುರುವಾರ (ಜು.04) ರಂದು ಕೊಪ್ಪಳ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (Koppal SP) ಯಶೋಧಾ ಎಸ್​. ವಂಟಗೋಡಿ ಅವರನ್ನು ಲೋಕಾಯುಕ್ತದ (Lokayukta) ಎಸ್​ಪಿ ಸ್ಥಾನಕ್ಕೆ ಮಾಡಿ ಆದೇಶ ಹೊರಡಿಸಿದೆ. ಜಿಲೆಯ ನೂತನ ಎಸ್​​ಪಿಯಾಗಿ ರಾಮ್​ ಎಲ್​​. ಅರಸಿದ್ದಿ ಅವರನ್ನು ನೇಮಕ ಮಾಡಿದೆ. ಆದರೆ, ಯಶೋಧಾ ಎಸ್​. ವಂಟಗೋಡಿ ವರ್ಗಾವಣೆ ವಿಚಾರವಾಗಿ ಜಿಲ್ಲೆಯ ಕಾಂಗ್ರೆಸ್ (Congress)​ ಶಾಸಕರ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ.

ಯಶೋಧಾ ಎಸ್​. ವಂಟಗೋಡಿ ವರ್ಗಾವಣೆಗೆ ಜಿಲ್ಲೆಯ ಕೆಲ ಕಾಂಗ್ರೆಸ್​ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೆ ವರ್ಗಾವಣೆಯನ್ನು ತಡೆಹಿಡಿಯಬೇಕೆಂದು, ಹಾಲಿ ಎಸ್ಪಿಯವರನ್ನೇ ಮುಂದುವರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್​ ಅವರಿಗೆ ಮನವಿ ಮಾಡಿದ್ದಾರೆ. ಹೀಗಾಗಿ, ರಾಮ್​ ಎಲ್. ಅರಸಿದ್ದಿ ಅವರು ಅಧಿಕಾರ ಸ್ವೀಕಾರ ಮಾಡದಂತೆ ಗೃಹ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗ

ಯಾವುದೇ ಕಾರಣಕ್ಕೂ ಹಾಲಿ ಎಸ್​ಪಿ ಅವರನ್ನು ಬದಲಾವಣೆ ಮಾಡಬಾರದು. ಹಾಲಿ ಎಸ್​ಪಿ ಅವರ ವರ್ಗಾವಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾಡಿಸಿದ್ದಾರೆ. ತಮ್ಮ ತವರು ಕ್ಷೇತ್ರ ಇಲಕಲ್ ಮೂಲದವರನ್ನು ಎಸ್ಪಿಯಾಗಿ ಕರೆತಂದಿದ್ದಾರೆ ಅಂತ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚಿಗೆ ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ನಡೆಸಿತ್ತು. ಬುಧವಾರ (ಜು.03) ರಂದು 25 ಐಪಿಎಸ್​ ಅಧಿಕಾರಿಗಳುನ್ನು ವರ್ಗಾವಣೆಗೊಳಿಸಿತ್ತು. ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆಯಾಗಿದ್ದ ರೇಣುಕಾ ಸುಕುಮಾರ್​ ಅವರನ್ನು ವರ್ಗಾವಣೆ ಮಾಡಿತ್ತು. ಈ ಜಾಗಕ್ಕೆ ಎನ್​. ಶಶಿಕುಮಾರ್​ ಅವರನ್ನು ನೇಮಕ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ