AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿತ, ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಮಾಡುತ್ತಿರುವ ರೈತರು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳದಲ್ಲಿ ರೈತರು ಕೊತ್ತಂಬರಿ ಸೊಪ್ಪಿನ ಬೆಳೆ ನಾಶ ಮಾಡಿದ್ದಾರೆ. ಟಾವು ಮಾಡಿ, ಮಾರುಕಟ್ಟೆಗೆ ಸಾಗಾಟ ಮಾಡಲು ಆಗುವ ವೆಚ್ಚವು ಕೂಡ ಬರದೇ ಇದ್ದಿದ್ದರಿಂದ ಬೆಳೆ ನಾಶ ಮಾಡ್ತಿದ್ದಾರೆ. ಈ ವರ್ಷ ಒಂದು ಎಕರೆ ಕೊತಂಬರಿ ಸೊಪ್ಪು ಕೇವಲ 1000 ದಿಂದ 2000 ರೂಪಾಯಿಗೆ ಮಾರಾಟವಾಗಿದೆ.

ಕೊಪ್ಪಳ: ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿತ, ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಮಾಡುತ್ತಿರುವ ರೈತರು
ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿತ, ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 18, 2024 | 12:09 PM

Share

ಕೊಪ್ಪಳ, ಜುಲೈ.18: ಒಂದು ತಿಂಗಳ ಹಿಂದೆ ದರ ಏರಿಸಿಕೊಂಡಿದ್ದ ಕೊತ್ತಂಬರಿ ಸೊಪ್ಪಿನ (Coriander)  ಬೆಲೆಯು ದಿಢೀರನೆ ಕುಸಿದೆ. ಅಡುಗೆಯ ಅಂದ ಹೆಚ್ಚಿಸಲು, ರುಚಿ ಹೆಚ್ಚಿಸಲು ಬಹು ಬಳಕೆಯ ಕೊತ್ತಂಬರಿ ಸೊಪ್ಪಿನ ದರ ಒಂದು ತಿಂಗಳ ಹಿಂದೆ ಒಂದು ಕಂತೆಗೆ ಬರೋಬ್ಬರಿ 80 ರೂ. ಇತ್ತು. ಆದರೆ ಈಗ ದರ ಕುಸಿದಿದೆ. ಇದರಿಂದ ಕಂಗಾಲಾದ ಕೊಪ್ಪಳ (Koppal) ರೈತರು ತಾವೇ ಬೆಳೆದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳದಲ್ಲಿ ರೈತರು ಕೊತ್ತಂಬರಿ ಸೊಪ್ಪಿನ ಬೆಳೆ ನಾಶ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಬೆಲೆ ಸಿಗದಿದ್ದಕ್ಕೆ, ಕೊತ್ತಂಬರಿ ಸೊಪ್ಪಿನ ಬೆಲೆ ದಿಢೀ‌ರ್ ಕುಸಿದಿದ್ದಕ್ಕೆ ಬೆಳೆ ನಾಶ ಪಡಿಸಿದ್ದಾರೆ. ಯರೇಹಂಚಿನಾಳ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ರೈತರು ನೂರಾರು ಎಕರೆ ಕೊತಂಬರಿ ಬೆಳೆದಿದ್ದರು. ಸದ್ಯ ಈಗ ಕೊತ್ತಂಬರಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಈ ವರ್ಷ ಒಂದು ಎಕರೆ ಕೊತಂಬರಿ ಸೊಪ್ಪು ಕೇವಲ 1000 ದಿಂದ 2000 ರೂಪಾಯಿಗೆ ಮಾರಾಟವಾಗಿದೆ. ವ್ಯಾಪಾರಸ್ಥರು ಕಡಿಮೆ ಬೆಲೆಗೆ ಕೊತ್ತಂಬರಿ ಖರೀದಿ ಮಾಡುತ್ತಿದ್ದಾರೆ.

ಕಳೆದ ವರ್ಷ ಒಂದು ಎಕರೆ ಕೊತ್ತಂಬರಿ ಸೊಪ್ಪು 16 ರಿಂದ 20 ಸಾವಿರ ರೂಪಾಯಿಗೆ ಮಾರಾಟವಾಗಿತ್ತು. ಯರೇಹಂಚಿನಾಳ ಗ್ರಾಮದ ರೈತ ಮಹಾಂತೇಶ್ ಕೋಳೂರ ಅವರು ಬೆಳೆ ನಾಶ ಮಾಡಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ 8 ಎಕರೆಯಲ್ಲಿ ಕೊತ್ತಂಬರಿ ಬೆಳೆದಿದ್ದೆ. ಆದರೆ ಕಟಾವು ಮಾಡಿ, ಮಾರುಕಟ್ಟೆಗೆ ಸಾಗಾಟ ಮಾಡಲು ಆಗುವ ವೆಚ್ಚವು ಕೂಡ ಬರದೇ ಇದ್ದಿದ್ದರಿಂದ ಬೆಳೆ ನಾಶ ಮಾಡ್ತಿದ್ದೀನಿ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಜಿಟಿ ಮಾಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಬೇಕು: ಶರಣಗೌಡ ಕಂದ್ಕೂರ್

ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್​ ವಿರುದ್ಧ FIR

ಪಂಚೆ ಧರಿಸಿದ ರೈತನಿಗೆ ಅಪಮಾನ ಮಾಡಿರುವ ಜಿ.ಟಿ. ಮಾಲ್ ವಿರುದ್ಧ FIR ದಾಖಲಿಸಲಾಗಿದೆ. ದೂರುದಾರ ಧರ್ಮರಾಜಗೌಡ ದೂರಿನ ಹಿನ್ನಲೆ ಮಾಲ್ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ವಿರುದ್ಧ ಕೆಪಿ ಅಗ್ರಹಾರ ಠಾಣೆಯಲ್ಲಿ ಬಿಎನ್ ಎಸ್ 126(2) ಅಡಿ ಕೇಸ್ ದಾಖಲು ಮಾಡಲಾಗಿದೆ. ಮೊನ್ನೆ ರಾತ್ರಿ ಟಿಕೆಟ್​ ಪಡೆದು ಸಿನಿಮಾ ನೋಡಲು ಹೋಗ್ತಿದ್ದ ವೇಳೆ ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಹಾವೇರಿಯ ಫಕೀರಪ್ಪರನ್ನ ಮಾಲ್​ ಒಳಗೆ ಬಿಡದೇ ಸಿಬ್ಬಂದಿ ಅವಮಾನಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್