AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!

ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ(81) ಹಾಗೂ ಗೌರಮ್ಮ ಮೇಟಿ(65) ದಂಪತಿ ಜೊತೆಯಾಗಿ ಕೈಲಾಸ ಸೇರಿದ್ದಾರೆ. ಪತಿ ಹನುಮಂತಪ್ಪ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಗೌರಮ್ಮ ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!
ಸಾವಿನಲ್ಲೂ ಒಂದಾದ ದಂಪತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 03, 2023 | 11:20 AM

Share

ಕೊಪ್ಪಳ, (ಅಕ್ಟೋಬರ್ 03): ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ (Couple) ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ಮೂಲತಃ ಕೊಪ್ಪಳದ (Koppal) ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತದಿಂದ (Heart Attack) ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ, ಇಂದು(ಮಂಗಳವಾರ) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಐದಾರು ಗಂಟೆಗಳ ಅಂತರದಲ್ಲಿ ವೃದ್ಧ ದಂಪತಿ ಸಾವಿನಲ್ಲಿ ಒಂದಾಗಿದೆ.

ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮಸ್ಥರಾಗಿರುವ ಮೃತ ದಂಪತಿ, ಪ್ರಸ್ತುತ ಅನ್ನದಾನೇಶ್ವರ ನಗರದಲ್ಲಿ ವಾಸವಾಗಿದ್ದರು. ಪತಿ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಸಹ ಮೃತಪಟ್ಟಿದ್ದು, ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ ಹಾಗೂ ಗೌರಮ್ಮ ಮೇಟಿ ಜೊತೆಯಾಗಿ ಕೈಲಾಸ ಸೇರಿದ್ದಾರೆ.

ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ  ನೀರವ ಮೌನ ಆವರಿಸಿದ್ದು, ಸ್ಥಳೀಯರು ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 3 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ