AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!

ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ(81) ಹಾಗೂ ಗೌರಮ್ಮ ಮೇಟಿ(65) ದಂಪತಿ ಜೊತೆಯಾಗಿ ಕೈಲಾಸ ಸೇರಿದ್ದಾರೆ. ಪತಿ ಹನುಮಂತಪ್ಪ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಗೌರಮ್ಮ ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!
ಸಾವಿನಲ್ಲೂ ಒಂದಾದ ದಂಪತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 03, 2023 | 11:20 AM

Share

ಕೊಪ್ಪಳ, (ಅಕ್ಟೋಬರ್ 03): ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ (Couple) ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ಮೂಲತಃ ಕೊಪ್ಪಳದ (Koppal) ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತದಿಂದ (Heart Attack) ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ, ಇಂದು(ಮಂಗಳವಾರ) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಐದಾರು ಗಂಟೆಗಳ ಅಂತರದಲ್ಲಿ ವೃದ್ಧ ದಂಪತಿ ಸಾವಿನಲ್ಲಿ ಒಂದಾಗಿದೆ.

ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮಸ್ಥರಾಗಿರುವ ಮೃತ ದಂಪತಿ, ಪ್ರಸ್ತುತ ಅನ್ನದಾನೇಶ್ವರ ನಗರದಲ್ಲಿ ವಾಸವಾಗಿದ್ದರು. ಪತಿ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಸಹ ಮೃತಪಟ್ಟಿದ್ದು, ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ ಹಾಗೂ ಗೌರಮ್ಮ ಮೇಟಿ ಜೊತೆಯಾಗಿ ಕೈಲಾಸ ಸೇರಿದ್ದಾರೆ.

ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ  ನೀರವ ಮೌನ ಆವರಿಸಿದ್ದು, ಸ್ಥಳೀಯರು ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 3 October 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ