AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!

ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ(81) ಹಾಗೂ ಗೌರಮ್ಮ ಮೇಟಿ(65) ದಂಪತಿ ಜೊತೆಯಾಗಿ ಕೈಲಾಸ ಸೇರಿದ್ದಾರೆ. ಪತಿ ಹನುಮಂತಪ್ಪ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಗೌರಮ್ಮ ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!
ಸಾವಿನಲ್ಲೂ ಒಂದಾದ ದಂಪತಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 03, 2023 | 11:20 AM

Share

ಕೊಪ್ಪಳ, (ಅಕ್ಟೋಬರ್ 03): ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ (Couple) ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ಮೂಲತಃ ಕೊಪ್ಪಳದ (Koppal) ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತದಿಂದ (Heart Attack) ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ, ಇಂದು(ಮಂಗಳವಾರ) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಐದಾರು ಗಂಟೆಗಳ ಅಂತರದಲ್ಲಿ ವೃದ್ಧ ದಂಪತಿ ಸಾವಿನಲ್ಲಿ ಒಂದಾಗಿದೆ.

ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮಸ್ಥರಾಗಿರುವ ಮೃತ ದಂಪತಿ, ಪ್ರಸ್ತುತ ಅನ್ನದಾನೇಶ್ವರ ನಗರದಲ್ಲಿ ವಾಸವಾಗಿದ್ದರು. ಪತಿ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಸಹ ಮೃತಪಟ್ಟಿದ್ದು, ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ ಹಾಗೂ ಗೌರಮ್ಮ ಮೇಟಿ ಜೊತೆಯಾಗಿ ಕೈಲಾಸ ಸೇರಿದ್ದಾರೆ.

ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ  ನೀರವ ಮೌನ ಆವರಿಸಿದ್ದು, ಸ್ಥಳೀಯರು ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 3 October 23

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ