AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!

ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ(81) ಹಾಗೂ ಗೌರಮ್ಮ ಮೇಟಿ(65) ದಂಪತಿ ಜೊತೆಯಾಗಿ ಕೈಲಾಸ ಸೇರಿದ್ದಾರೆ. ಪತಿ ಹನುಮಂತಪ್ಪ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಗೌರಮ್ಮ ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!
ಸಾವಿನಲ್ಲೂ ಒಂದಾದ ದಂಪತಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:Oct 03, 2023 | 11:20 AM

ಕೊಪ್ಪಳ, (ಅಕ್ಟೋಬರ್ 03): ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ (Couple) ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ಮೂಲತಃ ಕೊಪ್ಪಳದ (Koppal) ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತದಿಂದ (Heart Attack) ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ, ಇಂದು(ಮಂಗಳವಾರ) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಐದಾರು ಗಂಟೆಗಳ ಅಂತರದಲ್ಲಿ ವೃದ್ಧ ದಂಪತಿ ಸಾವಿನಲ್ಲಿ ಒಂದಾಗಿದೆ.

ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮಸ್ಥರಾಗಿರುವ ಮೃತ ದಂಪತಿ, ಪ್ರಸ್ತುತ ಅನ್ನದಾನೇಶ್ವರ ನಗರದಲ್ಲಿ ವಾಸವಾಗಿದ್ದರು. ಪತಿ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಸಹ ಮೃತಪಟ್ಟಿದ್ದು, ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ ಹಾಗೂ ಗೌರಮ್ಮ ಮೇಟಿ ಜೊತೆಯಾಗಿ ಕೈಲಾಸ ಸೇರಿದ್ದಾರೆ.

ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ  ನೀರವ ಮೌನ ಆವರಿಸಿದ್ದು, ಸ್ಥಳೀಯರು ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 3 October 23

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು