AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!

ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ(81) ಹಾಗೂ ಗೌರಮ್ಮ ಮೇಟಿ(65) ದಂಪತಿ ಜೊತೆಯಾಗಿ ಕೈಲಾಸ ಸೇರಿದ್ದಾರೆ. ಪತಿ ಹನುಮಂತಪ್ಪ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಗೌರಮ್ಮ ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದೆ.

ಕೊಪ್ಪಳ: ಸಾವಿನಲ್ಲೂ ಒಂದಾದ ದಂಪತಿ, ಪತಿ ನಿಧನದ ಸುದ್ದಿ ತಿಳಿದು ಪತ್ನಿ ಸಾವು!
ಸಾವಿನಲ್ಲೂ ಒಂದಾದ ದಂಪತಿ
ದತ್ತಾತ್ರೇಯ ಪಾಟೀಲ್​
| Edited By: |

Updated on:Oct 03, 2023 | 11:20 AM

Share

ಕೊಪ್ಪಳ, (ಅಕ್ಟೋಬರ್ 03): ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ (Couple) ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ಮೂಲತಃ ಕೊಪ್ಪಳದ (Koppal) ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತದಿಂದ (Heart Attack) ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ, ಇಂದು(ಮಂಗಳವಾರ) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಐದಾರು ಗಂಟೆಗಳ ಅಂತರದಲ್ಲಿ ವೃದ್ಧ ದಂಪತಿ ಸಾವಿನಲ್ಲಿ ಒಂದಾಗಿದೆ.

ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮಸ್ಥರಾಗಿರುವ ಮೃತ ದಂಪತಿ, ಪ್ರಸ್ತುತ ಅನ್ನದಾನೇಶ್ವರ ನಗರದಲ್ಲಿ ವಾಸವಾಗಿದ್ದರು. ಪತಿ ನಿಧನದ ಕೆಲವೇ ಗಂಟೆಗಳಲ್ಲಿ ಪತ್ನಿ ಸಹ ಮೃತಪಟ್ಟಿದ್ದು, ಹಲವು ವರ್ಷಗಳ ಹಿಂದೆ ಕೈ ಹಿಡಿದು ಹಸೆಮಣೆ ತುಳಿದಿದ್ದ ಹನುಮಂತಪ್ಪ ಮೇಟಿ ಹಾಗೂ ಗೌರಮ್ಮ ಮೇಟಿ ಜೊತೆಯಾಗಿ ಕೈಲಾಸ ಸೇರಿದ್ದಾರೆ.

ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ  ನೀರವ ಮೌನ ಆವರಿಸಿದ್ದು, ಸ್ಥಳೀಯರು ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Tue, 3 October 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ