AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಜಲಾಶಯದ ಬಗ್ಗೆ ನಾಳೆ ಶುಭ ಸುದ್ದಿ ಕೊಡುತ್ತೇನೆ ಎಂದ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು

ಆಗಸ್ಟ್ 10 ರಂದು ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ ತುಂಗಭದ್ರಾ ಜಲಾಶಯದ ಹತ್ತೊಂಬತ್ತನೇ ಕ್ರಸ್ಟ್​ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಸದ್ಯ ಇದೀಗ ರಿಪೇರಿ ಕಾರ್ಯ ನಡೆಯುತ್ತಿದೆ. ನಾಳೆಯೊಳಗೆ ಗುಡ್ ನ್ಯೂಸ್ ಕೊಡ್ತೇನೆ. ಆಗ ಸೆಲೆಬ್ರೇಷನ್ ಮಾಡೋಣ ಎಂದು ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ ಬಗ್ಗೆ ನಾಳೆ ಶುಭ ಸುದ್ದಿ ಕೊಡುತ್ತೇನೆ ಎಂದ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು
ತುಂಗಭದ್ರಾ ಡ್ಯಾಂ
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 15, 2024 | 12:07 PM

Share

ಕೊಪ್ಪಳ, ಆಗಸ್ಟ್​.15: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿಕೊಂಡು ಹೋಗಿ ನಾಲ್ಕು ದಿನವಾಗಿದೆ. ಇದೀಗ ಹೊಸ ಗೇಟ್ ಅಳವಡಿಸಲು ಬೇಕಾದ ಎಲ್ಲಾ ಸಿದ್ದತೆ ಯುದ್ದೋಪಾದಿಯಲ್ಲಿ ನಡೆಯುತ್ತಿದೆ. ಸದ್ಯ ಈ ಬಗ್ಗೆ ಮಾತನಾಡಿರುವ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು (Kannaiah Naidu) ಅವರು ನಾಳೆ ಶುಭ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದ್​ನ ಟಿಬಿ ಡ್ಯಾಂ ಬಳಿ ತಜ್ಞ ಕನ್ನಯ್ಯ ನಾಯ್ಡು ಮಾತನಾಡಿದ್ದು, ಮೊದಲು ಕ್ರಸ್ಟ್​ ಗೇಟ್​​ ಕೂರಿಸೋದು ದೊಡ್ಡ ಚಾಲೇಂಜ್​​ ಇದೆ. 19ನೇ ಕ್ರಸ್ಟ್​​ ಗೇಟ್​ ಕೂರಿಸಿದ ನಂತರ ಅಷ್ಟೊಂದು ಕಷ್ಟ ಆಗಲ್ಲ. ನನ್ನ ಜೀವನದಲ್ಲಿ ಇದೊಂದು ದೊಡ್ಡ ಚಾಲೇಂಜ್. ಶ್ರೀಶೈಲ್​ ಡ್ಯಾಂ ಸಮಸ್ಯೆಗೂ ಈ ಡ್ಯಾಂ ಸಮಸ್ಯೆಗೂ ವ್ಯತ್ಯಾಸ ಇದೆ. ಗೇಟ್ ಕೂರಿಸುವ ವಿಡಿಯೋ ಮಾಡುವುದನ್ನ ಬೇಡ ಎಂದಿದ್ದೇನೆ. ಡ್ಯಾಂ ಸುತ್ತ 144 ಸೆಕ್ಸೆನ್ ಜಾರಿ ಮಾಡಲು ಮನವಿ ಮಾಡಿದ್ದೇನೆ. ಯಾವ ರಾಜಕಾರಣಿಗಳಿಗೂ ಎಂಟ್ರಿ ಕೊಡಬೇಡಿ ಎಂದಿದ್ದೇನೆ. ಇದೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡ್ತಿದ್ದೇವೆ. ಎಲ್ಲಾ ಒಳ್ಳೆಯದಾಗುತ್ತೆ, ನಾಳೆಯೊಳಗೆ ಗುಡ್ ನ್ಯೂಸ್ ಕೊಡ್ತೇನೆ. ಆಗ ಸೆಲೆಬ್ರೇಷನ್ ಮಾಡೋಣ ಎಂದು ತಿಳಿಸಿದರು.

ಇದನ್ನೂ ಓದಿ: ತುಂಗಭದ್ರಾ ಜಲಾಶಯದಲ್ಲಿ ಸ್ಟಾಪ್ ಗೇಟ್ ಅಳವಡಿಸುವ ಕಾರ್ಯ ಶನಿವಾರ ಮುಗಿಯಲಿದೆ: ಜಮೀರ್ ಅಹ್ಮದ್

ಒಟ್ಟು 5 ಸ್ಟಾಪ್ ಲಾಗ್ ಗೇಟ್‌ ಅಳವಡಿಕೆ ಕೆಲಸ ಆರಂಭ ಆಗಿದೆ. ಒಂದು ಸ್ಟಾಪ್ ಲಾಗ್ ಗೇಟ್ 25 TMC ನೀರನ್ನ ತಡೆಯುತ್ತದೆ. ಒಟ್ಟು 5 ಗೇಟ್‌ಗಳನ್ನ ಅಳವಡಿಕೆ ಮಾಡುತ್ತೇವೆ. ಅವಶ್ಯಕತೆ ಬಿದ್ದರೆ ಇನ್ನೂ 3 ಗೇಟ್​​​ ಅಳವಡಿಕೆ ಮಾಡುತ್ತೇವೆ. ಒಟ್ಟು 90 TMC ನೀರನ್ನ ಸಂಗ್ರಹ ಮಾಡಲು ಪ್ರಯತ್ನ ಮಾಡ್ತೇವೆ ಎಂದರು.

ತುಂಗಭದ್ರಾ ಜಲಾಶಯದ 19ನೇ ಗೇಟ್ ಕೂರಿಸುವ ಕಾರ್ಯ ಭರದಿಂದ ಸಾಗಿದೆ. ಆದರೆ ಗೇಟ್ ಲಾಗ್​ನ ಪ್ಲೇಟ್ ಗಳನ್ನ ಟ್ರಕ್ ನಿಂದ ಕ್ರೇನ್ ಮೂಲಕ ಕೆಳಗಿಳಿಸುವಾಗ ಬ್ಯಾಲೆನ್ಸ್ ತಪ್ಪಿದ ಘಟನೆ ನಡೆದಿದೆ. ಜಲಾಶಯದ ಮೇಲ್ಭಾಗಕ್ಕೆ ತೆಗೆದುಕೊಂಡು ಹೋಗುವ ಮುನ್ನ ಘಟನೆ ನಡೆದಿದೆ. ತದ ನಂತರ ಕ್ರೇನ್ ನಿಂದ ಬೆಲ್ಟ್ ಹಾಕಿ ನಿಧಾನಕ್ಕೆ ಕಬ್ಬಿಣದ ಪ್ಲೇಟ್ ಗಳನ್ನ ಸಾಗಿಸಲಾಯಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ