AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ದೇವದಾಸಿ ಪದ್ಧತಿ ಜೀವಂತ ಇದ್ದು, ದೇವದಾಸಿ ತಾಯಂದಿರಿಗೆ ನ್ಯಾಯ ಸಿಕ್ಕಿಲ್ಲ -ನಟ, ಹೋರಾಟಗಾರ ಚೇತನ್

ಅಲೆಮಾರಿ ಸಮುದಾಯಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ. ಅವರು ಗುಡಿಸಲು ಹಾಕಿಕೊಂಡಿರೋ ಜಾಗದಲ್ಲಿ ಬೀದಿ ದೀಪ ಕೂಡ ಇಲ್ಲ ಎಂದು ಸರ್ಕಾರದ ವಿರುದ್ಧ ನಟ ಚೇತನ್ ಆಕ್ರೋಶ.

ಕೊಪ್ಪಳದಲ್ಲಿ ದೇವದಾಸಿ ಪದ್ಧತಿ ಜೀವಂತ ಇದ್ದು, ದೇವದಾಸಿ ತಾಯಂದಿರಿಗೆ ನ್ಯಾಯ ಸಿಕ್ಕಿಲ್ಲ -ನಟ, ಹೋರಾಟಗಾರ ಚೇತನ್
ನಟ ಚೇತನ ಕುಮಾರ್​
TV9 Web
| Edited By: ಆಯೇಷಾ ಬಾನು|

Updated on:Jan 07, 2023 | 2:37 PM

Share

ಕೊಪ್ಪಳ: ಹಿಂದುತ್ವ, ಬ್ರಾಹ್ಮಣ್ಯ, ಸಂಸ್ಕೃತಿಯ ವಿಚಾರಗಳಿಗೆ ಸದಾ ಸುದ್ದಿಯಲ್ಲಿರುವ ನಟ, ಹೋರಾಟಗಾರ ಚೇತನ್ ಕೊಪ್ಪಳಕ್ಕೆ ಆಗಮಿಸಿದ್ದಾರೆ. ಕೊಪ್ಪಳದಲ್ಲಿ ಅಲೆಮಾರಿ ಸಮುದಾಯಕ್ಕೆ ಮಾಡಲಾಗಿರುವ ಅನ್ಯಾಯ, ದೇವದಾಸಿ ಪದ್ಧತಿ ವಿರುದ್ಧ ಧ್ವನಿ ಎತ್ತಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಅಲೆಮಾರಿಗಳಿಗೆ ಮನೆ ಸಿಕ್ಕಿಲ್ಲ. ದೇವದಾಸಿ ಪದ್ಧತಿ ಜೀವಂತ ಇದ್ದು, ದೇವದಾಸಿ ತಾಯಂದಿರಿಗೆ ನ್ಯಾಯ ಸಿಕ್ಕಿಲ್ಲ. ಅಲೆಮಾರಿ ಸಮುದಾಯಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ. ಅವರು ಗುಡಿಸಲು ಹಾಕಿಕೊಂಡಿರೋ ಜಾಗದಲ್ಲಿ ಬೀದಿ ದೀಪ ಕೂಡ ಇಲ್ಲ. ಡಿಜಿಟಲ್ ಇಂಡಿಯಾ, ಬುಲೆಟ್ ಟ್ರೆನ್ ಬಗ್ಗೆ ಮಾತನಾಡುವ ಸರ್ಕಾರ ಇವರ ಕಡೆ ನೋಡಬೇಕಿದೆ. ಹಗಲುವೇಷ, ಬುಡ್ಗ ಜಂಗಮರ ಸಾಂಸ್ಕೃತಿಕ ‌ಪ್ರಪಂಚಕ್ಕೆ ನಾವು ಬೆಲೆ ಕೊಡಬೇಕಿದೆ. ಅಲೆಮಾರಿಗಳನ್ನ ಅವೈಜ್ಞಾನಿಕವಾಗಿ ವಿಭಾಗ ಮಾಡಿದ್ದಾರೆ. ಈ ಎಲ್ಲ ಸಮಸ್ಯೆ ಪರಿಹಾರಕ್ಕೆ ಕುಷ್ಟಗಿ ಶಾಸಕರು, ಜಿಲ್ಲಾಡಳಿತಕ್ಕೆ ಮಾತಾಡಿದ್ದೇವೆ. ಇವರ ಪರ ಹೋರಾಟ ಮಾಡುವುದು ನನ್ನ ಕೊಪ್ಪಳ ಭೇಟಿ ಉದ್ದೇಶ ಎಂದು ನಟ, ಹೋರಾಟಗಾರ ಚೇತನ್ ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಸೋಲಿಸಲು ನಿರಾಣಿ ಕಳಿಸುವ ದುಡ್ಡು ತೆಗೆದುಕೊಂಡು ವಿಜಯಪುರದ ಮತದಾರ ನನಗೆ ವೋಟು ಹಾಕುತ್ತಾನೆ: ಬಸನಗೌಡ ಯತ್ನಾಳ್

ಕೊಪ್ಪಳ ಜಿಲ್ಲೆಯ ವಿವಿಧ ಕಡೆ ಅಲೆಮಾರಿ ಸಮುದಾಯ ಬದುಕುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ ಇರುವುದು ಬೇಸರದ ಸಂಗತಿ. ಇತ್ತೀಚೆಗೆ ಇಲ್ಲಿ ದೇವದಾಸಿಗೆ ಬಿಡಲಾಗಿದೆ. ಇದು ಸರಿಯಲ್ಲ. 2018‌ ದೇವದಾಸಿ ಪುನರ್‌ ‌ವಸತಿ ಕಾಯ್ದೆ ಜಾರಿ ಆಗಬೇಕಿದೆ. ದೇವದಾಸಿಯ ಮಕ್ಕಳಿಗೆ ಸೌಲಭ್ಯ ಕೊಡಬೇಕಿದೆ. ದೇವದಾಸಿಯರ ಅಭಿವೃದ್ಧಿಗೆ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. ಈ ಬಗ್ಗೆ ಕೋಟಾ ಶ್ರೀನಿವಾಸ ಪೂಜಾರ, ಹಾಲಪ್ಪ ಆಚಾರಿಗೆ ಮಾತನಾಡಿದ್ದೇನೆ. ಅಲೆಮಾರಿ, ದೇವದಾಸಿ ಮುಕ್ತ ಕರ್ನಾಟಕಕ್ಕೆ ಹೋರಾಟ ಮಾಡುತ್ತೇವೆ. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್- ಬಿಜೆಪಿ ಸಮಾನ ತಪ್ಪು ಮಾಡಿದ್ದಾರೆ‌. ಎರಡೂ ಪಕ್ಷಗಳು ಮೀಸಲಾತಿ ಸಮಾನವಾಗಿ ಹಂಚಿಕೆ ಮಾಡಿಲ್ಲ ಎಂದು ಸರ್ಕಾರಗಳ ವಿರುದ್ಧ ಚೇತನ್ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:37 pm, Sat, 7 January 23

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ