AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಸಿದ್ದೇಶ್ವರ ಜಾತ್ರೆಗೆ ಹಳ್ಳಿ ಜನತೆಯಿಂದ ತಯಾರಾಗ್ತಿವೆ ಲಕ್ಷಾಂತರ ರೊಟ್ಟಿ

ಕೊಪ್ಪಳ: ದಕ್ಷಿಣ ಭಾರತ ಮಹಾ ಕುಂಬಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಈಗ ಕ್ಷಣ ಗಣನೇ ಆರಂಭವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆಗಾಗಿ ಕೊಪ್ಪಳ ಜಿಲ್ಲೆಯ ಹಳ್ಳಿಯ ಜನತೆ ರೊಟ್ಟಿ ತಯಾರಿಯಲ್ಲಿ ತೊಡಗಿದ್ದಾರೆ. ಎಲ್ಲಿ ನೋಡಿದ್ರೂ ಪಟಪಟ..ಪಟಪಟ ಅನ್ನೋ ಶಬ್ದ. ಎಲ್ಲಿ ನೋಡಿದ್ರೂ ಹೆಂಗಳೆಯರು. ಕೆಲವರು ರೊಟ್ಟಿ ಬಡಿಯುತ್ತಿದ್ರೆ, ಹಲವರು ರೊಟ್ಟಿ ಬೇಯಿಸುತ್ತಿದ್ದಾರೆ. ನೂರಾರು ಮಹಿಳೆಯರು ಒಂದೆಡೆ ಸೇರಿ ಸಾಮೂಹಿಕವಾಗಿ ರೊಟ್ಟಿ ತಯಾರಿಸೋ ದೃಶ್ಯ ಕಣ್ಣಿಗೆ ಹಬ್ಬ ಉಂಟುಮಾಡುತ್ತೆ. ಅಷ್ಟಕ್ಕೂ ಇದು ಅಜ್ಜನ […]

ಗವಿಸಿದ್ದೇಶ್ವರ ಜಾತ್ರೆಗೆ ಹಳ್ಳಿ ಜನತೆಯಿಂದ ತಯಾರಾಗ್ತಿವೆ ಲಕ್ಷಾಂತರ ರೊಟ್ಟಿ
ಸಾಧು ಶ್ರೀನಾಥ್​
|

Updated on:Jan 07, 2020 | 12:31 PM

Share

ಕೊಪ್ಪಳ: ದಕ್ಷಿಣ ಭಾರತ ಮಹಾ ಕುಂಬಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಈಗ ಕ್ಷಣ ಗಣನೇ ಆರಂಭವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆಗಾಗಿ ಕೊಪ್ಪಳ ಜಿಲ್ಲೆಯ ಹಳ್ಳಿಯ ಜನತೆ ರೊಟ್ಟಿ ತಯಾರಿಯಲ್ಲಿ ತೊಡಗಿದ್ದಾರೆ.

ಎಲ್ಲಿ ನೋಡಿದ್ರೂ ಪಟಪಟ..ಪಟಪಟ ಅನ್ನೋ ಶಬ್ದ. ಎಲ್ಲಿ ನೋಡಿದ್ರೂ ಹೆಂಗಳೆಯರು. ಕೆಲವರು ರೊಟ್ಟಿ ಬಡಿಯುತ್ತಿದ್ರೆ, ಹಲವರು ರೊಟ್ಟಿ ಬೇಯಿಸುತ್ತಿದ್ದಾರೆ. ನೂರಾರು ಮಹಿಳೆಯರು ಒಂದೆಡೆ ಸೇರಿ ಸಾಮೂಹಿಕವಾಗಿ ರೊಟ್ಟಿ ತಯಾರಿಸೋ ದೃಶ್ಯ ಕಣ್ಣಿಗೆ ಹಬ್ಬ ಉಂಟುಮಾಡುತ್ತೆ. ಅಷ್ಟಕ್ಕೂ ಇದು ಅಜ್ಜನ ಜಾತ್ರೆಗೆ ನಡೆದಿರೋ ತಯಾರಿ. ದಕ್ಷಿಣ ಭಾರತದ ಕುಂಭಮೇಳದ ತಯಾರಿ. ಜಾತ್ರೆಗೆ ಬರೋ ಭಕ್ತಾಧಿಗಳಿಗಾಗಿ ನಡೆದಿರೋ ತಯಾರಿ.

ದಕ್ಷಿಣ ಭಾರತದ ಕುಂಭಮೇಳ ಅಂತಾನೆ ಪ್ರಖ್ಯಾತಿ ಪಡೆದಿರೋ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಇದೇ ಜನವರಿ 12 ರಂದು ಗವಿಸಿದ್ದೇಶ್ವರ ರಥೋತ್ಸವ ನಡೆಯಲಿದೆ. ಅಂದು ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ. ಈ ಜಾತ್ರೆಯ ವಿಶೇಷ ಅಂದ್ರೆ ಅಂದು ಆಗಮಿಸಿದ ಭಕ್ತರಿಗೆಲ್ಲಾ ರೊಟ್ಟಿ ಊಟ ಇರುತ್ತೆ. ಹೀಗಾಗಿ ಕೊಪ್ಪಳ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲೂ ರೊಟ್ಟಿ ತಯಾರಿ ಜೋರಾಗಿ ನಡೆದಿದೆ. ಅದ್ರಲ್ಲೂ ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮವೊಂದರಲ್ಲೇ ಬರೋಬ್ಬರಿ ಎರಡು ಕ್ವಿಂಟಾಲ್‌ ಜೋಳದ ಹಿಟ್ಟಿನಿಂದ ರೊಟ್ಟಿ ತಯಾರಿಸಲಾಗ್ತಿದೆ.

ಇನ್ನು ಹಟ್ಟಿ ಗ್ರಾಮದ ಮಹಿಳೆಯರು, ಮಕ್ಕಳು ಒಂದೆಡೆ ಸೇರಿ ರೊಟ್ಟಿ ತಯಾರಿಸ್ತಿರೋ ವಿಷ್ಯ ಕಿವಿಗೆ ಬೀಳ್ತಿದ್ದಂತೆ ಗವಿಸಿದ್ದೇಶ್ವರ ಮಠದ ಶ್ರೀಗಳೇ ಗ್ರಾಮಕ್ಕೆ ಆಗಮಿಸಿದ್ದರು. ಗ್ರಾಮದ ಮಹಿಳೆಯರು ಮಕ್ಕಳ ಸೇವೆಯನ್ನು ನೋಡಿ ಆಶೀರ್ವದಿಸಿದ್ರು. ಅಷ್ಟಕ್ಕೂ ಹಟ್ಟಿ ಗ್ರಾಮದ ಜನ ಒಟ್ಟಾಗಿ ಪ್ರತಿ ವರ್ಷವೂ ಈ ರೀತಿ ರೊಟ್ಟಿ ತಯಾರಿಸಿ ಜಾತ್ರೆಗೂ ಮುನ್ನ ಶ್ರೀಮಠಕ್ಕೆ ಒಪ್ಪಿಸಿ ಬರ್ತಾರೆ.

ಒಟ್ನಲ್ಲಿ ಉತ್ತರ ಕರ್ನಾಟಕ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರೋ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗ ಇನ್ನೊಂದೇವಾರ ಬಾಕಿ ಉಳಿದಿದೆ. ಜಾತ್ರೆಗಾಗಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಜೋರಾಗಿದ್ದು, ಹಳ್ಳಿ ಹಳ್ಳಿಗಳಲ್ಲೂ ಲಕ್ಷಂತಾರ ರೊಟ್ಟಿ ತಯಾರಾಗ್ತಿವೆ.

Published On - 12:12 pm, Tue, 7 January 20

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ