AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯ ಜನ್ಮಸ್ಥಳ ವಿವಾದ; ಮಹಾರಾಷ್ಟ್ರದ ನಾಸಿಕ್​​ನಲ್ಲಿ ಧರ್ಮ‌ ಸಂಸದ್ ಸಭೆ ಆರಂಭ; ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ಪೊಲೀಸರ ನೋಟಿಸ್

ಆಂಜನೇಯ ಜನ್ಮಸ್ಥಳ ವಿವಾದ ಹಿನ್ನೆಲೆ ಮಹಾರಾಷ್ಟ್ರದ ನಾಸಿಕ್​​ನ ಅಂಜನೇರಿ ಗ್ರಾಮದಲ್ಲಿ ಧರ್ಮ‌ ಸಂಸದ್ ಸಭೆ ಆರಂಭವಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಸಭೆ ನಡೆಯಲಿದೆ. ಸಭೆಯಲ್ಲಿ ಸನ್ಯಾಸಿಗಳು, ಧಾರ್ಮಿಕ ಮುಖಂಡರು ಭಾಗಿಯಾಗಿದ್ದಾರೆ.

ಆಂಜನೇಯ ಜನ್ಮಸ್ಥಳ ವಿವಾದ; ಮಹಾರಾಷ್ಟ್ರದ ನಾಸಿಕ್​​ನಲ್ಲಿ ಧರ್ಮ‌ ಸಂಸದ್ ಸಭೆ ಆರಂಭ; ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ಪೊಲೀಸರ ನೋಟಿಸ್
ಅಂಜನಾದ್ರಿ ಬೆಟ್ಟ
TV9 Web
| Edited By: |

Updated on: May 31, 2022 | 10:41 AM

Share

ಕೊಪ್ಪಳ:  ಆಂಜನೇಯ (Anjaneya) ಜನ್ಮಸ್ಥಳ ವಿವಾದ ಹಿನ್ನೆಲೆ ಮಹಾರಾಷ್ಟ್ರದ (Mharashtra) ನಾಸಿಕ್​​ನ (Nasik) ಅಂಜನೇರಿ ಗ್ರಾಮದಲ್ಲಿ ಧರ್ಮ‌ ಸಂಸದ್ ಸಭೆ ಆರಂಭವಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಸಭೆ ನಡೆಯಲಿದೆ. ಸಭೆಯಲ್ಲಿ ಸನ್ಯಾಸಿಗಳು, ಧಾರ್ಮಿಕ ಮುಖಂಡರು ಭಾಗಿಯಾಗಿದ್ದಾರೆ. ಆಂಜನೇಯ ಹುಟ್ಟಿರುವುದು ಕರ್ನಾಟಕದಲ್ಲಿಯೇ ಎಂದು ಧರ್ಮ‌ ಸಂಸದ್​ ಸಭೆಯಲ್ಲಿ ಘೋಷಣೆ ಮಾಡಿದ್ದೇವೆ ಎಂದು ಟಿವಿ9ಗೆ ಗೋವಿಂದಾನಂದ ಸರಸ್ವತಿ ಶ್ರೀಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ರಾಷ್ಟ್ರಕವಿ ಕುವೆಂಪು ಬಳಿಕ ಬಸವಣ್ಣ ಬಸವಣ್ಣನ ಪಠ್ಯ ಪರಿಷ್ಕರಣೆಯ ಚರ್ಚೆ ಆರಂಭ; ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹನುಮ ಜನ್ಮಸ್ಥಳ ಯಾವದು? ಕರ್ನಾಟಕದ ಕೊಪ್ಪಳದ ಆಂಜನಾದ್ರಿ ಬೆಟ್ಟವಾ?  ಮಹಾರಾಷ್ಟ್ರ ದ ನಾಶಿಕ್ ದಲ್ಲಿ ಹುಟ್ಟಿರೋದಾ ? ಅಥವಾ ಆಂದ್ರಪ್ರದೇಶದ ತಿರುಪತಿ ಬೆಟ್ಟವಾ ಅನ್ನೋ ಬಗ್ಗೆ ಧರ್ಮ ಸಭೆಯಲ್ಲಿ ಚರ್ಚೆಯಾಗಲಿದೆ. ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಪ್ರಮುಖ ರಾಜ್ಯಗಳ 25 ಸಂತರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಕರ್ನಾಟಕದಿಂದ ಗೋವಿಂದ್ ಆನಂದ ಶ್ರೀ ಭಾಗಿಯಾಗಿದ್ದಾರೆ. ಗೋವಿಂದ್ ಆನಂದ್, ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ.

ಇದನ್ನು ಓದಿ: ಮಂದಿರ ವರ್ಸಸ್​ ಮಸೀದಿ ವಿವಾದ: ಶಾಸಕ ಅಭಯ್‌ ಪಾಟೀಲ್ ವಿರುದ್ಧ ಮಾಜಿ ಶಾಸಕ ಫಿರೋಜ್ ಸೇಠ್​ ವಾಗ್ದಾಳಿ

ಇವರಿಗೆ ಮಹಾರಾಷ್ಟ್ರ ಪೊಲೀಸ್ ನೋಟೀಸ್ ನೀಡಿದ್ದಾರೆ. ಸ್ವಾಮೀಜಿ ಅವರಿಗೆ ನಾಸಿಕನ ತ್ರೈಂಬಕೇಶ್ವರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ಅಂಜನೇರಿ ಗ್ರಾಮಸ್ಥರ ಅರ್ಜಿ ಆಧರಿಸಿ ನೋಟೀಸ್ ನೀಡಲಾಗಿದೆ. ಅಂಜನೇರಿ ಹನುಮಾನ್ ಜನ್ಮಸ್ಥಳದ ಬಗ್ಗೆ ನೀವು ಅಪಪ್ರಚಾರ ಮಾಡಿದ್ದಿರಿ. ಇದು ಅಂಜನೇರಿ ಗ್ರಾಮಸ್ಥರ ಭಾವನೆಗೆ ಧಕ್ಕೆ ತಂದಿದೆ. ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ. ನಿನ್ನೆ ಶ್ರೀಗಳನ್ನು ತ್ರೈಂಬಕೇಶ್ವರ ಪೊಲೀಸ್ ‌ಠಾಣೆಗೆ ಪೊಲೀಸರು ಕರೆಯಿಸಿಕೊಂಡಿದ್ದರು. ಗೋವಿಂದ ನಂದ ಸ್ವಾಮೀಜಿ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಖಚಿತ ತ್ರೈಂಬಕೇಶ್ವರ‌ ಪೊಲೀಸರು ಪಡಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು