AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯ ಜನ್ಮಸ್ಥಳ ವಿವಾದ; ಮಹಾರಾಷ್ಟ್ರದ ನಾಸಿಕ್​​ನಲ್ಲಿ ಧರ್ಮ‌ ಸಂಸದ್ ಸಭೆ ಆರಂಭ; ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ಪೊಲೀಸರ ನೋಟಿಸ್

ಆಂಜನೇಯ ಜನ್ಮಸ್ಥಳ ವಿವಾದ ಹಿನ್ನೆಲೆ ಮಹಾರಾಷ್ಟ್ರದ ನಾಸಿಕ್​​ನ ಅಂಜನೇರಿ ಗ್ರಾಮದಲ್ಲಿ ಧರ್ಮ‌ ಸಂಸದ್ ಸಭೆ ಆರಂಭವಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಸಭೆ ನಡೆಯಲಿದೆ. ಸಭೆಯಲ್ಲಿ ಸನ್ಯಾಸಿಗಳು, ಧಾರ್ಮಿಕ ಮುಖಂಡರು ಭಾಗಿಯಾಗಿದ್ದಾರೆ.

ಆಂಜನೇಯ ಜನ್ಮಸ್ಥಳ ವಿವಾದ; ಮಹಾರಾಷ್ಟ್ರದ ನಾಸಿಕ್​​ನಲ್ಲಿ ಧರ್ಮ‌ ಸಂಸದ್ ಸಭೆ ಆರಂಭ; ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಿಗೆ ಪೊಲೀಸರ ನೋಟಿಸ್
ಅಂಜನಾದ್ರಿ ಬೆಟ್ಟ
TV9 Web
| Edited By: ವಿವೇಕ ಬಿರಾದಾರ|

Updated on: May 31, 2022 | 10:41 AM

Share

ಕೊಪ್ಪಳ:  ಆಂಜನೇಯ (Anjaneya) ಜನ್ಮಸ್ಥಳ ವಿವಾದ ಹಿನ್ನೆಲೆ ಮಹಾರಾಷ್ಟ್ರದ (Mharashtra) ನಾಸಿಕ್​​ನ (Nasik) ಅಂಜನೇರಿ ಗ್ರಾಮದಲ್ಲಿ ಧರ್ಮ‌ ಸಂಸದ್ ಸಭೆ ಆರಂಭವಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಸಭೆ ನಡೆಯಲಿದೆ. ಸಭೆಯಲ್ಲಿ ಸನ್ಯಾಸಿಗಳು, ಧಾರ್ಮಿಕ ಮುಖಂಡರು ಭಾಗಿಯಾಗಿದ್ದಾರೆ. ಆಂಜನೇಯ ಹುಟ್ಟಿರುವುದು ಕರ್ನಾಟಕದಲ್ಲಿಯೇ ಎಂದು ಧರ್ಮ‌ ಸಂಸದ್​ ಸಭೆಯಲ್ಲಿ ಘೋಷಣೆ ಮಾಡಿದ್ದೇವೆ ಎಂದು ಟಿವಿ9ಗೆ ಗೋವಿಂದಾನಂದ ಸರಸ್ವತಿ ಶ್ರೀಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ರಾಷ್ಟ್ರಕವಿ ಕುವೆಂಪು ಬಳಿಕ ಬಸವಣ್ಣ ಬಸವಣ್ಣನ ಪಠ್ಯ ಪರಿಷ್ಕರಣೆಯ ಚರ್ಚೆ ಆರಂಭ; ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹನುಮ ಜನ್ಮಸ್ಥಳ ಯಾವದು? ಕರ್ನಾಟಕದ ಕೊಪ್ಪಳದ ಆಂಜನಾದ್ರಿ ಬೆಟ್ಟವಾ?  ಮಹಾರಾಷ್ಟ್ರ ದ ನಾಶಿಕ್ ದಲ್ಲಿ ಹುಟ್ಟಿರೋದಾ ? ಅಥವಾ ಆಂದ್ರಪ್ರದೇಶದ ತಿರುಪತಿ ಬೆಟ್ಟವಾ ಅನ್ನೋ ಬಗ್ಗೆ ಧರ್ಮ ಸಭೆಯಲ್ಲಿ ಚರ್ಚೆಯಾಗಲಿದೆ. ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಪ್ರಮುಖ ರಾಜ್ಯಗಳ 25 ಸಂತರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಕರ್ನಾಟಕದಿಂದ ಗೋವಿಂದ್ ಆನಂದ ಶ್ರೀ ಭಾಗಿಯಾಗಿದ್ದಾರೆ. ಗೋವಿಂದ್ ಆನಂದ್, ಹನುಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ.

ಇದನ್ನು ಓದಿ: ಮಂದಿರ ವರ್ಸಸ್​ ಮಸೀದಿ ವಿವಾದ: ಶಾಸಕ ಅಭಯ್‌ ಪಾಟೀಲ್ ವಿರುದ್ಧ ಮಾಜಿ ಶಾಸಕ ಫಿರೋಜ್ ಸೇಠ್​ ವಾಗ್ದಾಳಿ

ಇವರಿಗೆ ಮಹಾರಾಷ್ಟ್ರ ಪೊಲೀಸ್ ನೋಟೀಸ್ ನೀಡಿದ್ದಾರೆ. ಸ್ವಾಮೀಜಿ ಅವರಿಗೆ ನಾಸಿಕನ ತ್ರೈಂಬಕೇಶ್ವರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ಅಂಜನೇರಿ ಗ್ರಾಮಸ್ಥರ ಅರ್ಜಿ ಆಧರಿಸಿ ನೋಟೀಸ್ ನೀಡಲಾಗಿದೆ. ಅಂಜನೇರಿ ಹನುಮಾನ್ ಜನ್ಮಸ್ಥಳದ ಬಗ್ಗೆ ನೀವು ಅಪಪ್ರಚಾರ ಮಾಡಿದ್ದಿರಿ. ಇದು ಅಂಜನೇರಿ ಗ್ರಾಮಸ್ಥರ ಭಾವನೆಗೆ ಧಕ್ಕೆ ತಂದಿದೆ. ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ. ನಿನ್ನೆ ಶ್ರೀಗಳನ್ನು ತ್ರೈಂಬಕೇಶ್ವರ ಪೊಲೀಸ್ ‌ಠಾಣೆಗೆ ಪೊಲೀಸರು ಕರೆಯಿಸಿಕೊಂಡಿದ್ದರು. ಗೋವಿಂದ ನಂದ ಸ್ವಾಮೀಜಿ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಖಚಿತ ತ್ರೈಂಬಕೇಶ್ವರ‌ ಪೊಲೀಸರು ಪಡಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್