AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ನಿರ್ಧಾರ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್‌; ನವವೃಂದಾವನ ಗಡ್ಡೆ ರಾಯರ ಮಠಕ್ಕೆ ಹಿನ್ನಡೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿ ಸಮೀಪದ ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ತಾಲೂಕಾ ಆಡಳಿತ 144 ಸೆಕ್ಷನ್ ಜಾರಿ ಮಾಡಿರುವುದನ್ನು, ಪ್ರಶ್ನಿಸಿ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದ ರಾಯರ ಮಠಕ್ಕೆ ಹಿನ್ನಡೆಯಾಗಿದೆ.

ಜಿಲ್ಲಾಡಳಿತ ನಿರ್ಧಾರ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್‌; ನವವೃಂದಾವನ ಗಡ್ಡೆ ರಾಯರ ಮಠಕ್ಕೆ ಹಿನ್ನಡೆ
ಧಾರವಾಡ ಹೈಕೋರ್ಟ್
TV9 Web
| Edited By: |

Updated on:Jul 15, 2022 | 9:55 PM

Share

ಧಾರವಾಡ: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಹಂಪಿ (Hampi) ಸಮೀಪದ ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ತಾಲೂಕಾ ಆಡಳಿತ 144 ಸೆಕ್ಷನ್ ಜಾರಿ ಮಾಡಿರುವುದನ್ನು, ಪ್ರಶ್ನಿಸಿ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದ ರಾಯರ ಮಠಕ್ಕೆ ಹಿನ್ನಡೆಯಾಗಿದೆ. ಒಂದೇ ವೃಂದಾವನಕ್ಕೆ ರಘುವರ್ಯತೀರ್ಥಯತಿಗಳ ಹಾಗೂ ಜಯತೀರ್ಥಯತಿಗಳ  ನಾಮಫಲಕ ಅಳವಡಿಸಿಲಾಗಿತ್ತು. ಈ ಸಂಬಂಧ ಉತ್ತರಾದಿ ಮಠ ಮತ್ತು ರಾಯರ ಮಠದ ನಡುವೆ ವಿವಾದ ಸೃಷ್ಟಿಯಾಗಿತ್ತು.

ಈ ಮಧ್ಯೆ ರಘುವರ್ಯತೀರ್ಥರ ಆರಾಧನೆ ಹಾಗೂ ಜಯತೀರ್ಥರ ಆರಾಧನೆ ವಿಚಾರವಾಗಿ ಉತ್ತರಾದಿ ಮಠ ಮತ್ತು ರಾಯರ ಮಠದ ನಡುವೆ ವಿವಾದ ಉಂಟಾಗಿತ್ತು. ಜಯತೀರ್ಥರ ಆರಾಧನೆ ಮಾಡೋದಾಗಿ ರಾಯರ ಮಠ ವಾದ ಮಾಡಿದರೇ, ರಘುವರ್ಯತೀರ್ಥರ ಆರಾಧನೆಗೆ ಉತ್ತರಾದಿ ಮಠ ಪಟ್ಟು ಹಿಡದಿತ್ತು.

ಹೀಗಾಗಿ ಆರಾಧನೆಗೆ ಅವಕಾಶ ನೀಡಬೇಕು ಎಂದು ಎರಡೂ ಮಠಗಳ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ಉಪವಿಭಾಗಾಧಿಕಾರಿ ನೇತೃತ್ವದ ಸಭೆಯಲ್ಲಿ ಎರಡೂ ಮಠಗಳ ಪ್ರತಿನಿಧಿಗಳು ಒಮ್ಮತಕ್ಕೆ ಬರಲಿಲ್ಲ. ಹೀಗಾಗಿ ಜಿಲ್ಲಾಡಳಿತವು ನವಬೃಂದಾವನ ಗಡ್ಡೆಯಲ್ಲಿ ಆರಾಧನೆಗೆ ನಿರ್ಬಂಧ ವಿಧಿಸುವ ತೀರ್ಮಾನ ತೆಗೆದುಕೊಂಡಿತು.

ಹೀಗಾಗಿ ಜುಲೈ 13 ರಿಂದ 21 ರ ವರೆಗೂ 144 ಸೆಕ್ಷನ್ ಜಾರಿ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಈ ಸಂಬಂಧ ರಾಯರ ಮಠ 144 ಸೆಕ್ಷನ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಜಯತೀರ್ಥರ ಆರಾಧನೆಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡಿತ್ತು. ಆದರೆ ಹೈಕೋರ್ಟ್​​ ಜಿಲ್ಲಾಡಳಿತದ ನಿರ್ಧಾರವನ್ನು ಎತ್ತಿ ಹಿಡಿಯುವ ಮೂಲಕ ರಾಯರ ಮಠದ ಅರ್ಜಿಯನ್ನು ವಜಾಗೊಳಿಸಿದೆ. ರಾಯರ ಮಠಕ್ಕೆ ಹೈಕೋರ್ಟ್​ನಲ್ಲಿ ಹಿನ್ನೆಡೆಯಾಗಿದೆ.

Published On - 9:54 pm, Fri, 15 July 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ