AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ; ಚೀಟಿ ಮಾಡಿಸಲಿಕ್ಕೆ ಗಂಟೆಗಟ್ಟಲೆ ಕಾಯಬೇಕಾದ ದುಸ್ಥಿತಿ

ಹೆಚ್ಚಿನ ಬಡಜನರು ಅವಲಂಭಿಸಿರುವುದು ಸರ್ಕಾರಿ ಆಸ್ಪತ್ರೆಯನ್ನೇ, ಅದರಂತೆ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಪ್ರತಿನಿತ್ಯ ಮೂರು ಜಿಲ್ಲೆಯ ವಿವಿಧ ಭಾಗಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಬರ್ತಾರೆ. ಹಳ್ಳಿಯಿಂದ ಗಂಟೆಗಟ್ಟಲೆ ಪ್ರಯಾಣ ಮಾಡಿ ಬರವ ರೋಗಿಗಳಿಗೆ ಆಸ್ಪತ್ರೆಗೆ ಬಂದ್ರು ಕೂಡ ಮತ್ತೆ ಗಂಟೆಗಟ್ಟಲೆ ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ; ಚೀಟಿ ಮಾಡಿಸಲಿಕ್ಕೆ ಗಂಟೆಗಟ್ಟಲೆ ಕಾಯಬೇಕಾದ ದುಸ್ಥಿತಿ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 21, 2024 | 6:00 PM

Share

ಕೊಪ್ಪಳ, ಫೆ.21: ಕೊಪ್ಪಳ ಜಿಲ್ಲಾ ಆಸ್ಪತ್ರೆ(Koppal District Hospital) ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ದೊಡ್ಡ ಆಸ್ಪತ್ರೆ. ಕೊಪ್ಪಳ ವೈದ್ಯಕೀಯ ಕಾಲೇಜಿನ ಅಧೀನದಲ್ಲಿರುವ ಈ ಆಸ್ಪತ್ರೆಗೆ ಕೊಪ್ಪಳ ಜಿಲ್ಲೆ ಮಾತ್ರವಲ್ಲ, ಸುತ್ತಮುತ್ತಲಿನ ವಿಜಯನಗರ, ರಾಯಚೂರು ಜಿಲ್ಲೆಯ ಅನೇಕ ತಾಲೂಕಿನಿಂದಲೂ ಪ್ರತಿನಿತ್ಯ ನೂರಾರು ರೋಗಿಗಳು ಬರುತ್ತಾರೆ. ಬೇರೆ ಆಸ್ಪತ್ರೆಗೆ ಹೋಲಿಸಿದರೆ ಇಲ್ಲಿ ತಕ್ಕಮಟ್ಟಿನ ಉತ್ತಮ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಹೆಚ್ಚಿನ ರೋಗಿಗಳು ತಮ್ಮ ಅನೇಕ ಖಾಯಿಲೆಗಳ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಬರುತ್ತಾರೆ. ಸಾರಿಗೆ ಸಂಪರ್ಕ ಸರಿಯಿಲ್ಲದೇ ಇದ್ದರೂ ಕೂಡ ಕಷ್ಟಪಟ್ಟು ಚಿಕಿತ್ಸೆಗಾಗಿ ಬರುತ್ತಾರೆ. ಆದ್ರೆ, ಇಲ್ಲಿ ಬಂದ ಮೇಲೆ ಮತ್ತೆ ಚಿಕಿತ್ಸೆ ಪಡೆಯಲು ಕಷ್ಟಪಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚೀಟಿ ಮಾಡಿಸಲಿಕ್ಕೆ ಗಂಟೆಗಟ್ಟಲೆ ಕಾಯಬೇಕಾದ ದುಸ್ಥಿತಿ

ಚಿಕಿತ್ಸೆ ಪಡೆಯಬೇಕಾದ್ರೆ ಹೋರ ರೋಗಿಗಳ ಚೀಟಿಯನ್ನು ಮಾಡಿಸಬೇಕು. ಇದು ನಿಯಮ ಕೂಡ ಹೌದು. ಇಲ್ಲಿ ಹೆಸರು ನೊಂದಾಯಿಸಿ, ಚೀಟಿ ನೀಡಿದ ಮೇಲೆ ಯಾವ,ಸಮಸ್ಯೆಯಿದೆ, ಯಾವ ವೈದ್ಯರ ಬಳಿ ಹೋಗಬೇಕು ಎನ್ನುವುದನ್ನು ಚೀಟಿ ನೀಡಿದ ಸಿಬ್ಬಂದಿ ಹೇಳುತ್ತಾರೆ. ಆದ್ರೆ, ಈ ಚೀಟಿಯನ್ನು ಮಾಡಿಸಲಿಕ್ಕೇನೆ ರೋಗಿಗಳು ಪರದಾಡಬೇಕಾಗಿದೆ. ಒಬ್ಬಬ್ಬರೂ ಚೀಟಿ ಮಾಡಿಸಲು ಒಂದರಿಂದ ಒಂದುವರೆ ಗಂಟೆ ಕಾಯಬೇಕಾಗಿದೆ. ಮುಂಜಾನೆ ಹತ್ತರಿಂದ ಮಧ್ಯಾಹ್ನ ಒಂದು ಗಂಟೆವರೆಗೆ ವೈದ್ಯರು ಇರುತ್ತಾರೆ. ಆದ್ರೆ, ಬಹುತೇಕರಿಗೆ ಚೀಟಿ ಸಿಗುವ ಹೊತ್ತಿಗೆ, ವೈದ್ಯರು ಊಟಕ್ಕೆ ಹೋಗಿರ್ತಾರೆ. ಮತ್ತೆ ಅವರು ಸಂಜೆ ಬರೋವರೆಗೂ ಕಾಯಬೇಕು. ಸಂಜೆ ಚಿಕಿತ್ಸೆ ಪಡೆದು ಊರಿಗೆ ಹೋಗಲು ಮತ್ತೆ ಬಸ್​ಗಳಿಗಾಗಿ ಜನರು ಪರದಾಡಬೇಕಾಗುತ್ತದೆ. ಹೀಗಾಗಿ ಬೇಗನೆ ಚೀಟಿ ಸಿಕ್ಕರೆ, ಬೇಗನೆ ಚಿಕಿತ್ಸೆ ಸಿಗುತ್ತದೆ ಎನ್ನುತ್ತಾರೆ ರೋಗಿಗಳು.

ಇದನ್ನೂ ಓದಿ:ಕೊಪ್ಪಳ ಜಿಲ್ಲೆಯ ಜನರಿಗೆ ಸಿಹಿ-ಕಹಿ ಬಜೆಟ್: ಅಂಜನಾದ್ರಿಗೆ 100 ಕೋಟಿ, ಆರ್ಥಿಕ ಸಲಹೆಗಾರನ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಹೆಚ್ಚಿನ ಕೌಂಟರ್ ಆರಂಭಕ್ಕೆ ಹೆಚ್ಚಾದ ಆಗ್ರಹ

ಇನ್ನು ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಓಪಿಡಿಗಳು ಆಗುತ್ತದೆ. ಹೀಗಾಗಿ ಐದರಿಂದ ಆರು ಕೌಂಟರ್ ಆರಂಭಿಸಬೇಕು. ಕೌಂಟರ್ ಹೆಚ್ಚಾದ್ರೆ ಸುಲಭವಾಗಿ ಮತ್ತು ಬೇಗನೆ ರೋಗಿಗಳು ಓಪಿಡಿ ಚೀಟಿ ಮಾಡಿಸಿಕೊಂಡು ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಆಸ್ಪತ್ರೆಗೆ ಬಂದಿದ್ದ ರೋಗಿಯ ಸಂಬಂಧಿ ಯಮನೂರಪ್ಪ ಎಂಬುವವರು ಮನವಿ ಮಾಡಿದ್ದಾರೆ. ಆದ್ರೆ, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಬರುವ ಎಲ್ಲರಿಗೂ ಚೀಟಿ ನೀಡಲು ಇರುವುದು ಕೇವಲ ಮೂರೇ ಕೌಂಟರ್​ಗಳು ಮಾತ್ರ. ಇನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚೀಟಿ ಮತ್ತು ಬಿಲ್ಲಿಂಗ್​ಗಾಗಿ ಒಟ್ಟು ಹನ್ನೊಂದು ಸಿಬ್ಬಂದಿ ಇದ್ದಾರಂತೆ. ಅವರು ಮೂರು ಶಿಪ್ಟ್​ನಲ್ಲಿ ಕೆಲಸ ಮಾಡುತ್ತಾರೆ.

ಅದರಲ್ಲಿ ಒಂದಿಬ್ಬರು ರಜೆ ಎಂದು ಹೋದ್ರೆ ಉಳಿದವರು ಕೆಲಸ ಮಾಡಬೇಕು. ಹೆಚ್ಚಿನ ಸಿಬ್ಬಂಧಿ ಇದ್ದರೆ ಹೆಚ್ಚು ಕೌಂಟರ್ ಆರಂಭಿಸಬಹುದು. ಆದ್ರೆ, ಸಿಬ್ಬಂಧಿ ಕೊರತೆಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತಾಗಿದೆ. ಹೀಗಾಗಿ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಮೇಲಾಧಿಕಾರಿಗಳು ಹೇಳುತ್ತಿದ್ದಾರೆ. ಸಮಸ್ಯೆಯನ್ನು ಮೇಲಾಧಿಕಾರಿಗಳಿಗೆ ತಿಳಿಸಿದ್ದೇವೆ, ಇನ್ನು ಸ್ಪಂಧನೆ ಸಿಕ್ಕಿಲ್ಲ ಎಂದು ಹೇಳ್ತಿದ್ದಾರೆ. ಆದ್ರೆ, ಇನ್ನಾದರೂ ಕೂಡ ಮೇಲಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್