AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಜನಿಸಿದ ನಾಡು ಅಂಜನಾದ್ರಿ ಬೆಟ್ಟಕ್ಕೆ ಕಳೆದ 35 ದಿನಗಳಲ್ಲಿ ಹರಿದುಬಂದ ಕಾಣಿಕೆ ಎಷ್ಟು ಗೊತ್ತಾ?

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಬಂದು ದರ್ಶನ ಪಡೆಯುತ್ತಾರೆ. ಈ ಬೆಟ್ಟವನ್ನು ಹತ್ತಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ. ಅದರಂತೆ ಇದೀಗ ದೇವಸ್ಥಾನದ ಹುಂಡಿ ಎಣಿಕೆ ಮಾಡಿದ್ದು, ಕೇವಲ 35 ದಿನಗಳಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹವಾಗಿದೆ.

ಹನುಮ ಜನಿಸಿದ ನಾಡು ಅಂಜನಾದ್ರಿ ಬೆಟ್ಟಕ್ಕೆ ಕಳೆದ 35 ದಿನಗಳಲ್ಲಿ ಹರಿದುಬಂದ ಕಾಣಿಕೆ ಎಷ್ಟು ಗೊತ್ತಾ?
ಅಂಜನಾದ್ರಿ ಹುಂಡಿ ಎಣಿಕೆ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 09, 2023 | 10:32 AM

Share

ಕೊಪ್ಪಳ, ಆ.9: ಜಿಲ್ಲೆಯ ಗಂಗಾವತಿ(Gangavati) ತಾಲೂಕಿನಲ್ಲಿರುವ ಅಂಜನಾದ್ರಿ(Anjanadri)ಯನ್ನು ಆಂಜನೇಯ ಜನ್ಮಸ್ಥಳ ಎಂದು ಕರೆಯುತ್ತಾರೆ. ಇಲ್ಲಿಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸಿ ಆಂಜನೇಯನ ಕೃಪೆಗೆ ಪಾತ್ರರಾಗುತ್ತಾರೆ. ಇನ್ನು ಹನುಮ ಜಯಂತಿಯಂದು ಅದ್ದೂರಿಯಾಗಿ ಜಾತ್ರೆ ಜರುಗುತ್ತದೆ. ಇನ್ನು ಕಳೆದ ಜುಲೈ 4 ರಂದು ಹುಂಡಿ ತೆರೆಯಲಾಗಿತ್ತು. ಅಂದು 26.57 ಲಕ್ಷ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಇದಾದ 35 ದಿನಗಳ ಬಳಿಕ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಬರೊಬ್ಬರಿ 25.27 ಲಕ್ಷ ರೂಪಾಯಿ ಹುಂಡಿಯಲ್ಲಿ ಸಂಗ್ರಹವಾಗಿದೆ.

ಅಂಜನಾದ್ರಿ ಕುರಿತು ಮಾಹಿತಿ

ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಬಂದು ದರ್ಶನ ಪಡೆಯುತ್ತಾರೆ. ಈ ಬೆಟ್ಟವನ್ನು ಹತ್ತಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ. ಈ ದೇವಾಲಯದ ಒಳಗಡೆ ಹನುಮನ ಇಷ್ಟದೇವತೆಗಳಾದ ರಾಮ ಸೀತೆಯರನ್ನು ಪೂಜಿಸಲಾಗುತ್ತದೆ. ಇನ್ನು ವಿಶೇಷವೆಂದರೆ ಈ ದೇವಾಲಯದ ಒಳಗಡೆ ಇರುವ ಅರ್ಚಕರೊಬ್ಬರು ಕನ್ನಡ ಮತ್ತು ಹಿಂದಿ ಎರಡು ಭಾಷೆಗಳಲ್ಲಿ ಈ ಸ್ಥಳದ ಮಹಿಮೆಯನ್ನು ಚೆನ್ನಾಗಿ ತಿಳಿಸಿ ಕೊಡುತ್ತಾರೆ.

ಇದನ್ನೂ ಓದಿ:Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ

ಇನ್ನು ಅಂಜನಾದ್ರಿ ಬೆಟ್ಟದ ವಿಹಂಗಮ ದೃಶ್ಯಗಳು, ಬೆರಗುಗೊಳಿಸುವ ಸೂರ್ಯಾಸ್ತದ ನೋಟಗಳು ಮತ್ತು ಪರ್ವತಗಳು ಹಾಗೂ ಬಂಡೆಗಳ ನಡುವೆ ಹರಿಯುವ ತುಂಗಭದ್ರಾ ನದಿಯ ರಮಣೀಯ ನೋಟಗಳು ಬೆಟ್ಟ ಹತ್ತಿ ಬಂದ ಭಕ್ತರ ಎಲ್ಲಾ ಆಯಾಸವನ್ನು ಮರೆಸುತ್ತದೆ. ಜೊತೆಗೆ ಇಲ್ಲಿಂದ ಹಂಪಿಯ ಅವಶೇಷಗಳು ಮತ್ತು ನೆರೆಹೊರೆಯಲ್ಲಿರುವ ಇತರ ಭವ್ಯವಾದ ಬೆಟ್ಟಗಳನ್ನು ಸಹ ವೀಕ್ಷಿಸಬಹುದಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ