AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಜನಿಸಿದ ನಾಡು ಅಂಜನಾದ್ರಿ ಬೆಟ್ಟಕ್ಕೆ ಕಳೆದ 35 ದಿನಗಳಲ್ಲಿ ಹರಿದುಬಂದ ಕಾಣಿಕೆ ಎಷ್ಟು ಗೊತ್ತಾ?

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಬಂದು ದರ್ಶನ ಪಡೆಯುತ್ತಾರೆ. ಈ ಬೆಟ್ಟವನ್ನು ಹತ್ತಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ. ಅದರಂತೆ ಇದೀಗ ದೇವಸ್ಥಾನದ ಹುಂಡಿ ಎಣಿಕೆ ಮಾಡಿದ್ದು, ಕೇವಲ 35 ದಿನಗಳಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹವಾಗಿದೆ.

ಹನುಮ ಜನಿಸಿದ ನಾಡು ಅಂಜನಾದ್ರಿ ಬೆಟ್ಟಕ್ಕೆ ಕಳೆದ 35 ದಿನಗಳಲ್ಲಿ ಹರಿದುಬಂದ ಕಾಣಿಕೆ ಎಷ್ಟು ಗೊತ್ತಾ?
ಅಂಜನಾದ್ರಿ ಹುಂಡಿ ಎಣಿಕೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 09, 2023 | 10:32 AM

ಕೊಪ್ಪಳ, ಆ.9: ಜಿಲ್ಲೆಯ ಗಂಗಾವತಿ(Gangavati) ತಾಲೂಕಿನಲ್ಲಿರುವ ಅಂಜನಾದ್ರಿ(Anjanadri)ಯನ್ನು ಆಂಜನೇಯ ಜನ್ಮಸ್ಥಳ ಎಂದು ಕರೆಯುತ್ತಾರೆ. ಇಲ್ಲಿಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸಿ ಆಂಜನೇಯನ ಕೃಪೆಗೆ ಪಾತ್ರರಾಗುತ್ತಾರೆ. ಇನ್ನು ಹನುಮ ಜಯಂತಿಯಂದು ಅದ್ದೂರಿಯಾಗಿ ಜಾತ್ರೆ ಜರುಗುತ್ತದೆ. ಇನ್ನು ಕಳೆದ ಜುಲೈ 4 ರಂದು ಹುಂಡಿ ತೆರೆಯಲಾಗಿತ್ತು. ಅಂದು 26.57 ಲಕ್ಷ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಇದಾದ 35 ದಿನಗಳ ಬಳಿಕ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಬರೊಬ್ಬರಿ 25.27 ಲಕ್ಷ ರೂಪಾಯಿ ಹುಂಡಿಯಲ್ಲಿ ಸಂಗ್ರಹವಾಗಿದೆ.

ಅಂಜನಾದ್ರಿ ಕುರಿತು ಮಾಹಿತಿ

ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಬಂದು ದರ್ಶನ ಪಡೆಯುತ್ತಾರೆ. ಈ ಬೆಟ್ಟವನ್ನು ಹತ್ತಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ. ಈ ದೇವಾಲಯದ ಒಳಗಡೆ ಹನುಮನ ಇಷ್ಟದೇವತೆಗಳಾದ ರಾಮ ಸೀತೆಯರನ್ನು ಪೂಜಿಸಲಾಗುತ್ತದೆ. ಇನ್ನು ವಿಶೇಷವೆಂದರೆ ಈ ದೇವಾಲಯದ ಒಳಗಡೆ ಇರುವ ಅರ್ಚಕರೊಬ್ಬರು ಕನ್ನಡ ಮತ್ತು ಹಿಂದಿ ಎರಡು ಭಾಷೆಗಳಲ್ಲಿ ಈ ಸ್ಥಳದ ಮಹಿಮೆಯನ್ನು ಚೆನ್ನಾಗಿ ತಿಳಿಸಿ ಕೊಡುತ್ತಾರೆ.

ಇದನ್ನೂ ಓದಿ:Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ

ಇನ್ನು ಅಂಜನಾದ್ರಿ ಬೆಟ್ಟದ ವಿಹಂಗಮ ದೃಶ್ಯಗಳು, ಬೆರಗುಗೊಳಿಸುವ ಸೂರ್ಯಾಸ್ತದ ನೋಟಗಳು ಮತ್ತು ಪರ್ವತಗಳು ಹಾಗೂ ಬಂಡೆಗಳ ನಡುವೆ ಹರಿಯುವ ತುಂಗಭದ್ರಾ ನದಿಯ ರಮಣೀಯ ನೋಟಗಳು ಬೆಟ್ಟ ಹತ್ತಿ ಬಂದ ಭಕ್ತರ ಎಲ್ಲಾ ಆಯಾಸವನ್ನು ಮರೆಸುತ್ತದೆ. ಜೊತೆಗೆ ಇಲ್ಲಿಂದ ಹಂಪಿಯ ಅವಶೇಷಗಳು ಮತ್ತು ನೆರೆಹೊರೆಯಲ್ಲಿರುವ ಇತರ ಭವ್ಯವಾದ ಬೆಟ್ಟಗಳನ್ನು ಸಹ ವೀಕ್ಷಿಸಬಹುದಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್