AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಜೈ ಶ್ರೀರಾಮ್​ ಎಂದು ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನಿಗೆ ಥಳಿತ, ದೂರು ದಾಖಲು

ಹುಸೇನ್​ಸಾಬ್​​ ಎಂಬುವರು ನವೆಂಬರ್ 25ರ ರಾತ್ರಿ ಹೊಸಪೇಟೆಯಿಂದ ಗಂಗಾವತಿಗೆ ಬಂದಿದ್ದಾರೆ. ಒಂದು ಲೋಟ ಚಹಾ ಕುಡಿದು ಆಟೋರಿಕ್ಷಾಕ್ಕಾಗಿ ಕಾಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಎಲ್ಲಿಗೆ ಹೋಗಬೇಕೆಂದು ಹುಸೇನ್​ಸಾಬ್​ ಅವರನ್ನು ಪ್ರಶ್ನಿಸಿದ್ದಾರೆ. ನಂತರ ನಾವೇ ಡ್ರಾಪ್​ ಮಾಡುವುದಾಗಿ ಹೇಳಿ ಬೈಕ್​​ನಲ್ಲಿ ಹತ್ತಿಸಿಕೊಂಡಿದ್ದಾರೆ. ಮುಂದೇನಾಯ್ತು ಸ್ಟೋರಿ ಓದಿ...

ಕೊಪ್ಪಳ: ಜೈ ಶ್ರೀರಾಮ್​ ಎಂದು ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನಿಗೆ ಥಳಿತ, ದೂರು ದಾಖಲು
ಹಲ್ಲೆಗೊಳಗಾದ ಹುಸೇನ್​ಸಾಬ್​​
Follow us
ವಿವೇಕ ಬಿರಾದಾರ
|

Updated on: Dec 01, 2023 | 3:08 PM

ಕೊಪ್ಪಳ ಡಿ.01: ಗಂಗಾವತಿ (Gangavati) ಪಟ್ಟಣದಲ್ಲಿ 65 ವರ್ಷದ ಮುಸ್ಲಿಂ (Muslim) ವ್ಯಕ್ತಿಗೆ ಅಪರಿಚಿತ ಇಬ್ಬರು ಮನಬಂತೆ ಥಳಿಸಿ, ಜೈ ಶ್ರೀರಾಮ (Sri Ram) ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ. ಹುಸೇನ್ಸಾಬ್ (65) ಹಲ್ಲೆಗೊಳಗಾದ ವೃದ್ಧ. ಸಂತ್ರಸ್ತ ಹುಸೇನ್​ಸಾಬ್​ ನವೆಂಬರ್ 30 ರಂದು ಗಂಗಾವತಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಸಿದ್ದಾರೆ. ಹುಸೇನ್​ಸಾಬ್​​ ಅವರು ನವೆಂಬರ್ 25ರ ರಾತ್ರಿ ಹೊಸಪೇಟೆಯಿಂದ ಗಂಗಾವತಿಗೆ ಬಂದಿದ್ದಾರೆ. ಒಂದು ಲೋಟ ಚಹಾ ಕುಡಿದು ಆಟೋರಿಕ್ಷಾಕ್ಕಾಗಿ ಕಾಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಎಲ್ಲಿಗೆ ಹೋಗಬೇಕೆಂದು ಹುಸೇನ್​ಸಾಬ್​ ಅವರನ್ನು ಪ್ರಶ್ನಿಸಿದ್ದಾರೆ.

ನಂತರ ನಾವೇ ಡ್ರಾಪ್​ ಮಾಡುವುದಾಗಿ ಹೇಳಿ ಬೈಕ್​​ನಲ್ಲಿ ಹತ್ತಿಸಿಕೊಂಡಿದ್ದಾರೆ. ದಾರಿ ಮಧ್ಯೆ ಅಪರಿಚಿತ ಇಬ್ಬರೂ ಹುಸೇನ್‌ಸಾಬ್‌ ಅವರಿಗೆ ಥಳಿಸಲು ಆರಂಭಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ ಹುಸೇನ್​ಸಾಬ್​ ಅವರನ್ನು ಪಂಪಾನಗರ ಪ್ರದೇಶದ ಬಳಿ ಕರೆದೊಯ್ದು ಬೈಕ್​ನಿಂದ ಕೆಳೆಗೆ ನೂಗಿ, ನಿಂದಿಸಲು ಪ್ರಾರಂಭಿಸಿದ್ದಾರೆ.

ನನಗೆ ಕಣ್ಣು ಕಾಣುವುದಿಲ್ಲ, ದಯವಿಟ್ಟ ನನ್ನನ್ನು ಬಿಟ್ಟುಬಿಡಿ. ನಾನು ಮನೆಗೆ ಹೋಗುತ್ತೇನೆ ಎಂದು ಹುಸೇನ್​ಸಾಬ್​ ಮನವಿ ಮಾಡಿದ್ದಾರೆ. ಈ ವೇಳೆ ಅಪರಿಚಿತ ಇಬ್ಬರು ವ್ಯಕ್ತಿಗಳು ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ. ಹುಸೇನ್​ಸಾಬ್​​ ಜೈ ಶ್ರೀರಾಮ್​ ಎಂದು ಘೋಷಣೆ ಕೂಗಿದ್ದಾರೆ. ಘೋಷಣೆ ಕೂಗಿದರೂ ಬಿಡದ ದುಷ್ಕರ್ಮಿಗಳು ಮತ್ತೆ ಹಲ್ಲೆ ಮಾಡಲು ಆರಂಭಿಸಿದ್ದಾರೆ.

ದುಷ್ಕರ್ಮಿಗಳು ಬಿಯರ್ ಬಾಟಲಿಯನ್ನು ಒಡೆದು ಗಾಜಿನ ತುಂಡಿನಿಂದ ಹುಸೇನ್​ಸಾಬ್​ ಅವರ ಗಡ್ಡವನ್ನು ಕತ್ತರಿಸಲು ಪ್ರಯತ್ನಿಸಿದರು. ಇದು ಸಾಧ್ಯವಾಗದಿದ್ದಾಗ ಓರ್ವ ದುಷ್ಕರ್ಮಿ ಬೆಂಕಿಕಡ್ಡಿಯನ್ನು ಗೀರಿ ಹುಸೇನ್​ಸಾಬ್​ ಅವರ ಗಡ್ಡವನ್ನು ಸುಟ್ಟಿದ್ದಾನೆ. ಆಗ ಹುಸೇನ್​ಸಾಬ್​ ಕಿರುಚಾಡಲು ಆರಂಭಿಸಿದರು. ಹುಸೇನ್​ಸಾಬ್ ಅವರ ಕಿರುಚಾಟ ಕೇಳಿದ ಕೂಡಲೆ ಸ್ಥಳೀಯರು ಹುಸೇನ್​ಸಾಬ್​ ನೆರವಿಗೆ ಆಗಮಿಸಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮುಸ್ಲಿಂ ವ್ಯಕ್ತಿ ಜಾಗದಲ್ಲಿ ದೇವಸ್ಥಾನ ಪತ್ತೆ; ಅಲ್ಲಿಯೇ ನಾಗ ಸಾನಿಧ್ಯದ ಸುಳಿವು ಗೋಚರ

ಪ್ರಕರಣ ಸಂಬಂಧ ಗಂಗಾವತಿ ನಗರ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹುಸೇನ್​ಸಾಬ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ನಿಲ್ದಾಣ, ಮುಖ್ಯರಸ್ತೆ, ಪಂಪಾನಗರದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸಂತ್ರಸ್ತ ಹುಸೇನಸಾಬ್ ತನ್ನ ಮಗಳೊಂದಿಗೆ ಗಂಗಾವತಿಯ ಪುಟ್ಟ ಮನೆಯಲ್ಲಿ ವಾಸವಾಗಿದ್ದಾನೆ. ದೃಷ್ಟಿ ಹೀನವಾಗುತ್ತಿರುವುದರಿಂದ ಕಳೆದ ಕೆಲ ತಿಂಗಳಿಂದ ಕೊಪ್ಪಳ, ವಿಜಯನಗರ ಜಿಲ್ಲೆಗಳ ಹಲವೆಡೆ ಭಿಕ್ಷಾಟನೆ ನಡೆಸುತ್ತಿದ್ದಾರೆ.

ಹುಸೇನ್​ಸಾಬ್​ ಅವರ ಮೇಲಿನ ಹಲ್ಲೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸದಸ್ಯರು ಗಂಗಾವತಿಯಲ್ಲಿರುವ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಎಲ್ಲ ವರ್ಗದ ಜನರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ವಯೋವೃದ್ಧರನ್ನು ಥಳಿಸಿ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಬಲವಂತ ಮಾಡಿರುವುದು ಕ್ರೂರತನ. ಹುಸೇನ್​ಸಾಬ್​ ಅವರ ಮೇಲೆ ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಕಾರಣರಾದ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಹುಸೇನ್ಸಾಬ್ ಅವರ ಚಿಕಿತ್ಸಾ ವೆಚ್ಚವನ್ನು ಎಸ್‌ಡಿಪಿಐ ಭರಿಸಲು ನಿರ್ಧರಿಸಿದೆ ಎಂದು ಕೊಪ್ಪಳದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?