AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ; ಇ ಕೆವೈಸಿ ಮಾಡಲು ಮುಗಿಬಿದ್ದ ಜನ

ಗ್ಯಾಸ್ ಏಜನ್ಸಿಗಳ ಮುಂದೆ ಮುಂಜಾನೆ ಆರು ಗಂಟೆಗೆ ನೂರಾರು ಜನರು ಚಳಿಯನ್ನು ಲೆಕ್ಕಿಸದೇ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕಾದು ನಿಲ್ಲುತ್ತಿದ್ದಾರೆ. ಈ ಸಮಯದಲ್ಲಿ ತಳ್ಳಾಟ, ನೂಕಾಟಗಳು ಕೂಡ ನಡೆಯುತ್ತಿದ್ದು, ವೃದ್ದರು, ಮಹಿಳೆಯರು ಪಡಬಾರದ ಸಂಕಷ್ಟ ಪಡುತ್ತಿದ್ದಾರೆ. ಇವರ ಸಂಕಷ್ಟಕ್ಕೆ ಕಾರಣವಾಗಿದ್ದು ಇ ಕೆವೈಸಿ ಮತ್ತು ಸುಳ್ಳು ವದಂತಿ. ಅದೇನು ಅಂತೀರಾ? ಇಲ್ಲಿದೆ ನೋಡಿ.

ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ; ಇ ಕೆವೈಸಿ ಮಾಡಲು ಮುಗಿಬಿದ್ದ ಜನ
ಕೊಪ್ಪಳದಲ್ಲಿ ಇ ಕೆವೈಸಿ ಮಾಡಲು ಮುಗಿಬಿದ್ದ ಜನ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 28, 2023 | 2:46 PM

Share

ಕೊಪ್ಪಳ, ಡಿ.28: ಡಿಸೆಂಬರ್ 31 ರೊಳಗೆ ಗ್ಯಾಸ್ ಸಂಪರ್ಕ್ ಪಡೆದವರೆಲ್ಲರೂ ನಿಮಗೆ ಸೇವೆ ನೀಡುವ ಗ್ಯಾಸ್ ಏಜೆನ್ಸಿಯವರ ಬಳಿ ಹೋಗಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ(Subsidy) ಹಣ ಬಂದಾಗುತ್ತದೆ. ಕೆವೈಸಿ ಮಾಡಿಸಿದ್ರೆ ನಿಮಗೆ ಕೇವಲ ಐನೂರು ರೂಪಾಯಿಗೆ ಸಿಲಿಂಡರ್ ಸಿಗುತ್ತೆ. ಇಲ್ಲದಿದ್ದರೆ, ಕಮರ್ಷಿಯಲ್ ಸಿಲಿಂಡರ್ ಬೆಲೆ ನೀಡಿ ಸಿಲಿಂಡರ್ ಖರೀದಿಸಬೇಕು ಎನ್ನುವ ವದಂತಿಯನ್ನು ಹಬ್ಬಿಸಿದ್ದಾರೆ. ಈ ಹಿನ್ನಲೆ ಕೊಪ್ಪಳ(Koppala) ನಗರ ಸೇರಿದಂತೆ ರಾಜ್ಯದ ವಿವಿಧ ಗ್ಯಾಸ್ ಏಜೆನ್ಸಿಗಳ ಅಂಗಡಿಗಳ ಮುಂದೆ ನೂರಾರು ಜನ ಕ್ಯೂ ನಿಲ್ಲುತ್ತಿದ್ದಾರೆ. ಬೆಳ್ಳೆಂಬೆಳಗ್ಗೆ ಆರು ಗಂಟೆಗೆ ತಮ್ಮ ಬೇರೆ ಕೆಲಸಗಳನ್ನು ಕೂಡ ಬಿಟ್ಟು, ಗ್ಯಾಸ್ ಅಂಗಡಿ ಮುಂದೆ ಬಂದು ಕಾಯುತ್ತಿದ್ದಾರೆ.

ಈ ವದಂತಿ ಬಾಯಿಂದ ಬಾಯಿಗೆ ಅನೇಕರಿಗೆ ಹಬ್ಬಿದ್ರೆ, ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಹರದಾಡುತ್ತಿರುವ ವದಂತಿಯನ್ನು ನಂಬಿ, ತಾವು ಗ್ಯಾಸ್ ಸಂಪರ್ಕ ಪಡಿದಿರುವ ಏಜೆನ್ಸಿಗಳ ಮುಂದೆ ಬಂದು ಇ ಕೆವೈಸಿ ಮಾಡಲು ಮುಗಿಬೀಳುತ್ತಿದ್ದಾರೆ. ಇನ್ನು ದಿಢೀರನೆ ನೂರಾರು ಜನ ಬರುತ್ತಿರುವುದರಿಂದ ಏಜೆನ್ಸಿಗಳ ಅಂಗಡಿಗಳು ಜನರಿಂದ ತುಂಬಿ ತುಳಕುತ್ತಿವೆ.

ಇದನ್ನೂ ಓದಿ:ಚಿತ್ರದುರ್ಗ: ಚಿನ್ನದ ನಾಣ್ಯ ಸಿಗುತ್ತವೆ ಎಂಬ ವದಂತಿ;ರಾಷ್ಟ್ರೀಯ ಹೆದ್ದಾರಿ ಬಳಿ ಶೋಧ ಕಾರ್ಯದಲ್ಲಿ ತೊಡಗಿದ‌ ಜನ

ಸಬ್ಸಿಡಿ ಬಂದಾಗುತ್ತೆ ಎಂಬ ವದಂತಿ

ಮೂರೇ ದಿನದಲ್ಲಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ಸಬ್ಸಿಡಿ ಬಂದಾಗುತ್ತೆ ಅಂತ ಹೇಳಿದ್ರು. ಹೀಗಾಗಿ ಮುಂಜಾನೆ ಆರು ಗಂಟೆಗೆ ಕೊಪ್ಪಳ ನಗರದಲ್ಲಿರುವ ಗ್ಯಾಸ್ ಏಜೆನ್ಸಿ ಮುಂದೆ ಬಂದು ನಿಂತಿದ್ದೇನೆ. ಆದರೂ ನನ್ನ ಪಾಳಿ ಬರುತ್ತಿಲ್ಲ. ಜನ ಹೊಡದಾಡುತ್ತಿದ್ದಾರೆ, ಕೆವೈಸಿ ಮಾಡಲು ಪರದಾಡುವಂತಾಗಿದೆ ಎಂದು ಮಲ್ಲಮ್ಮ ಎನ್ನುವ ಮಹಿಳೆ ನೋವು ತೊಂಡಿಕೊಂಡಿದ್ದಾಳೆ.

ಯಾತಕ್ಕಾಗಿ ಇಕೈವೈಸಿ, ಅದಕ್ಕಿರೋ ಸಮಯವೇನು?

ಇನ್ನು ಕೇಂದ್ರ ಸರ್ಕಾರ ಗ್ಯಾಸ್ ಸಂಪರ್ಕ್ ಪಡೆದವರು ಇ ಕೆವೈಸಿ ಮಾಡಿಸುವುದನ್ನು ಕಡ್ಡಾಯ ಮಾಡಿದೆ. ಹಾಗಂತ ಅದಕ್ಕೆ ಡಿಸೆಂಬರ್ 31 ಕೊನೆಯ ದಿನ ಎಂದು ಘೋಷಣೆ ಮಾಡಿಲ್ಲ. ಈ ಹಿಂದೆ ಡಿಸೆಂಬರ್ 31 ಕೊನೆಯ ದಿನ ಎಂದು ಹೇಳಿದರೂ ಕೂಡ ಅದನ್ನು ಮತ್ತೆ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಆದರೂ ಕೂಡ ಡಿಸೆಂಬರ್ 31 ಕೊನೆಯ ದಿನ ಎಂದು ತಿಳಿದ ಜನ, ಇ ಕೆವೈಸಿ ಮಾಡಿಸಲು ಮುಗಿಬೀಳುತ್ತಿದ್ದಾರೆ.

ಕೆವೈಸಿ ಮಾಡಿಸಿದ್ರೆ ಕಡಿಮೆ ಬೆಲೆಗೆ ಸಿಲಿಂಡರ್ ಎಂಬ ವದಂತಿ

ಇ ಕೆವೈಸಿ ಮಾಡಿಸಿದ್ರೆ ಕಡಿಮೆ ಬೆಲೆಗೆ ಸಿಲಿಂಡರ್ ಸಿಗುತ್ತದೆ ಎನ್ನುವುದು ಕೂಡ ಸುಳ್ಳು, ಕೆಲವರು ಒಂದೇ ಹೆಸರಿನಲ್ಲಿ ಎರಡೆರಡು ಗ್ಯಾಸ್ ಸಂಪರ್ಕ ಪಡೆದಿದ್ದಾರೆ. ಅಂತವರನ್ನು ಪತ್ತೆ ಮಾಡಲು, ಮತ್ತು ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆದವರು, ಸಬ್ಸಿಡಿಗೆ ಯಾರೆಲ್ಲ ಅರ್ಹತೆ ಹೊಂದಿದ್ದಾರೆ ಎನ್ನುವುದನ್ನು ತಿಳಿಯಲು ಕೇಂದ್ರ ಸರ್ಕಾರ ಇ ಕೆವೈಸಿ ಯನ್ನು ಕಡ್ಡಾಯ ಮಾಡಿದೆಯಂತೆ. ಗ್ರಾಹಕರು ತಮಗೆ ಸಮಯವಿದ್ದಾಗ ಏಜೆನ್ಸಿಗಳ ಅಂಗಡಿಗೆ ಬಂದು, ತಮ್ಮ ಆಧಾರ ಕಾರ್ಡ್ ಮತ್ತು ಗ್ಯಾಸ್ ಬುಕ್​ನ್ನು ತಂದು, ಹೆಬ್ಬಟ್ಟನ್ನು ನೀಡಿ ಸುಲಭವಾಗಿ ಇ ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಇದಕ್ಕೆ ಯಾವುದೇ ಹಣವನ್ನು ಕೂಡ ಚಾರ್ಜ್ ಮಾಡುವುದಿಲ್ಲ ಎಂದು ಕೊಪ್ಪಳದ ಭಾರತ್ ಗ್ಯಾಸ್ ಏಜನ್ಸಿ ಮಾಲೀಕ ರಾಘವೇಂದ್ರ ಕುಲಕರ್ಣಿ ಅವರು ಹೇಳುತ್ತಿದ್ದಾರೆ.

ಗ್ಯಾಸ್ ಸಂಪರ್ಕ ಪಡೆದವರು ಇ ಕೆವೈಸಿ ಬಗ್ಗೆ ಸಾಮಾಜಿಕ ತಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲ ವದಂತಿಗಳನ್ನು ನಂಬಿ ಇದೀಗ ಜನ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ಜನರಲ್ಲಿ ಮೂಡಿರುವ ಗೊಂದಲ ನಿವಾರಣೆ ಮಾಡುವ ಕೆಲಸವನ್ನು ಅಧಿಕಾರಿಗಳು ಮತ್ತು ಗ್ಯಾಸ್ ಏಜೆನ್ಸಿಗಳ ಸಿಬ್ಬಂದಿ ಮಾಡಬೇಕಿದೆ. ಆ ಮೂಲಕ ಜನರು ಪಡುತ್ತಿರುವ ತಾಪತ್ರಯಗಳಿಗೆ ಪರಿಹಾರ ಕಲ್ಪಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 28 December 23

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್