AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಮೊಳಗಿದ ಮೋದಿ, ಪುನೀತ್ ಜಯಘೋಷ

ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮ ಮಾಲೆ ವಿಸರ್ಜನೆ ನಡೆಯುತ್ತಿದೆ. ಹೀಗಾಗಿ ಹನುಮ ಮಾಲಾಧಾರಿಗಳಷ್ಟೇ ಅಲ್ಲದೆ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದಿದ್ದ ಭಕ್ತರು ಮೋದಿ ಮತ್ತು ಪುನೀತ್ ರಾಜ್​ಕುಮಾರ್ ಅವರ ಭಾವಚಿತ್ರ ಹಿಡಿದು ಜೈಕಾರ ಹಾಕಿದ್ರು.

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಮೊಳಗಿದ ಮೋದಿ, ಪುನೀತ್ ಜಯಘೋಷ
ಅಂಜನಾದ್ರಿ ಬೆಟ್ಟದಲ್ಲಿ ಮೊಳಗಿದ ಮೋದಿ, ಪುನೀತ್ ಜಯಘೋಷ
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 24, 2023 | 8:01 AM

Share

ಕೊಪ್ಪಳ, ಡಿ.24: ಹುನುಮನ ನಾಡು, ಹನುಮನ ಜನ್ಮಸ್ಥಳ ಅಂತಲೇ ಪ್ರಸಿದ್ದಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ (Anjanadri Betta) ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ರಂಗೇರಿದೆ. ಆಂಧ್ರ, ತೆಲಂಗಾಣ ಸೇರಿದಂತೆ ವಿವಿಧೆಡೆಯಿಂದ ಲಕ್ಷಾಂತರ ಹನುಮ ಭಕ್ತರು ಆಗಮಿಸಿದ್ದು ಹನುಮ ಮಾಲಾಧಾರಿಗಳು ಹನುಮ ಮಾಲೆ (Hanuma Male) ವಿಸರ್ಜನೆ ಮಾಡಲಿದ್ದಾರೆ. ಇನ್ನು ಅಂಜನಾದ್ರಿಯಲ್ಲಿ ಜೈ ಶ್ರೀರಾಮ, ಜೈ ಆಂಜನೇಯ ಎಂಬ ಘೋಷವಾಕ್ಯಗಳ ನಡುವೆ ಮೋದಿ (Narendra Modi), ಪುನೀತ್ ರಾಜ್​ಕುಮಾರ್​ಗಳ (Puneeth Rajkumar) ಘೋಷಣೆಗಳು ಮೊಳಗಿವೆ. ಸಾವಿರಾರು ಭಕ್ತರು ಪ್ರಧಾನಿ ನರೇಂದ್ರ ಮೋದಿ, ದಿ. ಪುನೀತ್ ರಾಜ್​ಕುಮಾರ್ ಭಾವಚಿತ್ರ ಹಿಡಿದು ಅಂಜನಾದ್ರಿಗೆ ಆಗಮಿಸಿದ್ದಾರೆ.

ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮ ಮಾಲೆ ವಿಸರ್ಜನೆ ನಡೆಯುತ್ತಿದೆ. ಹೀಗಾಗಿ ಹನುಮ ಮಾಲಾಧಾರಿಗಳಷ್ಟೇ ಅಲ್ಲದೆ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದಿದ್ದ ಭಕ್ತರು ಮೋದಿ ಮತ್ತು ಪುನೀತ್ ರಾಜ್​ಕುಮಾರ್ ಅವರ ಭಾವಚಿತ್ರ ಹಿಡಿದು ಜೈಕಾರ ಹಾಕಿದ್ರು.

ಇನ್ನು ಇಂದು ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆ ಅಂಜನಾದ್ರಿ ಬೆಟ್ಟದಲ್ಲಿ ಸಾಕಷ್ಟು ವ್ಯವಸ್ಥೆ ಮಾಡಿದೆ. ಹನುಮ ಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟ ಇದೀಗ ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ. ಚಾತುರ್ಮಾಸ್ಯದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ. ಡಿಸೆಂಬರ್ 24 ರಂದು ‌ಅಂಜನಾದ್ರಿ ಬೆಟ್ಟಕ್ಕೆ ಬಂದು ಹನುಮ ಮಾಲೆಯನ್ನು ವಿಸರ್ಜಿಸುತ್ತಾರೆ.

ಇದನ್ನೂ ಓದಿ:  ಅಂಜನಾದ್ರಿಗೆ ಬರ್ತಿದ್ದೀರಾ? ಹಾಗಾದ್ರೆ ಕ್ಯೂಆರ್ ಕೋಡ್ ಬಳಸಿ ನಾನಾ ಸೌಕರ್ಯದ ಸ್ಥಳಗಳನ್ನು ಸುಲಭವಾಗಿ ಹುಡುಕಿ

ಜಿಲ್ಲಾಡಳಿತದಿಂದ ಕ್ಯೂ ಆರ್ ಕೋಡ್ ವ್ಯವಸ್ಥೆ

ಅಂಜನಾದ್ರಿಯಲ್ಲಿ ಪಾರ್ಕಿಂಗ್ ಸ್ಥಳಗಳು ಯಾವ ಯಾವ ಕಡೆಗಿವೆ, ಪ್ರಥಮ ಚಿಕಿತ್ಸಾ ಕೇಂದ್ರಗಳು ಎಲ್ಲೆಲ್ಲಿವೆ, ಕುಡಿಯುವ ನೀರಿನ ಸ್ಥಳಗಳು, ಸಹಾಯವಾಣಿ ಕೇಂದ್ರಗಳು, ಸ್ಥಾನ ಗೃಹಗಳ ಸ್ಥಳಗಳು ಯಾವ ಯಾವ ಕಡೆಗಳಲ್ಲಿ ಇವೆ ಎಂಬುದು ಸೇರಿದಂತೆ ನಾನಾ ಸೌಲಭ್ಯಗಳು ದೊರಕುವ ಸ್ಥಳಗಳ ಮಾಹಿತಿಯನ್ನು ಈ ಕ್ಯೂಆರ್ ಕೋಡ್ ಮೂಲಕ ಪಡೆಯಬಹುದಾಗಿದೆ. ಅಂಜನಾದ್ರಿಗೆ ಬರೋ ಹನುಮ ಮಾಲಾಧಾರಿಗಳಿಗೆ ಊಟದ ವ್ಯವಸ್ಥೆಯನ್ನು ಕೂಡಾ ಕಲ್ಪಿಸಲಾಗಿದೆ. ಇನ್ನು ಇಂದು ಸಾವಿರಾರು ಹನುಮ ಮಾಲಾಧಾರಿಗಳು ಅಂಜನಾದ್ರಿಗೆ ಬರ್ತಿರೋ ಹಿನ್ನೆಲೆಯಲ್ಲಿ ಅಂಜನಾದ್ರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡಾ ಏರ್ಪಡಿಸಲಾಗಿದೆ. ಇಬ್ಬರು ಎಎಸ್​​ಪಿ, 6 ಡಿಎಸ್​​​​ಪಿ, 26 ಸಿಪಿಐ, 62 ಪಿಎಸ್​ಐ, 94 ಎಎಸ್‌ಐ, 967 ಕಾನ್ಸ್​​ಟೇಬಲ್​​​​, 500 ಗೃಹರಕ್ಷಕ ದಳ ಸಿಬ್ಬಂದಿ, 12 ಡಿಎಆರ್, 5 KSRP ತುಕುಡಿ ಸೇರಿ 1657 ಪೊಲೀಸರ ನಿಯೋಜನೆ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ