AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಟೊಮೆಟೋ ದರ ಕುಸಿತ; ಬೆಳೆದ ಟೊಮೆಟೋವನ್ನೆಲ್ಲಾ ಬೀದಿಗೆ ಸುರಿದು ರೈತರಿಂದ ಆಕ್ರೋಶ

ಕೆಜಿ ಟೊಮೆಟೋವನ್ನು ಹತ್ತು ರೂಪಾಯಿಗೂ ಯಾರು ಕೇಳುತ್ತಿಲ್ಲ. ಬಾಡಿಗೆನೆ 40 ರೂಪಾಯಿ ಕೊಟ್ಟಿದ್ದೇವೆ. ಹೀಗಾಗಿ ಎಪಿಎಮ್​ಸಿಗೆ ತಂದ ಅಷ್ಟು ಟೊಮೆಟೋ ರಸ್ತೆಗೆ ಚೆಲ್ಲಿದ್ದೇವೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ: ಟೊಮೆಟೋ ದರ ಕುಸಿತ; ಬೆಳೆದ ಟೊಮೆಟೋವನ್ನೆಲ್ಲಾ ಬೀದಿಗೆ ಸುರಿದು ರೈತರಿಂದ ಆಕ್ರೋಶ
ಬೆಳೆದ ಟೊಮೆಟೋವನ್ನೆಲ್ಲಾ ಬೀದಿಗೆ ಸುರಿದು ರೈತರಿಂದ ಆಕ್ರೋಶ
TV9 Web
| Edited By: |

Updated on: Aug 16, 2021 | 10:52 AM

Share

ಕೊಪ್ಪಳ: ಟೊಮೆಟೋ ದರ ಕುಸಿತ ಹಿನ್ನೆಲೆ ಟೊಮೆಟೋ ರಸ್ತೆಗೆ ಚೆಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಪ್ಪಳ ಜಿಲ್ಲೆಯ ಬೆಳವಿನಾಳ ಎಪಿಎಮ್​ಸಿ ಮಾರುಕಟ್ಟೆ ಬಳಿ ನಡೆದಿದೆ. ಕೆಜಿ ಟೊಮೆಟೋವನ್ನು ಹತ್ತು ರೂಪಾಯಿಗೂ ಯಾರು ಕೇಳುತ್ತಿಲ್ಲ. ಬಾಡಿಗೆನೆ 40 ರೂಪಾಯಿ ಕೊಟ್ಟಿದ್ದೇವೆ. ಹೀಗಾಗಿ ಎಪಿಎಮ್​ಸಿಗೆ ತಂದ ಅಷ್ಟು ಟೊಮೆಟೋ ರಸ್ತೆಗೆ ಚೆಲ್ಲಿದ್ದೇವೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ: ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ ಇಷ್ಟು ದಿನ ಬಾಗಲಕೋಟೆ ಜಿಲ್ಲೆಯ ರೈತರು ಪ್ರವಾಹಕ್ಕೆ ಸಿಲುಕಿ ಕಂಗಾಲಾಗಿದ್ದರು. ಬೆಳೆದು ನಿಂತ ಬೆಳೆಯ ಫಸಲು ಕೈಗೆ ಬರಬೇಕೆನ್ನುವಷ್ಟರಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿ ಪ್ರವಾಹಕ್ಕೆ ಸಿಲುಕಿ ಬೆಳೆ ಕೊಳೆತು ಹಾಳಾಗಿದೆ. ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ನಾಶವಾಗಿದೆ. ಆ ಮೂಲಕ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಪರಿಸ್ಥಿತಿ ರೈತರದ್ದಾಗಿದೆ. ಈ ಮಧ್ಯೆ ಮೋಡ ಕವಿದ ವಾತಾವರಣದಿಂದ ರೈತರು ಬೆಳೆದ ಈರುಳ್ಳಿ ಬೆಳೆ ಕೂಡ ಹಾಳಾಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ, ಬೀಳಗಿ ತಾಲೂಕಿನಲ್ಲಿ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ ಶುರುವಾಗಿದ್ದು, ರೈತರೇ ಈರುಳ್ಳಿ ಬೆಳೆ ನಾಶ ಮಾಡುವ ಪರಿಸ್ಥಿತಿಗೆ ಬಂದಿದ್ದಾರೆ. ಮೋಡ ಮುಸುಕಿದ ವಾತಾವರಣ ರೈತರ ಪಾಲಿಗೆ ಸಂಕಷ್ಟ ತಂದಿದೆ. ಈರುಳ್ಳಿಯನ್ನು ಬಿತ್ತಿ ನಾಟಿ ಮಾಡಿದಾಗಿನಿಂದಲೂ ಆಗಾಗ ಸುರಿಯುವ ಜಿಟಿಜಿಟಿ ಮಳೆ, ಮೋಡ ಮುಸುಕಿದ ವಾತಾವರಣದ ಹಿನ್ನೆಲೆ, ಈರುಳ್ಳಿ ಬೆಳೆಗೆ ಸೂರ್ಯನ ಕಿರಣಗಳ ಸ್ಪರ್ಶ ತೀವ್ರ ಕಡಿಮೆಯಾಗಿದೆ. ಇದರಿಂದ ಬೆಳೆಗೆ ಹೆಚ್ಚಿನ ಪ್ರಮಾಣದಲ್ಲಿ ರೋಗಬಾಧೆ ಕಾಣಿಸಿಕೊಂಡಿದೆ.

ಈರುಳ್ಳಿ ನಾಟಿ ಮಾಡಿ ಸುಮಾರು ಒಂದೆರಡು ತಿಂಗಳು ಕಳೆದಿದೆ. ಆರಂಭದಲ್ಲಿ ಚೆನ್ನಾಗಿಯೇ ಬಂದ ಈರುಳ್ಳಿ ಬೆಳೆಗೆ ಮಳೆರಾಯ ಕಂಟಕವಾಗಿದ್ದಾನೆ. ಹಲವೆಡೆ ಈರುಳ್ಳಿ ಬೆಳೆಯಲ್ಲಿ ಕೀಟಗಳು ಕೂಡ ಕಾಣಿಸಿಕೊಂಡಿವೆ. ಈರುಳ್ಳಿ ಗರಿಗಳ ಮೇಲೆ ಬಿಳಿ ಚುಕ್ಕಿ, ಗರಿ ಮುದುಡಿ ಬೀಳುವುದು, ಬಿಳಿ-ಹಳದಿ ಬಣ್ಣಕ್ಕೆ ತಿರುಗುವುದು. ಕೆಲವು ಈರುಳ್ಳಿ ಗರಿ ತುಂಡರಿಸಿ ನೆಲಕ್ಕೆ ಬೀಳುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ:

ಬೀದಿಗೆ ಬಂದ ಹೂವು ಬೆಳೆಗಾರರ ಬದುಕು; ರಸ್ತೆಯಲ್ಲಿಯೇ ಹೂವುಗಳನ್ನು ಸುರಿದು ರೈತರ ಆಕ್ರೋಶ

ಲಾಕ್​ಡೌನ್​ನಿಂದ ಬೆಳೆದ ಬೆಳೆಗೆ ಬೆಲೆ ಇಲ್ಲ; ಹೊಲದಲ್ಲಿಯೇ ಬದನೆಕಾಯಿಯನ್ನು ನಾಶ ಮಾಡಿದ ಬೆಳಗಾವಿ ರೈತ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!