AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

Koppal: ಮಾಜಿ ಶಾಸಕ ಮಧು ಬಂಗಾರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಬಿಜೆಪಿ ನಡೆಸಿದ ವ್ಯವಹಾರ ಕುದುರಿರದ ಕಾರಣ, ಅದು ಬೀಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ
ಮಧು ಬಂಗಾರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 25, 2021 | 11:16 AM

Share

ಕೊಪ್ಪಳ: ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ ಮಾಡಿದ್ದಾರೆ. ಕೊಪ್ಪಳದಲ್ಲಿ ಹೇಳಿಕೆ ನೀಡಿರುವ ಅವರು ಬಿಜೆಪಿಯವರು ಕೇವಲ ವ್ಯವಹಾರಕ್ಕಾಗಿ ಮಾತ್ರ ಬರುತ್ತಾರೆ. ನಂತರ ಇಡೀ ದೇಶ ಲೂಟಿ ಮಾಡಿ, ಹಾಳು ಮಾಡಿ ಹೋಗುತ್ತಾರೆ. ಇದು ನಮ್ಮೆಲ್ಲರ ದುರಂತ ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 

ವ್ಯವಹಾರ ಮಾಡಿದಾಗ ಅದು ಕುದುರದೇ ಹೋದರೆ ವ್ಯವಹಾರ ಬಿದ್ದುಹೋಗುತ್ತದೆ. ಬಿಜೆಪಿ ಸದ್ಯ ಅದೇ ಪರಿಸ್ಥಿತಿಯಲ್ಲಿದೆ. ಅವರ ವ್ಯವಹಾರ ಕುದುರದ ಕಾರಣ, ಸರ್ಕಾರ ಬಿದ್ದು ಹೋಗುವ ಹಂತದಲ್ಲಿದೆ ಎಂದು ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಾಮಾನ್ಯ ಜನರ ಸೇವೆ ಮಾಡುವುದು ಕಾಂಗ್ರೆಸ್ ಪಕ್ಷ. ಕರ್ನಾಟಕಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ಯಾವಾಗ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವೇ ಅಧಿಕಾರ ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, ತಾನು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದೀನೆಂದೂ ಜೆಡಿಎಸ್ ಬಗ್ಗೆ ತಿಳಿದಿಲ್ಲವೆಂದೂ ಅವರು ಪ್ರತಿಕ್ರಿಯಿಸಿದರು.

ಕೊಪ್ಪಳದ ಗವಿ ಮಠಕ್ಕೆ ಭೇಟಿ ನೀಡಿ, ಮಧು ಬಂಗಾರಪ್ಪ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗವಿ‌ ಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: Mann Ki Baat ದೇಶದ ಅಭಿವೃದ್ಧಿಗಾಗಿ ನಾವು ಶ್ರಮಿಸಬೇಕು: ದೇಶವನ್ನುದ್ದೇಶಿಸಿ ಮೋದಿ ಮನದ ಮಾತು

ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ ಮಾಡುವ ಭಿಕ್ಷುಕರ ಗ್ಯಾಂಗ್, ಭಿಕ್ಷಕರನ್ನು ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲು ಮುಂದಾದ ಕಮಲ್ ಪಂತ್

ಇದನ್ನೂ ಓದಿ: ಪತ್ನಿಯ ವೇಷ ಧರಿಸಿ ವಿಮಾನ ಹತ್ತಿದ ಕೊವಿಡ್​ 19 ಸೋಂಕಿತ; ಮಾರ್ಗ ಮಧ್ಯೆ ಫ್ಲೈಟ್​ನ ಬಾತ್​ರೂಂನಲ್ಲಿ ಮಾಡಿದ ಅದೊಂದು ತಪ್ಪಿನಿಂದ ಸಿಕ್ಕಿಬಿದ್ದ !

(Former MLA Madhu Bangarappa alleged that BJP is nothing but Business Janatha Party)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ