AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ ಕ್ಷೇತ್ರದ ಪ್ರತಿ ಗ್ರಾಪಂಗೆ ಒಂದು ಕೋಟಿ ರೂಪಾಯಿ ಅನುದಾನ; ಗಾಲಿ ಜನಾರ್ದನ ರೆಡ್ಡಿ ಭರವಸೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಜೀವ ಕೊಟ್ಟು, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಸರ್ಕಾರದ ಅನುದಾನ ಸೇರಿದಂತೆ ಕೈಗಾರಿಕೆಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಗಂಗಾವತಿ ಕ್ಷೇತ್ರದ ಪ್ರತಿ ಗ್ರಾಪಂಗೆ ಒಂದು ಕೋಟಿ ರೂಪಾಯಿ ಅನುದಾನ; ಗಾಲಿ ಜನಾರ್ದನ ರೆಡ್ಡಿ ಭರವಸೆ
ಗಾಲಿ ಜನಾರ್ದನ ರೆಡ್ಡಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma|

Updated on: Jul 26, 2023 | 7:59 PM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ (Gangavati Assembly Constituency) ಪ್ರತಿಯೊಂದು ಗ್ರಾಮ ಪಂಚಾಯತಿಗೂ ಗ್ರಾಮಗಳ ಅಭಿವೃದ್ಧಿಗಾಗಿ ಒಂದು ಕೋಟಿ ರೂಪಾಯಿ ಒದಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಗಂಗಾವತಿ ನೂತನ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ಭರವಸೆ ನೀಡಿದ್ದಾರೆ. ಗಂಗಾವತಿ ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ, ನೂತನವಾಗಿ ಅಧಿಕಾರಕ್ಕೆ ಬಂದಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ತಮ್ಮ ಹೆಸರು ಉಳಿಯುವಂತೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇಂಥವರ ಅಧಿಕಾರದ ಅವಧಿಯಲ್ಲಿ ಈ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಗ್ರಾಮದ ಜನರು ಮಾತನಾಡಿಕೊಳ್ಳುವ ರೀತಿಯಲ್ಲಿ ನಿವೆಲ್ಲರೂ ಕೆಲಸ ಮಾಡಬೇಕು ಎಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಜೀವ ಕೊಟ್ಟು, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಸರ್ಕಾರದ ಅನುದಾನ ಸೇರಿದಂತೆ ಕೈಗಾರಿಕೆಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು ಎನ್ನುವ ರೀತಿಯಲ್ಲಿ ಕೆಲಸ ಮಾಡಲಾಗುವುದು. ಯಾರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಳೆ ಹಾನಿ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್: ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ನಂತರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಬಲಿತರಾಗಿ ಆಯ್ಕೆಯಾದ 11 ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು. ಸದ್ಯ ರಾಜ್ಯದಲ್ಲಿ ತಮ್ಮ ಪಕ್ಷದ ಏಕೈಕ ಶಾಸಕರಾಗಿರೋ ಜನಾರ್ದನ ರೆಡ್ಡಿಯವರು ಗ್ರಾಮ ಪಂಚಾಯತ್​​ನಲ್ಲೂ ತಮ್ಮ ಪಕ್ಷ ಬಲವರ್ಧನೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯತ್​ಗಳಿಗೆ ಅನುದಾನದ ಭರವಸೆ ನೀಡಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಮೇಲೆ ರೆಡ್ಡಿ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯತ್​ಗಳ ಅಭಿವೃದ್ಧಿ ಮಾಡಿದ್ರೆ, ಸುಲಭವಾಗಿ ಗ್ರಾಮೀಣ ಭಾಗದಲ್ಲಿ ಮತದಾರನ್ನ ಓಲೈಸಿಕೊಳ್ಳಬಹುದು ಎನ್ನೋ ಲೆಕ್ಕಚಾರ ಹಾಕಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರಬಹುದು. ಹೀಗಾವೇ ರೆಡ್ಡಿ ಇವಾಗಿನಿಂದಲೇ ತಯಾರಿಸಿ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ