AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಂಜಗಳನ್ನು ಜೈಲಿಗಟ್ಟಿ ನಗೆಪಾಟಲಿಗೆ ಈಡಾದ ಕೊಪ್ಪಳ ಪೊಲೀಸರು ಮತ್ತೆ ಅವುಗಳನ್ನು ಫಾರ್ಮ್ ಗೆ ಬಿಟ್ಟು ಬಂದ್ರು!

ಕಾರಟಗಿ ಸಮೀಪದಲ್ಲಿರರುವ ಕೋಳಿ ಫಾರ್ಮ್ ಗೆ ಹುಂಜಗಳನ್ನು ಬಿಡಲಾಗಿದೆ. ಕೋಳಿ ಕಾಳಗದ ಜೂಜು ಹಿನ್ನಲೆಯಲ್ಲಿ ಮೂರು ಹುಂಜಗಳನ್ನು ಕಾರಟಗಿ ಪೊಲೀಸರು ವಶಕ್ಕೆ ಪಡೆದಿದ್ದರು.

ಹುಂಜಗಳನ್ನು ಜೈಲಿಗಟ್ಟಿ ನಗೆಪಾಟಲಿಗೆ ಈಡಾದ ಕೊಪ್ಪಳ ಪೊಲೀಸರು ಮತ್ತೆ ಅವುಗಳನ್ನು ಫಾರ್ಮ್ ಗೆ ಬಿಟ್ಟು ಬಂದ್ರು!
ಜೈಲಿನಲ್ಲಿ ಬಂಧಿಯಾಗಿರುವ ಹುಂಜಗಳು
TV9 Web
| Edited By: |

Updated on: Jan 18, 2023 | 2:48 PM

Share

ಕೊಪ್ಪಳ: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಜೂಜುಕೋರರನ್ನು ಬಿಟ್ಟು ಹುಂಜಗಳನ್ನು ಬಂಧಿಸಿ ನಗೆಪಾಟಲಿಗೆ ಈಡಾದ ಘಟನೆ ಕೊಪ್ಪಳದಲ್ಲಿ ನಡೆದಿತ್ತು. ಸದ್ಯ ಈಗ ಪೊಲೀಸರು ಹುಂಜಗಳನ್ನು ಜೈಲಿನಿಂದ ಬಿಡುಗಡೆ ಮಾಡಿ ಕೋಳಿ ಫಾರ್ಮ್ ಗೆ ಬಿಟ್ಟು ಬಂದಿದ್ದಾರೆ.

ಕಾರಟಗಿ ಸಮೀಪದಲ್ಲಿರರುವ ಕೋಳಿ ಫಾರ್ಮ್ ಗೆ ಹುಂಜಗಳನ್ನು ಬಿಡಲಾಗಿದೆ. ಕೋಳಿ ಕಾಳಗದ ಜೂಜು ಹಿನ್ನಲೆಯಲ್ಲಿ ಮೂರು ಹುಂಜಗಳನ್ನು ಕಾರಟಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಕೋಳಿ ಕಾಳಗದ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ವಶಪಡಿಸಿಕೊಂಡಿದ್ದ ಕೋಳಿಗಳನ್ನು ಕಾರಟಗಿ ಪೊಲೀಸ್ ಠಾಣೆಯ ಬಂಧಿಖಾನೆಯಲ್ಲಿ ಬಂಧಿಸಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಹಿನ್ನಲೆ ಹುಂಜಗಳನ್ನು ಕೋಳಿ‌ ಫಾರ್ಮ್ ನಲ್ಲಿ ಬಿಡಲಾಗಿದೆ.

ಘಟನೆ ಹಿನ್ನೆಲೆ

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರು ಎಂಬಂತೆ ಕೊಪ್ಪಳ ಜಿಲ್ಲೆ ಕಾರಟಗಿ ಠಾಣೆ ಪೊಲೀಸರು ಕರ್ತವ್ಯ ಮೆರೆದಿದ್ದಾರೆ. ಇವರ ಈ ನಿಷ್ಠೆಗೆ ಜನ ನಗಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಕೋಳಿ ಕಾಳಗ ನಡೀತಿತ್ತು. ಆಗ ನಿನ್ನೆ(ಜ.17) ಸಂಜೆ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಜೂಜುಕೋರರನ್ನ ಬಿಟ್ಟು ಹುಂಜಗಳನ್ನ ಅರೆಸ್ಟ್ ಮಾಡಿದ್ದರು. ಅಲ್ಲದೆ ಸೆಲ್​ನಲ್ಲಿ ಹುಂಜಗಳನ್ನು ಕೂಡಿ ಹಾಕಿ ನಗೆಪಾಟಿಲಿಗೀಡಾಗಿದ್ದರು. ಇನ್ನು ದಾಳಿ ವೇಳೆ ಜೂಜುಕೋರರು ಎಸ್ಕೇಪ್ ಆಗಿದ್ದು ಕೋಳಿಗಳು ಸಿಕ್ಕಿಬಿದ್ದಿದ್ದವು.

ಸಂಕ್ರಾಂತಿ, ಯುಗಾದಿ, ದೀಪಾವಳಿ ಹಬ್ಬದ ನೆಪದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಡೆ ನಿಷೇಧಿತ ಕೋಳಿ ಕಾಳಗ ನಡೆಸಲಾಗುತ್ತದೆ. ಕೋಳಿ ಕಾಳಗಕ್ಕೆ ಕೋಟ್ಯಂತರ ರೂಪಾಯಿ ಜೂಜು ವಹಿವಾಟು ನಡೆಯುತ್ತೆ. ರಾಜಕೀಯ ಮುಖಂಡರೇ ಕೋಳಿ ಕಾಳಗ ಆಯೋಜನೆ ಮಾಡುತ್ತಾರೆ. ಈ ಕಾರಣಕ್ಕೆ ಪೊಲೀಸರು ಅವರನ್ನು ಅಲ್ಲೇ ಬಿಟ್ಟು, ಕೋಳಿ, ಬೈಕ್ ಗಳನ್ನು ಮಾತ್ರ ಜಪ್ತಿ ಮಾಡಿ ಪ್ರಕರಣ ದಾಖಲಿಸುವ ನಾಟಕ ಆಡ್ತಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಇನ್ನು ಕಳೆದ ಕೆಲ ದಿನಗಳ ಹಿಂದಷ್ಟೆ ಇದೇ ಠಾಣೆ ಸರಹದ್ದಿನಲ್ಲಿ ಬಿಜೆಪಿ‌ ಮುಖಂಡನೊರರ್ವ ಕಾಳಗ ನಡೆಸಿ ಸಿಕ್ಕಿಬಿದ್ದಿದ್ದ. ಅಷ್ಟಾದ್ರು ಪೊಲೀಸರು ಮಾತ್ರ ಕಠಿಣ ಕ್ರಮ ಕೈಗೊಳ್ಳದೇ ಈ ರೀತಿ ನಗೆಪಾಟಲಿನ ಕೆಲಸ ಮಾಡಿದ್ದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್