AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿಜೀ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಅಂದಿದ್ರು, ನಾವು ಬಿಜೆಪಿಯನ್ನು ಒದ್ದೋಡಿಸಿ ಎಂದು ಕರೆ ನೀಡಿದ್ದೇವೆ: ಬಿ.ಕೆ.ಹರಿಪ್ರಸಾದ್

ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಯು ಇಂದು(ಜ.17) ಕೊಪ್ಪಳವನ್ನ ತಲುಪಿದ್ದು, ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮ ಜರುಗಿತು ಈ ವೇಳೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಗಾಂಧಿಜೀ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಅಂದಿದ್ರು, ನಾವು ಬಿಜೆಪಿಯನ್ನು ಒದ್ದೋಡಿಸಿ ಎಂದು ಕರೆ ನೀಡಿದ್ದೇವೆ: ಬಿ.ಕೆ.ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 17, 2023 | 8:45 PM

Share

ಕೊಪ್ಪಳ: ಗಾಂಧೀಜಿಯವರು ಬ್ರಿಟಿಷರಿಗೆ ಭಾರತ ಬಿಟ್ಟು ತೊಲಗಿ ಎಂದು ಹೇಳಿದ ಸ್ಥಳದಿಂದ ನಾವು ಯಾತ್ರೆ ಆರಂಭ ಮಾಡಿದ್ದೇವೆ. ಗಾಂಧಿಯವರು ಬ್ರಿಟಿಷರನ್ನ ಭಾರತ ಬಿಟ್ಟು ತೊಲಗಿ ಎಂದಿದ್ದರು, ನಾವು ಬಿಜೆಪಿಯವರನ್ನ ರಾಜ್ಯದಿಂದ ಒದ್ದೋಡಿಸಿ ಎನ್ನುವ ಕರೆ ನೀಡಿದ್ದೇವೆ. ಅವರ ನಾಯಕ ಸುಳ್ಳಿನ ಸರದಾರ, ಅವರ ಶಿಷ್ಯ ನಳೀನ್ ಕುಮಾರ್​ ಕಟೀಲ್ ಅಭಿವೃದ್ಧಿ ಬಗ್ಗೆ ಕೇಳಬೇಡಿ, ಲವ್ ಜಿಹಾದ್ ಬಗ್ಗೆ ಮಾತಾಡಿ ಎನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾತೆತ್ತಿದ್ರೆ ಯುಪಿ, ಗುಜರಾತ್ ಮಾಡೆಲ್ ಮಾಡುತ್ತೇವೆ ಎನ್ನುತ್ತಾರೆ. ರಾಜ್ಯದಲ್ಲಿ ಮಹಿಳೆಯರ ನಾಪತ್ತೆ, ಅತ್ಯಾಚಾರ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣ ಗುಜರಾತ್, ಯುಪಿ ಮಾಡೆಲ್ ಕಾರಣನಾ? ಎಂದು ಪ್ರಜಾಧ್ವನಿ ಸಮಾವೇಶದಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಲಾಡ್ಯರು, ಬಡವರ ಮೇಲೆ ದೌರ್ಜನ್ಯ ಮಾಡುವ ಕಾಲ‌ ಬಂದಿದೆ. ರಾಜ್ಯದ ಕೀರ್ತಿಗೆ ಅಪಕೀರ್ತಿ ತರುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. ಶಿವಮೊಗ್ಗಕ್ಕೆ ಒಬ್ಬ ಭಯೋತ್ಪಾದಕ ಎಂಪಿ ಬಂದಿದ್ದರು. ಅವರು ಚಾಕು ಹಿಡರಿ, ಸಾಣೆ ಹಿಡಿರಿ ಎನ್ನುವ ಮೂಲಕ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಿದ್ದರು ಎಂದರು.

ಇದನ್ನೂ ಓದಿ:ಭಯೋತ್ಪಾದಕರು, ಉಗ್ರರಿಗೆ ಸರ್ಟಿಫಿಕೇಟ್ ಕೊಡುವ ಯಾತ್ರೆ: ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಗೆ ಎನ್. ರವಿಕುಮಾರ್ ವ್ಯಂಗ್ಯ

ಕೆಪಿಸಿಸಿ ಕಚೇರಿಯಿಂದ ಆರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಇಂದು(ಜ.17) ಕೊಪ್ಪಳಕ್ಕೆ ಬಂದಿದ್ದು, ಮೊದಲಿಗೆ ಕಾಂಗ್ರೆಸ್​ನ ಎಲ್ಲಾ ನಾಯಕರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡುವ ಮೂಲಕ ಶ್ರೀಗಳ ಆರೋಗ್ಯವನ್ನ ವಿಚಾರಿಸಿದರು. ನಂತರ ನಗರದ ಬಸವೇಶ್ವರ ವೃತ್ತದ ಬಳಿಯಿಂದ ಭವ್ಯ ಮೆರವಣಿಗೆ ಮೂಲಕ ತಾಲೂಕು ಕ್ರಿಡಾಂಗಣಕ್ಕೆ ತಲುಪಿತು ಈ ವೇಳೆ ಕಾಂಗ್ರೆಸ್​ನ ಹಲವು ನಾಯಕರು ಉಪಸ್ಥಿತರಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ