AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿಜೀ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಅಂದಿದ್ರು, ನಾವು ಬಿಜೆಪಿಯನ್ನು ಒದ್ದೋಡಿಸಿ ಎಂದು ಕರೆ ನೀಡಿದ್ದೇವೆ: ಬಿ.ಕೆ.ಹರಿಪ್ರಸಾದ್

ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಯು ಇಂದು(ಜ.17) ಕೊಪ್ಪಳವನ್ನ ತಲುಪಿದ್ದು, ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮ ಜರುಗಿತು ಈ ವೇಳೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಗಾಂಧಿಜೀ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಅಂದಿದ್ರು, ನಾವು ಬಿಜೆಪಿಯನ್ನು ಒದ್ದೋಡಿಸಿ ಎಂದು ಕರೆ ನೀಡಿದ್ದೇವೆ: ಬಿ.ಕೆ.ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್
TV9 Web
| Edited By: |

Updated on: Jan 17, 2023 | 8:45 PM

Share

ಕೊಪ್ಪಳ: ಗಾಂಧೀಜಿಯವರು ಬ್ರಿಟಿಷರಿಗೆ ಭಾರತ ಬಿಟ್ಟು ತೊಲಗಿ ಎಂದು ಹೇಳಿದ ಸ್ಥಳದಿಂದ ನಾವು ಯಾತ್ರೆ ಆರಂಭ ಮಾಡಿದ್ದೇವೆ. ಗಾಂಧಿಯವರು ಬ್ರಿಟಿಷರನ್ನ ಭಾರತ ಬಿಟ್ಟು ತೊಲಗಿ ಎಂದಿದ್ದರು, ನಾವು ಬಿಜೆಪಿಯವರನ್ನ ರಾಜ್ಯದಿಂದ ಒದ್ದೋಡಿಸಿ ಎನ್ನುವ ಕರೆ ನೀಡಿದ್ದೇವೆ. ಅವರ ನಾಯಕ ಸುಳ್ಳಿನ ಸರದಾರ, ಅವರ ಶಿಷ್ಯ ನಳೀನ್ ಕುಮಾರ್​ ಕಟೀಲ್ ಅಭಿವೃದ್ಧಿ ಬಗ್ಗೆ ಕೇಳಬೇಡಿ, ಲವ್ ಜಿಹಾದ್ ಬಗ್ಗೆ ಮಾತಾಡಿ ಎನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾತೆತ್ತಿದ್ರೆ ಯುಪಿ, ಗುಜರಾತ್ ಮಾಡೆಲ್ ಮಾಡುತ್ತೇವೆ ಎನ್ನುತ್ತಾರೆ. ರಾಜ್ಯದಲ್ಲಿ ಮಹಿಳೆಯರ ನಾಪತ್ತೆ, ಅತ್ಯಾಚಾರ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣ ಗುಜರಾತ್, ಯುಪಿ ಮಾಡೆಲ್ ಕಾರಣನಾ? ಎಂದು ಪ್ರಜಾಧ್ವನಿ ಸಮಾವೇಶದಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಲಾಡ್ಯರು, ಬಡವರ ಮೇಲೆ ದೌರ್ಜನ್ಯ ಮಾಡುವ ಕಾಲ‌ ಬಂದಿದೆ. ರಾಜ್ಯದ ಕೀರ್ತಿಗೆ ಅಪಕೀರ್ತಿ ತರುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. ಶಿವಮೊಗ್ಗಕ್ಕೆ ಒಬ್ಬ ಭಯೋತ್ಪಾದಕ ಎಂಪಿ ಬಂದಿದ್ದರು. ಅವರು ಚಾಕು ಹಿಡರಿ, ಸಾಣೆ ಹಿಡಿರಿ ಎನ್ನುವ ಮೂಲಕ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಿದ್ದರು ಎಂದರು.

ಇದನ್ನೂ ಓದಿ:ಭಯೋತ್ಪಾದಕರು, ಉಗ್ರರಿಗೆ ಸರ್ಟಿಫಿಕೇಟ್ ಕೊಡುವ ಯಾತ್ರೆ: ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಗೆ ಎನ್. ರವಿಕುಮಾರ್ ವ್ಯಂಗ್ಯ

ಕೆಪಿಸಿಸಿ ಕಚೇರಿಯಿಂದ ಆರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಇಂದು(ಜ.17) ಕೊಪ್ಪಳಕ್ಕೆ ಬಂದಿದ್ದು, ಮೊದಲಿಗೆ ಕಾಂಗ್ರೆಸ್​ನ ಎಲ್ಲಾ ನಾಯಕರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡುವ ಮೂಲಕ ಶ್ರೀಗಳ ಆರೋಗ್ಯವನ್ನ ವಿಚಾರಿಸಿದರು. ನಂತರ ನಗರದ ಬಸವೇಶ್ವರ ವೃತ್ತದ ಬಳಿಯಿಂದ ಭವ್ಯ ಮೆರವಣಿಗೆ ಮೂಲಕ ತಾಲೂಕು ಕ್ರಿಡಾಂಗಣಕ್ಕೆ ತಲುಪಿತು ಈ ವೇಳೆ ಕಾಂಗ್ರೆಸ್​ನ ಹಲವು ನಾಯಕರು ಉಪಸ್ಥಿತರಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?