AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ‘ಕೈ’ ಮುಖಂಡರೇ ಕಾರಣ, ಎಂಪಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವು: ಅನ್ಸಾರಿ ಬಾಂಬ್

ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲುಕಂಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ವಪಕ್ಷದ ನಾಯಕರ ವಿರುದ್ಧವೇ ಸಿಡಿದೆದಿದ್ದಾರೆ, ಪಕ್ಷದಲ್ಲಿ ಇದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ಕುತ್ತಿಗೆ ಹಿಡಿದು ಆಚೆ ಹಾಕಬೇಕು ಎಂದು ಇತ್ತೀಗೆ ನೀಡಿದ್ದ ಅನ್ಸಾರಿ ಹೇಳಿಕೆ ಕಾಂಗ್ರೆಸ್ ಪಾಳೆಯದಲ್ಲಿ ನಾನಾ ಚರ್ಚೆ ಹುಟ್ಟು ಹಾಕಿತ್ತು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಎಂಪಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ನನ್ನ ಸೋಲಿಗೆ ‘ಕೈ’ ಮುಖಂಡರೇ ಕಾರಣ, ಎಂಪಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವು: ಅನ್ಸಾರಿ ಬಾಂಬ್
ಇಕ್ಬಾಲ್ ಅನ್ಸಾರಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 25, 2024 | 6:22 PM

Share

ಬೆಂಗಳೂರು, (ಫೆಬ್ರವರಿ 25): ಈ ಬಾರಿ ಗಂಗಾವತಿ (Gangavathi) ವಿಧಾನಸಭೆ ಕ್ಷೇತ್ರದಲ್ಲಿ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಅಲ್ಪಮತಗಳ ಅಂತರಿಂದ ಸೋಲುಕಂಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ (iqbal ansari) ಸ್ವಪಕ್ಷದ ನಾಯಕ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದೀಗ ಅವರ ಮುನಿಸು ಮತ್ತಷ್ಟು ಸ್ಫೋಟಗೊಂಡಿದ್ದು, ನನ್ನ ಸೋಲಿಗೆ ‘ಕಾಂಗ್ರೆಸ್’ ಮುಖಂಡರೇ ಕಾರಣ. ಮುಸ್ಲಿಮ್​​ ಮುಖಂಡ ಬೆಳೆಯಬಾರದು ಎಂದು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಬಗ್ಗೆ ತಮ್ಮ ಸಮುದಾಯದ ಮನೆ-ಮನೆಗೂ ಮುಟ್ಟಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವು ಆಗುತ್ತೆ ಎಂದು ಹೇಳಿದ್ದು ಪಕ್ಷದಲ್ಲಿ ತಲ್ಲಣ ಮೂಡಿಸಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ರಾಜ್ಯದ ಅನೇಕ ಕಾಂಗ್ರೆಸ್ ನಾಯಕರು ನನ್ನ ಸೋಲಿಗೆ ಕಾರಣರಾಗಿದ್ದಾರೆ. ಕಾಂಗ್ರೆಸ್ ಮುಖಂಡರೇ ಜನಾರ್ದನರೆಡ್ಡಿ ಪರ ಕೆಲಸ ಮಾಡಿ ಸೋಲಿಸಿದ್ದಾರೆ. ನನಗೆ ಮಾಹಿತಿ ಇಲ್ಲದೆ ಕಾಂಗ್ರೆಸ್ ಸಭೆಗಳು ಆಗುತ್ತಿದೆ. ಅದಕ್ಕೆ ಯಾರು ಸಹ ಹೋಗಬೇಡಿ ಎಂದು ವಾಯ್ಸ್ ಮೆಸೇಜ್ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿರುವ ಇಕ್ಬಾಲ್ ಅನ್ಸಾರಿ, ನನ್ನ ಸಮುದಾಯದ ಪ್ರತಿಯೊಂದು ಮನೆಗೆ ಹೋಗಿ ಮೋಸದ ಬಗ್ಗೆ ಅರಿವು ಮೂಡಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವು ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಸಂಚಲನ ಮೂಡಿಸಿದ ಅನ್ಸಾರಿ ಹೇಳಿಕೆ

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ತಮಗಾದ ಅನ್ಯಾಯದ ಬಗ್ಗೆ ತಮ್ಮ ಸಮುದಾಯದ ಪ್ರತಿ ಮನೆ ಮನೆಗೂ ಮುಟ್ಟಿಸುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್​​​ನಲ್ಲಿ ತಲ್ಲಣ ಸೃಷ್ಟಿಸಿದೆ. ಇಕ್ಬಾಲ್ ಅನ್ಸಾರಿ ಮುಸ್ಲಿಂ ಸಮುದಾಯದ ಪ್ರಬಲ ನಾಯಕರಾಗಿದ್ದು, ಎಂಪಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವಾಗಲಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.

ಕುತ್ತಿಗೆ ಹಿಡಿದು ಆಚೆ ಹಾಕಬೇಕು ಎಂದಿದ್ದ ಅನ್ಸಾರಿ

ಪಕ್ಷದಲ್ಲಿ ಇದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ಕುತ್ತಿಗೆ ಹಿಡಿದು ಆಚೆ ಹಾಕಬೇಕು. ಪಕ್ಷದಲ್ಲಿಯೇ ಇರುತ್ತಾರೆ. ಆದರೆ, ಪಕ್ಷದ ವಿರೋಧಿ ಕೆಲಸ ಮಾಡುತ್ತಿರುತ್ತಾರೆ. ಪಕ್ಷದಲ್ಲಿಯೇ ಇದ್ದುಕೊಂಡು ಒಡೆಯುವ ಕೆಲಸ ಮಾಡುತ್ತಿರುತ್ತಾರೆ. ಇಂಥವರನ್ನು ಮುಲಾಜಿಲ್ಲದೆ ಕಿತ್ತು ಹಾಕಬೇಕು. ಇಂಥವರಿಂದಲೇ ಪಕ್ಷ ಸೋಲಾಗಲು ಕಾರಣವಾಗುತ್ತದೆ ಎಂದರು. ಸ್ವಪಕ್ಷೀಯರೇ ಬೇರೆ ಪಕ್ಷದವರೊಂದಿಗೆ ಕೈಜೋಡಿಸಿ, ಡೀಲ್ ಮಾಡುತ್ತಾರೆ. ಇದಕ್ಕೆ ಅವಕಾಶ ನೀಡಿದ್ದರಿಂದಲೇ ಸೋಲಾಗುತ್ತದೆ. ಹೀಗಾಗಿ ಪಕ್ಷ ಕಟ್ಟಲು ಇಂಥವರನ್ನು ಮೊದಲು ಆಚೆ ಹಾಕಬೇಕು. ಅವರು ಎಷ್ಟೇ ದೊಡ್ಡವರು ಇರಲಿ, ಮುಲಾಜಿಲ್ಲದೇ ಕ್ರಮ ವಹಿಸಬೇಕು ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆಗ್ರಹಿಸಿದ್ದರು. ಇದು ಕಾಂಗ್ರೆಸ್ ಪಾಳೆಯದಲ್ಲಿ ನಾನಾ ಚರ್ಚೆ ಹುಟ್ಟು ಹಾಕಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ