AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಭೇಟಿ; ಬೀಗಿ ಪೊಲೀಸ್ ಬಂದೋಬಸ್ತ್

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಇಂದು(ಡಿ.9) ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.​

ಗಂಗಾವತಿ: ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಭೇಟಿ; ಬೀಗಿ ಪೊಲೀಸ್ ಬಂದೋಬಸ್ತ್
ಪೂಜೆ ನೇರವೇರಿಸಿದ ಥಾವರ್​ ಚಂದ್​ ಗೆಹ್ಲೋಟ್
TV9 Web
| Edited By: |

Updated on:Dec 09, 2022 | 10:31 AM

Share

ಕೊಪ್ಪಳ: ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್(Thawar chand Gehlot) ಬೆಳಿಗ್ಗೆ 7.40 ಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇತ್ತೀಚಿಗಷ್ಟೇ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಇನ್ನು ರಾಜ್ಯಪಾಲರ ಆಗಮನ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಬೀಗಿ ಪೋಲಿಸ್ ಭದ್ರತೆ ಆಯೋಜಿಸಲಾಗಿತ್ತು. ಇನ್ನು ಪೂಜೆ ಸಲ್ಲಿಸಿದ ಬಳಿಕ ಬಳ್ಳಾರಿಗೆ ತೆರಳಲಿರುವ ರಾಜ್ಯಪಾಲ ಗೆಹ್ಲೋಟ್.

ರಾಜ್ಯಪಾಲರು ಬರುವ ವೇಳೆ ಪೂಜಾ ವಿವಾದ; ವಿದ್ಯಾದಾಸ ಬಾಬಾರಿಂದ ಹೈಡ್ರಾಮ

ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ರಾಜ್ಯಪಾಲರು ಬರುವ ವೇಳೆ ಪೂಜೆ ಮಾಡುವ ವಿಚಾರವಾಗಿ ವಿದ್ಯಾದಾಸ ಬಾಬಾ ಹೈಡ್ರಾಮಾ ಮಾಡಿದ್ದಾರೆ. ಬಾಬಾಗೆ ಪೂಜೆ ಮಾಡಲು ಅಧಿಕಾರಿಗಳು ಅವಕಾಶ ನೀಡದ ಹಿನ್ನಲೆ ಸ್ಥಳದಲ್ಲಿಯೇ ಧರಣಿ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಪೊಲೀಸರು ವಿದ್ಯಾದಾಸರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾದಾಸ ಬಾಬಾ ಸ್ವಾಮೀಜಿ ಮೇಲೆ ವಿವಾದ ಹಿನ್ನಲೆ ಪೂಜೆಯಿಂದ ಬಿಡಿಸಲಾಗಿತ್ತು‌. ಇದೀಗ ನ್ಯಾಯಾಲಯದ ಮುಖಾಂತರ ಮತ್ತೆ ಅವಕಾಶ ಪಡೆದಿರುವ ಬಾಬಾ. ಅಂಜನಾದ್ರಿಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಆಗ್ರಹ ಮಾಡಿದ್ದಾರೆ. ಆದರೆ ಕೊಪ್ಪಳ ಜಿಲ್ಲಾಡಳಿತದಿಂದ ಪೂಜೆಗೆ ನಿರಾಕರಣೆ ಮಾಡಲಾಗಿದ್ದು, ವಿದ್ಯಾದಾಸ ಹಾಗೂ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ವಿದ್ಯಾದಾಸರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಜನಾದ್ರಿಯಲ್ಲಿ ನನಗೆ ಪೂಜೆ ಮಾಡುವುದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ ಎನ್ನುತ್ತಿರುವ ಬಾಬಾ. ಆದರೆ ಸರ್ಕಾರ ಇವಾಗ ಬೇರೆಯವರನ್ನ ನೇಮಿಸಿದ್ದು, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದೆ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 am, Fri, 9 December 22

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ