AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗಡಿನ ಮನೆಗೆ 1 ಲಕ್ಷ ರೂ. ವಿದ್ಯುತ್ ಬಿಲ್: ವೃದ್ಧೆ ನಿವಾಸಕ್ಕೆ ದೌಡಾಯಿಸಿ ಸಮಸ್ಯೆ ನಿವಾರಿಸಿದ ಜೆಸ್ಕಾಂ ಅಧಿಕಾರಿ: ಅಜ್ಜಿ ಫುಲ್ ಖುಷ್

ಕೊಪ್ಪಳದ 90 ವರ್ಷದ ಅಜ್ಜಿ ಮನೆಗೆ 1 ಲಕ್ಷ ರೂ ವಿದ್ಯುತ್​ ಬಿಲ್​ ಬಂದ ಸುದ್ದಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಜೆಸ್ಕಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಅಜ್ಜಿ ವಿದ್ಯುತ್​ ಬಿಲ್ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ತಗಡಿನ ಮನೆಗೆ 1 ಲಕ್ಷ ರೂ. ವಿದ್ಯುತ್ ಬಿಲ್: ವೃದ್ಧೆ ನಿವಾಸಕ್ಕೆ ದೌಡಾಯಿಸಿ ಸಮಸ್ಯೆ ನಿವಾರಿಸಿದ ಜೆಸ್ಕಾಂ ಅಧಿಕಾರಿ: ಅಜ್ಜಿ ಫುಲ್ ಖುಷ್
ವೃದ್ಧೆ ನಿವಾಸಕ್ಕೆ ಜೆಸ್ಕಾಂ ಅಧಿಕಾರಿಗಳು ಭೇಟಿ
ರಮೇಶ್ ಬಿ. ಜವಳಗೇರಾ
|

Updated on: Jun 22, 2023 | 12:54 PM

Share

ಕೊಪ್ಪಳ: ಇಲ್ಲಿನ ಭಾಗ್ಯನಗರದ 90 ವರ್ಷದ ಗಿರಿಜಮ್ಮನ ತಗಡಿನ ಚಿಕ್ಕ ಮನೆಯ ವಿದ್ಯುತ್​ ಬಿಲ್(electricity bill)​ ಒಂದು ಲಕ್ಷ ರೂ. ಬಂದಿದ್ದು, ಈ ಬಗ್ಗೆ ಟಿವಿ9 ಕನ್ನಡ ವಿಸ್ತೃತವಾಗಿ ವರದಿ ಬಿತ್ತರಿಸಿದ ಬೆನ್ನಲ್ಲೇ ಇದೀಗ ವೃದ್ಧೆಯ ನಿವಾಸಕ್ಕೆ ಖುದ್ದು ಜೆಸ್ಕಾಂ ಅಧಿಕಾರಿಗಳು ಭೇಟಿ ದೌಡಾಯಿಸಿದ್ದಾರೆ. ಕೊಪ್ಪಳದ ಭಾಗ್ಯನಗರದಲ್ಲಿರುವ ಗಿರಿಜಮ್ಮನ ಮನೆಗೆ ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ (gescom executive engineer) ರಾಜೇಶ ಭೇಟಿ ನೀಡಿದ್ದು, ಮನೆಯ ಮೀಟರ್​ ಪರೀಶಿಲನೆ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜೇಶ, 2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಗಿರಿಜಮ್ಮನ ಮನೆಗೆ ಭಾಗ್ಯಜ್ಯೋತಿ ಯೋಜನೆ ಇದೆ. ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉಪಯೋಗ ಮಾಡಿಲ್ಲ. ಈಗ ಬಂದಿರುವ ವಿದ್ಯುತ್​ ಬಿಲ್ ರಿವೈಸ್ ಮಾಡುತ್ತೇವೆ. ಅಜ್ಜಿ ಬಿಲ್​ ಕಟ್ಟುವಂತಿಲ್ಲ ಎಂದು ಹೇಳಿದರು. ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ರಾಜೇಶ್​ ಹೀಗೆ ಹೇಳುತ್ತಿದ್ದಂತೆಯೇ ಅಜ್ಜಿ ಗಿರಿಜಮ್ಮ ಫುಲ್ ಖುಷ್ ಆದರು. ಅಲ್ಲದೇ ಬಿಲ್ ಮಾಫಿ ಮಾಡುತ್ತೇವೆ ಎಂದಿದ್ದಕ್ಕೆ ರಾಜೇಶ್ ಅವರಿಗೆ ಅಜ್ಜಿ ಧನ್ಯವಾದ ಹೇಳಿದರು.

ಇನ್ನು ಗಿರಿಜಮ್ಮ ಮನೆಯ ವಿದ್ಯುತ್​ ಬಿಲ್​ 1 ಲಕ್ಷ ರೂ. ಬಂದಿರುವ ಸುದ್ದಿಯನ್ನು ನಿಮ್ಮ ಟಿವಿ9 ಕನ್ನಡ, ಇಂಧನ ಸಚಿವ ಕೆಜೆ ಜಾರ್ಜ್​ ಗಮನಕ್ಕೆ ತಂದಿದ್ದು, ಮೀಟರ್​ ಸಮಸ್ಯೆಯಿಂದ ಈ ರೀತಿಯಾಗಿದೆ. ಅಜ್ಜಿ‌ ಅಷ್ಟೊಂದು ಕರೆಂಟ್​​ ಬಿಲ್​​ ಕಟ್ಟಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಕರಣದ ಹಿನ್ನೆಲೆ

ಕೊಪ್ಪಳದ ಭಾಗ್ಯನಗರದಲ್ಲಿ ಒಂದು ಚಿಕ್ಕ ಶೆಡ್​ನಲ್ಲಿ ವಾಸವಿರುವ 90 ವರ್ಷದ ಗಿರಿಜಮ್ಮ ಎನ್ನುವ ಅಜ್ಜಿ ಮನೆಗೆ ಜೆಸ್ಕಾಂ ಸಿಬ್ಬಂದಿ ಬರೋಬ್ಬರಿ 1,03,315 ರೂ. ವಿದ್ಯುತ್ ಬಿಲ್ ನೀಡಿದ್ದರು. ಭಾಗ್ಯಜ್ಯೋತಿ ಹೊಂದಿದ್ದ ಅಜ್ಜಿ ಮನೆಗೆ ಈ ಹಿಂದೆ ಪ್ರತಿ ತಿಂಗಳು 70ರಿಂದ 80 ರೂ. ಬಿಲ್​ ಬರುತ್ತಿತ್ತು. ಆದ್ರೆ, ಕಳೆದ ಆರು ತಿಂಗಳ ಹಿಂದೆ ಜೆಸ್ಕಾಂ ಸಿಬ್ಬಂದಿ ಹೊಸ ಮೀಟರ್ ಅವಳವಡಿಸಿದ್ದರು. ಅದಾದ ಬಳಿಕ ಇದೀಗ ಅಜ್ಜಿ ಮನೆಗೆ ಒಂದು ಲಕ್ಷ ಚಿಲ್ಲರೆ ಬಿಲ್​ ಬಂದಿದೆ.  ಒಂದೊತ್ತಿನ ಊಟಕ್ಕೂ ಪರದಾಡುವ ಅಜ್ಜಿ ಇಷ್ಟೊಂದು ಬಿಲ್​ ಎಲ್ಲಿಂದ ಕಟ್ಟಲಿ ಎಂದು ಕಣ್ಣೀರಿಟ್ಟಿತ್ತು. ಈ ಬಗ್ಗೆ ನಿಮ್ಮ ಟಿವಿ9 ಕನ್ನಡ ವಿಸ್ತೃತವಾಗಿ ವರದಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ಗಮನಸೆಳೆದಿತ್ತು.

ಇನ್ನಷ್ಟು ಕೊಪ್ಪಳ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ