AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಫ್ಟ್ ಪಾಲಿಟಿಕ್ಸ್: ಇಂದು ರಾಜ್ಯದ ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶಕ್ಕೆ

2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಈ ಹಿನ್ನಲೆ ರಾಜ್ಯದ ವಿವಿದೆಡೆ ಒಂದೇ ದಿನ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶಕ್ಕೆ ಪಡೆಯಲಾಗಿದೆ.

ಗಿಫ್ಟ್ ಪಾಲಿಟಿಕ್ಸ್: ಇಂದು ರಾಜ್ಯದ ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶಕ್ಕೆ
ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬಂಗಾರ ವಶ
ಕಿರಣ್ ಹನುಮಂತ್​ ಮಾದಾರ್
|

Updated on: Mar 26, 2023 | 11:42 AM

Share

ಕೊಪ್ಪಳ: 2023ರ ವಿಧಾನಸಭಾ ಚುನಾವಣೆಗೆ(Karnataka assembly election) ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಇದೀಗ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ ನಡೆಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷದ 15 ಸಾವಿರ ರೂಪಾಯಿಯ ಜೊತೆ ಬಟ್ಟೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ. ಕೊಪ್ಪಳದಿಂದ ಹೊಸಪೇಟೆಗೆ ಗೌತಮ್ ಜೈನ್ ಹಾಗೂ ಜಿತೇಂದ್ರ ಜೈನ್ ಎನ್ನುವವರು ದಾಖಲೆ ಇಲ್ಲದ ಲಕ್ಷಾಂತರೂ ಹಣವನ್ನ ಸ್ಕೂಟಿಯಲ್ಲಿ ಇಟ್ಟುಕೊಂಡು ತೆರಳುತ್ತಿದ್ದರು. ಈ ವೇಳೆ ಸಿಪಿಐ ಸಂತೋಷ ಹಳ್ಳೂರ್‌ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ. ಕೊಪ್ಪಳದ ನಗರಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇನ್ನು ಇದೇ ಸಂದರ್ಭದಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಚೆಕ್​ಪೋಸ್ಟ್​​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಇಳಕಲ್​​ನಿಂದ ಕುಷ್ಟಗಿ ಕಡೆ ಹೋಗುತ್ತಿದ್ದ ಮಹಿಂದ್ರಾ ಸ್ಕಾರ್ಫಿಯೋ ಕಾರ್​ನ್ನ ತಪಾಸಣೆ ಮಾಡಿದ ವೇಳೆ ಹಣ ಪತ್ತೆಯಾಗಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಜೇಂದ್ರಗಡ ಪಟ್ಟಣದ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಸೀಜ್

ಗದಗ: ಗಜೇಂದ್ರಗಡ ಪಟ್ಟಣದ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ:ದಾಖಲೆಗಳಿಲ್ಲದೆ ಅಕ್ರಮವಾಗಿ ಹಣ ಸಾಗಾಟ: 1.14 ಕೋಟಿ ರೂ. ಹಣ ಜಪ್ತಿ, ಓರ್ವ ವ್ಯಕ್ತಿಯ ಬಂಧನ

ಸೂಕ್ತ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಕೆಜಿ ಬೆಳ್ಳಿ ಆಭರಣ ವಶ

ಬೆಂಗಳೂರು: ಸೂಕ್ತ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಕೆ.ಜಿ ಬೆಳ್ಳಿ ಆಭರಣವನ್ನ ಜಪ್ತಿ ಮಾಡಲಾಗಿದೆ. ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!