AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತೊಲೆ ಬಂಗಾರದ ಸರ ನುಂಗಿದ ಸಾಕುನಾಯಿ; ಯಾವಾಗ ಹೊರಬರುತ್ತೆ ಎಂದು ನಾಯಿಯ ಹಿಂದೆ ಅಲೆಯುವಂತಾಗಿದೆ ಪರಿಸ್ಥಿತಿ

ಪಶುವೈದ್ಯರ ಹತ್ತಿರ ನಾಯಿ ತಪಾಸಣೆ ನಡೆಸಿದ ನಂತರವೇ ಸಾಕುನಾಯಿ ಚೈನ್ ನುಂಗಿರುವುದು ಖಚಿತಗೊಂಡಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.

2 ತೊಲೆ ಬಂಗಾರದ ಸರ ನುಂಗಿದ ಸಾಕುನಾಯಿ; ಯಾವಾಗ ಹೊರಬರುತ್ತೆ ಎಂದು ನಾಯಿಯ ಹಿಂದೆ ಅಲೆಯುವಂತಾಗಿದೆ ಪರಿಸ್ಥಿತಿ
ಚಿನ್ನದ ಸರ ನುಂಗಿದ ಸಾಕುನಾಯಿ
TV9 Web
| Edited By: |

Updated on: Jun 12, 2021 | 7:34 AM

Share

ಕೊಪ್ಪಳ: ರಾತ್ರಿ ಮಲಗುವ ಮುನ್ನ ಬಿಚ್ಚಿಟ್ಟ ಬಂಗಾರದ ಸರವನ್ನು ಮನೆಯ ಸಾಕುನಾಯಿ ನುಂಗಿದ ವಿಚಿತ್ರ ಘಟನೆಯೊಂದು ಕೊಪ್ಪಳದ ಜಿಲ್ಲೆ ಕಾರಟಗಿಯಲ್ಲಿ ನಡೆದಿದೆ. ಕಾರಟಗಿ ನಿವಾಸಿ ದಿಲೀಪ್ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಸಾಕುನಾಯಿಯೇ ಸುಮಾರು 80 ಸಾವಿರ ಬೆಲೆಬಾಳುವ ಬಂಗಾರದ ಚೈನ್​ನ್ನು ನುಂಗಿಹಾಕಿತ್ತು.

ರಾತ್ರಿ ಮಲಗುವಾಗ ಕಾರಟಗಿ ನಿವಾಸಿ ದಿಲೀಪ್ ಅವರು ಬಂಗಾರದ ಚೈನ್​ ಅನ್ನು ತೆಗೆದು ಮಲಗಿದ್ದರು. ಆದರೆ ರಾತ್ರಿ ಅವರ ಸಾಕುನಾಯಿ ಆ ಬಂಗಾರದ ಚೈನ್​ನ್ನು ನುಂಗಿಬಿಟ್ಟಿದೆ. ಮಾರನೇ ದಿನ ಬಂಗಾರದ ಚೈನ್ ನಾಪತ್ತೆಯಾದದ್ದು ಬೆಳಕಿಗೆ ಬಂದ ತಕ್ಷಣವೇ ದಿಲೀಪ್ ಅವರಿಗೆ ಅನುಮಾನ ಬಂದಿತ್ತು. ಆದರೆ ಚೈನ್ ಕಳುವಾಗಿರಲು ಸಾಧ್ಯವಿರಲಿಲ್ಲ.  ರಾತ್ರಿ ಹತ್ತಿರವೇ ಇದ್ದ ನಾಯಿ ನುಂಗಿರುವ ಅನುಮಾನ ಬಂದು ಅವರು ಪಶು ವೈದ್ಯರ ಬಳಿ ಪರೀಕ್ಷೆ ನಡೆಸಿದ್ದಾರೆ.

ಪಶುವೈದ್ಯರ ಹತ್ತಿರ ನಾಯಿ ತಪಾಸಣೆ ನಡೆಸಿದ ನಂತರವೇ ಸಾಕುನಾಯಿ ಚೈನ್ ನುಂಗಿರುವುದು ಖಚಿತಗೊಂಡಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಾಕುನಾಯಿಯ ಬಹಿರ್ದೆಸೆ ಮೂಲಕ ಬಂಗಾರದ ಚೈನ್ ಹೊರಬರಲು ಅವರು ಕಾದಿದ್ದಾರೆ. ಸದ್ಯ ಬಂಗಾರ ತುಂಡು ತುಂಡಾಗಿ ಅರ್ಧ ತೊಲೆಯಷ್ಟು ಬಂಗಾರ ಮಾತ್ರ ಹೊರಬಂದಿದೆ. ಇನ್ನೂ ಒಂದೂವರೆ ತೊಲೆಯಷ್ಟು ಬಂಗಾರ ಸಾಕುನಾಯಿಯ ಹೊಟ್ಟೆಯಲ್ಲಿದ್ದು, ನಾಯಿ ಬಹಿರ್ದೆಸೆಗೆ ಹೋಗುವುದನ್ನೇ ಕಾಯುವಂತಾಗಿದೆ.

ಇದನ್ನೂ ಓದಿ: ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್​ಹೋಲ್​ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್

Fact Check: ನೀತಾ ಅಂಬಾನಿಗೆ ನಮಸ್ಕಾರ ಮಾಡುತ್ತಿರುವ ನರೇಂದ್ರ ಮೋದಿ, ಸಾಮಾಜಿಕ ಮಾಧ್ಯಮಗಳಲ್ಲಿ;ಫೇಕ್ ಫೋಟೊ; ವೈರಲ್ (Gold Chain swallowed by pet dog in Koppal)

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್