AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತೊಲೆ ಬಂಗಾರದ ಸರ ನುಂಗಿದ ಸಾಕುನಾಯಿ; ಯಾವಾಗ ಹೊರಬರುತ್ತೆ ಎಂದು ನಾಯಿಯ ಹಿಂದೆ ಅಲೆಯುವಂತಾಗಿದೆ ಪರಿಸ್ಥಿತಿ

ಪಶುವೈದ್ಯರ ಹತ್ತಿರ ನಾಯಿ ತಪಾಸಣೆ ನಡೆಸಿದ ನಂತರವೇ ಸಾಕುನಾಯಿ ಚೈನ್ ನುಂಗಿರುವುದು ಖಚಿತಗೊಂಡಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.

2 ತೊಲೆ ಬಂಗಾರದ ಸರ ನುಂಗಿದ ಸಾಕುನಾಯಿ; ಯಾವಾಗ ಹೊರಬರುತ್ತೆ ಎಂದು ನಾಯಿಯ ಹಿಂದೆ ಅಲೆಯುವಂತಾಗಿದೆ ಪರಿಸ್ಥಿತಿ
ಚಿನ್ನದ ಸರ ನುಂಗಿದ ಸಾಕುನಾಯಿ
TV9 Web
| Edited By: |

Updated on: Jun 12, 2021 | 7:34 AM

Share

ಕೊಪ್ಪಳ: ರಾತ್ರಿ ಮಲಗುವ ಮುನ್ನ ಬಿಚ್ಚಿಟ್ಟ ಬಂಗಾರದ ಸರವನ್ನು ಮನೆಯ ಸಾಕುನಾಯಿ ನುಂಗಿದ ವಿಚಿತ್ರ ಘಟನೆಯೊಂದು ಕೊಪ್ಪಳದ ಜಿಲ್ಲೆ ಕಾರಟಗಿಯಲ್ಲಿ ನಡೆದಿದೆ. ಕಾರಟಗಿ ನಿವಾಸಿ ದಿಲೀಪ್ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಸಾಕುನಾಯಿಯೇ ಸುಮಾರು 80 ಸಾವಿರ ಬೆಲೆಬಾಳುವ ಬಂಗಾರದ ಚೈನ್​ನ್ನು ನುಂಗಿಹಾಕಿತ್ತು.

ರಾತ್ರಿ ಮಲಗುವಾಗ ಕಾರಟಗಿ ನಿವಾಸಿ ದಿಲೀಪ್ ಅವರು ಬಂಗಾರದ ಚೈನ್​ ಅನ್ನು ತೆಗೆದು ಮಲಗಿದ್ದರು. ಆದರೆ ರಾತ್ರಿ ಅವರ ಸಾಕುನಾಯಿ ಆ ಬಂಗಾರದ ಚೈನ್​ನ್ನು ನುಂಗಿಬಿಟ್ಟಿದೆ. ಮಾರನೇ ದಿನ ಬಂಗಾರದ ಚೈನ್ ನಾಪತ್ತೆಯಾದದ್ದು ಬೆಳಕಿಗೆ ಬಂದ ತಕ್ಷಣವೇ ದಿಲೀಪ್ ಅವರಿಗೆ ಅನುಮಾನ ಬಂದಿತ್ತು. ಆದರೆ ಚೈನ್ ಕಳುವಾಗಿರಲು ಸಾಧ್ಯವಿರಲಿಲ್ಲ.  ರಾತ್ರಿ ಹತ್ತಿರವೇ ಇದ್ದ ನಾಯಿ ನುಂಗಿರುವ ಅನುಮಾನ ಬಂದು ಅವರು ಪಶು ವೈದ್ಯರ ಬಳಿ ಪರೀಕ್ಷೆ ನಡೆಸಿದ್ದಾರೆ.

ಪಶುವೈದ್ಯರ ಹತ್ತಿರ ನಾಯಿ ತಪಾಸಣೆ ನಡೆಸಿದ ನಂತರವೇ ಸಾಕುನಾಯಿ ಚೈನ್ ನುಂಗಿರುವುದು ಖಚಿತಗೊಂಡಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಾಕುನಾಯಿಯ ಬಹಿರ್ದೆಸೆ ಮೂಲಕ ಬಂಗಾರದ ಚೈನ್ ಹೊರಬರಲು ಅವರು ಕಾದಿದ್ದಾರೆ. ಸದ್ಯ ಬಂಗಾರ ತುಂಡು ತುಂಡಾಗಿ ಅರ್ಧ ತೊಲೆಯಷ್ಟು ಬಂಗಾರ ಮಾತ್ರ ಹೊರಬಂದಿದೆ. ಇನ್ನೂ ಒಂದೂವರೆ ತೊಲೆಯಷ್ಟು ಬಂಗಾರ ಸಾಕುನಾಯಿಯ ಹೊಟ್ಟೆಯಲ್ಲಿದ್ದು, ನಾಯಿ ಬಹಿರ್ದೆಸೆಗೆ ಹೋಗುವುದನ್ನೇ ಕಾಯುವಂತಾಗಿದೆ.

ಇದನ್ನೂ ಓದಿ: ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್​ಹೋಲ್​ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್

Fact Check: ನೀತಾ ಅಂಬಾನಿಗೆ ನಮಸ್ಕಾರ ಮಾಡುತ್ತಿರುವ ನರೇಂದ್ರ ಮೋದಿ, ಸಾಮಾಜಿಕ ಮಾಧ್ಯಮಗಳಲ್ಲಿ;ಫೇಕ್ ಫೋಟೊ; ವೈರಲ್ (Gold Chain swallowed by pet dog in Koppal)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್