AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ನಾಮಕರಣಕ್ಕೆ ಗೋಲ್ಡನ್ ಜುಬಿಲಿ: ಪಿಯುಸಿ ವಿದ್ಯಾರ್ಥಿಗಳಿಗೆ ಚಿನ್ನದಂತಹ ಅವಕಾಶ ಕಲ್ಪಿಸಿದ ಶಿಕ್ಷಣ ಸಂಸ್ಥೆ

ಕರ್ನಾಟಕ ನಾಮಕರಣವಾಗಿ ಐವತ್ತನೇ ವರ್ಷದ ಸಂಭ್ರಮದಲ್ಲಿ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿರುವ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ವಿನೂತನ ಕೆಲಸಕ್ಕೆ ಮುಂದಾಗಿದೆ. ರಾಜ್ಯದ ನೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಇಚ್ಚೆಯನುಸಾರ ಪಿಯುಸಿ ವಿಜ್ಞಾನ ಅಥವಾ ಕಾಮರ್ಸ್ ಕೋರ್ಸ್ ಗೆ ಉಚಿತ ಪ್ರವೇಶ ನೀಡಲು ಮುಂದಾಗಿದೆ.

ಕರ್ನಾಟಕ ನಾಮಕರಣಕ್ಕೆ ಗೋಲ್ಡನ್ ಜುಬಿಲಿ: ಪಿಯುಸಿ ವಿದ್ಯಾರ್ಥಿಗಳಿಗೆ ಚಿನ್ನದಂತಹ ಅವಕಾಶ ಕಲ್ಪಿಸಿದ ಶಿಕ್ಷಣ ಸಂಸ್ಥೆ
ಪಿಯು ವಿದ್ಯಾರ್ಥಿಗಳಿಗೆ ಚಿನ್ನದಂತಹ ಅವಕಾಶ ಕಲ್ಪಿಸಿದ ಖಾಸಗಿ ಶಿಕ್ಷಣ ಸಂಸ್ಥೆ
Follow us
ಸಂಜಯ್ಯಾ ಚಿಕ್ಕಮಠ
| Updated By: ಸಾಧು ಶ್ರೀನಾಥ್​

Updated on: May 14, 2024 | 1:54 PM

ಕರ್ನಾಟಕ ನಾಮಕರಣವಾಗಿ ಐವತ್ತನೇ ವರ್ಷದ ಸಂಭ್ರಮದಲ್ಲಿ (ಚಿನ್ನದ ಮಹೋತ್ಸವ -Golden jubilee to Karnataka naming) ರಾಜ್ಯವಿದೆ. ಈ ಸವಿನೆನಪಿಗಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ (Gangavathi taluk) ಶ್ರೀರಾಮನಗರದಲ್ಲಿರುವ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ವಿನೂತನ ಕೆಲಸಕ್ಕೆ ಮುಂದಾಗಿದೆ. ರಾಜ್ಯದ ನೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಇಚ್ಚೆಯನುಸಾರ ಪಿಯುಸಿ ವಿಜ್ಞಾನ ಅಥವಾ ಕಾಮರ್ಸ್ ಕೋರ್ಸ್ ಗೆ ಉಚಿತ ಪ್ರವೇಶ ( free education) ನೀಡಲು ಮುಂದಾಗಿದೆ. ಅವರಿಗೆ ಎರಡು ವರ್ಷದ ಶುಲ್ಕ, ವಸತಿ ವ್ಯವಸ್ಥೆ, ಪುಸ್ತಕಗಳು, ಸಮವಸ್ತ್ರವನ್ನು ಉಚಿತವಾಗಿ ನೀಡಲು ಮುಂದಾಗಿದೆ.

ಹೌದು ಈ 2023-24 ನೇ ಸಾಲಿನಲ್ಲಿ, ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಪ್ರಥಮ ಬಂದ ಮೊದಲ ವಿದ್ಯಾರ್ಥಿ, ಆಂಗ್ಲಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಬಂದ ವಿದ್ಯಾರ್ಥಿ, ನವೋದಯ ಶಾಲೆಯಲ್ಲಿ ಜಿಲ್ಲೆಗೆ ಮೊದಲ ಬಂದ ವಿದ್ಯಾರ್ಥಿ… ಹೀಗೆ ಪ್ರತಿಯೊಂದು ಜಿಲ್ಲೆಗೆ ಮೂರು ವಿದ್ಯಾರ್ಥಿಗಳಂತೆ, ರಾಜ್ಯದ ಒಟ್ಟು ನೂರು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲು ನಿರ್ಧಾರ ಮಾಡಲಾಗಿದೆ.

Also Read: ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು

ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಬಹುತೇಕ ವಿದ್ಯಾರ್ಥಿಗಳು ಬಡವರಾಗಿರುತ್ತಾರೆ. ಅಂತವರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಅವರಿಗೆ ಉಚಿತವಾಗಿ ಶಿಕ್ಷಣ ನೀಡಲು ಸಂಸ್ಥೆ ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಂಸ್ಥೆಯ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ವಿದ್ಯಾರ್ಥಿಗಳು ತಮ್ಮ ಮಾರ್ಕ್ಸ್ ಕಾರ್ಡ್ ಹಾಗೂ ಸ್ಥಳೀಯ ಡಿಡಿಪಿಐ ಅವರಿಂದ ಒಂದು ಪ್ರಮಾಣ ಪತ್ರ ತಂದರೆ ಅವರಿಗೆ ಉಚಿತವಾಗಿ ವಸತಿ ಸಹಿತ ಪ್ರವೇಶಾತಿ ನೀಡುತ್ತೇವೆ. ಜೂನ್ 1 ರೊಳಗಾಗಿ ಬಂದು ಪ್ರವೇಶ ಪಡೆಯಬಹುದು ಅಂತ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ