AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಪ್ಪ ಆಚಾರ್ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಬಸವರಾಜ ರಾಯರೆಡ್ಡಿ ವಿರುದ್ಧ ತೀವ್ರ ಆಕ್ರೋಶ

ಪರೋಕ್ಷವಾಗಿ ಹಾಲಪ್ಪ ಆಚಾರ್​ಗೆ ಮಕ್ಕಳು ಇಲ್ಲ ಅಂತ ರಾಯರೆಡ್ಡಿ ವ್ಯಂಗ್ಯವಾಗಿ ಮಾತನಾಡಿದ್ದರು. ರಾಯರೆಡ್ಡಿ ಮಾತಿಗೆ ಸಚಿವ ಹಾಲಪ್ಪ ಆಚಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಲಪ್ಪ ಆಚಾರ್ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಬಸವರಾಜ ರಾಯರೆಡ್ಡಿ ವಿರುದ್ಧ ತೀವ್ರ ಆಕ್ರೋಶ
ಆಕ್ರೋಶ ವ್ಯಕ್ತಪಡಿಸಿದ ಹಾಲಪ್ಪ ಆಚಾರ್ ಬೆಂಬಲಿಗರು
TV9 Web
| Edited By: sandhya thejappa|

Updated on: Aug 25, 2021 | 10:52 AM

Share

ಕೊಪ್ಪಳ: ಸಚಿವ ಹಾಲಪ್ಪ ಆಚಾರ್ರವರ (Halappa Achar) ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy) ನಡೆಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಹಾಲಪ್ಪ ಆಚಾರ್ ವೈಯಕ್ತಿಕ ಬದುಕಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ ಬಸವರಾಜ ರಾಯರೆಡ್ಡಿ, ‘6 ಹಡೆದಾಕೆ ಮುಂದೆ 3 ಹಡೆದಾಕೆ ಏನು ಮಾಡುತ್ತಾಳೆ’ ಎಂದಿದ್ದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದ್ದರು. ಮಾತಿನ ಭರದಲ್ಲಿ ಸಚಿವ ಹಾಲಪ್ಪ ಆಚಾರ್ ವೈಯಕ್ತಿಕ ಜೀವನವನ್ನ ರಾಯರೆಡ್ಡಿ ಟೀಕಿಸಿದ್ದರು.

ಪರೋಕ್ಷವಾಗಿ ಹಾಲಪ್ಪ ಆಚಾರ್​ಗೆ ಮಕ್ಕಳು ಇಲ್ಲ ಅಂತ ರಾಯರೆಡ್ಡಿ ವ್ಯಂಗ್ಯವಾಗಿ ಮಾತನಾಡಿದ್ದರು. ರಾಯರೆಡ್ಡಿ ಮಾತಿಗೆ ಸಚಿವ ಹಾಲಪ್ಪ ಆಚಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಪ್ಪ ಆಚಾರ್ ಬೆಂಬಲಿಗರಾದ ವೀರಣ್ಣ ಹುಬ್ಬಳ್ಳಿ ಎಂಬುವವರು, ಹಾಲಪ್ಪ ಆಚಾರ್ ವೈಯಕ್ತಿಕ ಬದುಕಿನ ಬಗ್ಗೆ ಮಾತಾನಡಿದ್ದಕ್ಕೆ ನಿನಗೆ ನಾಚಿಕೆಯಾಗಬೇಕು. ನಿನ್ನ ಮಾತಿನಿಂದ ಹಾಲಪ್ಪ ಆಚಾರ್ ಮಡದಿಗೆ ಎಷ್ಟು ನೋವಾಗಿದೆ. ನನ್ನ ಮಾತನಿಂದ ನಿನ್ನ ಮಡದಿಗೂ ನೋವಾಗಬೇಕು ಅಂತ ಆಕ್ರೋಶ ಹೊರಹಾಕಿದ್ದಾರೆ.

ಆರ ಹಡದಾಕೆ ಮುಂದೆ ಮೂರ ಹಡದಾಕೆ ಏನ್ ಮಾಡ್ತಾಳೆ ಅಂತೀಯಾ? ನಿನಗೆ ಇರೋದು ಒಂದೇ ಹೆಣ್ಣು ಮಗು. ಉಳಿದ ಐದು ಮಕ್ಕಳನ್ನ ಬೀದಿಗೆ ಬಿಟ್ಟಿದ್ದೀಯಾ. ನಿನ್ನ ಮಕ್ಕಳು ಎಲ್ಲಿದ್ದಾವೆ? ಈ ಹೆಣ್ಣು ಮಗು ನಿನಗೆ ಹುಟ್ಟಿದೆ ಅನ್ನೋದಕ್ಕೆ ಆಧಾರ ಏನಿದೆ ಅಂತ ಹಾಲಪ್ಪ ಆಚಾರ್ ಬೆಂಬಲಿಗರು ಕೇಳಿದ್ದಾರೆ. ನೀರಿನಿಂದ ಮೀನು ಹೊರಗೆ ತಗೆದಂತೆ ರಾಯರೆಡ್ಡಿ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ

ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು

(Halappa Achar supporters express outrage against former minister Basavaraj Rayareddy in koppal)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು