AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಪ್ರವಾಸ ಹಿನ್ನೆಲೆ ಅಂಜನಾದ್ರಿ ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ

ಹಂಪಿಗೆ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ, ಅಂಜನಾದ್ರಿ ಬೆಟ್ಟ ಏರಿ ವಿಶೇಷ ಪೂಜೆ ಸಲ್ಲಿಸಿ ಯದುವೀರ್ ಕುಟುಂಬ ಹನುಮನ ದರ್ಶನ ಪಡೆದುಕೊಂಡರು.

ಹಂಪಿ ಪ್ರವಾಸ ಹಿನ್ನೆಲೆ ಅಂಜನಾದ್ರಿ ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ
ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ದಂಪತಿ ಭೇಟಿ
TV9 Web
| Edited By: |

Updated on:Jun 27, 2022 | 9:57 AM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ (Anjanadri) ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ ನೀಡಿದರು. ಹಂಪಿಗೆ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ, ಅಂಜನಾದ್ರಿ ಬೆಟ್ಟ ಏರಿ ವಿಶೇಷ ಪೂಜೆ ಸಲ್ಲಿಸಿ ಯದುವೀರ್ ಕುಟುಂಬ ಹನುಮನ ದರ್ಶನ ಪಡೆದುಕೊಂಡರು. 575 ಮೆಟ್ಟಿಲೇರಿದ ಯದುವೀರ್ ದಂಪತಿ, ಹನುಮ ಹುಟ್ಟಿದ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದೇನೆ. ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇದೊಂದು ಅದ್ಭುತ ಜಾಗ ಎಂದು ಹನುಮನ ದರ್ಶನ ಬಳಿಕ ಯದುವೀರ್ ಹೇಳಿದರು.

ದೀರ್ಘದಂಡ ನಮಸ್ಕಾರದ ಮೂಲಕ ಅಂಜನಾದ್ರಿ ಬೆಟ್ಟವೇರಿದ ಸ್ವಾಮೀಜಿ 

ಈ ಹಿಂದೆ ಅಂಜನಾದ್ರಿ  ಬೆಟ್ಟವನ್ನು ದೀರ್ಘ ದಂಡ ನಮಸ್ಕಾರದ ಮೂಲಕ ಅಮರಯ್ಯ ಸ್ವಾಮಿ ಹಿರೇಮಠ ಎಂಬ ಸ್ವಾಮೀಜಿ ಏರಿದ್ದರು. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ಗ್ರಾಮದ ಅಮರಯ್ಯ ಸ್ವಾಮೀಜಿ  ಕಳೆದ (ಜೂನ್​​ 20) ರಂದು ದಿರ್ಘದಂಡ ನಮಸ್ಕಾರದ ಮೂಲಕ ಅಂಜನಾದ್ರಿ ಬೆಟ್ಟ ಏರಲು ತೀರ್ಮಾನಸಿದ್ದರು. ಹೀಗಾಗಿ ಜೂನ್ 25 ರಂದು ಸ್ವಾಮೀಜಿ ಮೈಲಾಪೂರದಿಂದ ದೀರ್ಘ ದಂಡ ನಮಸ್ಕಾರದ ಮೂಲಕ ಅಂಜನಾದ್ರಿ ತಲುಪಿದ್ದರು. ಸ್ವಾಮಿಜಿ ಮಳೆ ಬೆಳೆಗಾಗಿ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಧೀರ್ಘದಂಡ ನಮಸ್ಕಾರದ ಮೂಲಕ ಏರಿದ್ದರು. ಭಕ್ತರೊಂದಿಗೆ ಜೈ ಶ್ರೀರಾಮ್ ಘೋಷಣೆ ಕೂಗತ್ತ ಬೆಟ್ಟ ಏರಿ‌ಪೂಜೆ ಸಲ್ಲಿಸಿದ್ದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದು, ಈಗಾಗಲೇ  ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ನೀಡಿದ್ದೇವೆ ಎಂದು ಪ್ರವಾಸೋದ್ಯಮ ‌ಸಚಿವ ಆನಂದ್ ಸಿಂಗ್ ಹೇಳಿದ್ದರು. ಅನುದಾನ ಕೋಡಲೇ ಬಿಡುಗಡೆ ಮಾಡಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದರು. ಅಂಜನಾದ್ರಿ ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ ಮಾಡುತ್ತೇವೆ. ಪುಟಪಾತ್ ಕಾಮಗಾರಿ ಹಣ ಬಿಡುಗಡೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಎರಡು ತಿಂಗಳೊಳಗೆ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಸಿಎಂ‌ ಸೂಚಿಸಿದ್ದಾರೆ. ಜುಲೈ 15 ರೊಳಗೆ ಸಿಎಂ ಬೊಮ್ಮಾಯಿ‌ ಸಹ ಅಂಜನಾದ್ರಿ ಬೆಟ್ಟಕ್ಕೆ ಭೇಟಿ‌ ನೀಡಲಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು

Published On - 9:54 am, Mon, 27 June 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?