AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಪ್ರವಾಸ ಹಿನ್ನೆಲೆ ಅಂಜನಾದ್ರಿ ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ

ಹಂಪಿಗೆ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ, ಅಂಜನಾದ್ರಿ ಬೆಟ್ಟ ಏರಿ ವಿಶೇಷ ಪೂಜೆ ಸಲ್ಲಿಸಿ ಯದುವೀರ್ ಕುಟುಂಬ ಹನುಮನ ದರ್ಶನ ಪಡೆದುಕೊಂಡರು.

ಹಂಪಿ ಪ್ರವಾಸ ಹಿನ್ನೆಲೆ ಅಂಜನಾದ್ರಿ ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ
ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ದಂಪತಿ ಭೇಟಿ
TV9 Web
| Edited By: |

Updated on:Jun 27, 2022 | 9:57 AM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ (Anjanadri) ಪರ್ವತಕ್ಕೆ ಮೈಸೂರಿನ ಯದುವೀರ್ ದಂಪತಿ ಭೇಟಿ ನೀಡಿದರು. ಹಂಪಿಗೆ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ, ಅಂಜನಾದ್ರಿ ಬೆಟ್ಟ ಏರಿ ವಿಶೇಷ ಪೂಜೆ ಸಲ್ಲಿಸಿ ಯದುವೀರ್ ಕುಟುಂಬ ಹನುಮನ ದರ್ಶನ ಪಡೆದುಕೊಂಡರು. 575 ಮೆಟ್ಟಿಲೇರಿದ ಯದುವೀರ್ ದಂಪತಿ, ಹನುಮ ಹುಟ್ಟಿದ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದೇನೆ. ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇದೊಂದು ಅದ್ಭುತ ಜಾಗ ಎಂದು ಹನುಮನ ದರ್ಶನ ಬಳಿಕ ಯದುವೀರ್ ಹೇಳಿದರು.

ದೀರ್ಘದಂಡ ನಮಸ್ಕಾರದ ಮೂಲಕ ಅಂಜನಾದ್ರಿ ಬೆಟ್ಟವೇರಿದ ಸ್ವಾಮೀಜಿ 

ಈ ಹಿಂದೆ ಅಂಜನಾದ್ರಿ  ಬೆಟ್ಟವನ್ನು ದೀರ್ಘ ದಂಡ ನಮಸ್ಕಾರದ ಮೂಲಕ ಅಮರಯ್ಯ ಸ್ವಾಮಿ ಹಿರೇಮಠ ಎಂಬ ಸ್ವಾಮೀಜಿ ಏರಿದ್ದರು. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ಗ್ರಾಮದ ಅಮರಯ್ಯ ಸ್ವಾಮೀಜಿ  ಕಳೆದ (ಜೂನ್​​ 20) ರಂದು ದಿರ್ಘದಂಡ ನಮಸ್ಕಾರದ ಮೂಲಕ ಅಂಜನಾದ್ರಿ ಬೆಟ್ಟ ಏರಲು ತೀರ್ಮಾನಸಿದ್ದರು. ಹೀಗಾಗಿ ಜೂನ್ 25 ರಂದು ಸ್ವಾಮೀಜಿ ಮೈಲಾಪೂರದಿಂದ ದೀರ್ಘ ದಂಡ ನಮಸ್ಕಾರದ ಮೂಲಕ ಅಂಜನಾದ್ರಿ ತಲುಪಿದ್ದರು. ಸ್ವಾಮಿಜಿ ಮಳೆ ಬೆಳೆಗಾಗಿ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಧೀರ್ಘದಂಡ ನಮಸ್ಕಾರದ ಮೂಲಕ ಏರಿದ್ದರು. ಭಕ್ತರೊಂದಿಗೆ ಜೈ ಶ್ರೀರಾಮ್ ಘೋಷಣೆ ಕೂಗತ್ತ ಬೆಟ್ಟ ಏರಿ‌ಪೂಜೆ ಸಲ್ಲಿಸಿದ್ದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದು, ಈಗಾಗಲೇ  ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ನೀಡಿದ್ದೇವೆ ಎಂದು ಪ್ರವಾಸೋದ್ಯಮ ‌ಸಚಿವ ಆನಂದ್ ಸಿಂಗ್ ಹೇಳಿದ್ದರು. ಅನುದಾನ ಕೋಡಲೇ ಬಿಡುಗಡೆ ಮಾಡಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದರು. ಅಂಜನಾದ್ರಿ ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ ಮಾಡುತ್ತೇವೆ. ಪುಟಪಾತ್ ಕಾಮಗಾರಿ ಹಣ ಬಿಡುಗಡೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಎರಡು ತಿಂಗಳೊಳಗೆ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಸಿಎಂ‌ ಸೂಚಿಸಿದ್ದಾರೆ. ಜುಲೈ 15 ರೊಳಗೆ ಸಿಎಂ ಬೊಮ್ಮಾಯಿ‌ ಸಹ ಅಂಜನಾದ್ರಿ ಬೆಟ್ಟಕ್ಕೆ ಭೇಟಿ‌ ನೀಡಲಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು

Published On - 9:54 am, Mon, 27 June 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​