AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್ ನಿವಾಸಿ, ಆಟೋ ಚಾಲಕ ಶಂಶುದ್ದೀನ್ ಮನೆಯಲ್ಲಿ ಆಂಜನೇಯ ಫೋಟೋ ಇದೆ. ಈ ಮುಸ್ಲಿಂ ವ್ಯಕ್ತಿ ತನ್ನ ಮನೆಯಲ್ಲಿ ಆಂಜನೇಯ ಸ್ವಾಮಿಯ ಫೋಟೋ, ಹಾಗೂ ಕೊಪ್ಪಳದ ಗವಿ ಸಿದ್ದೇಶ್ವರ ಫೋಟೋಗೆ ಪೂಜೆ ಸಲ್ಲಿಸುತ್ತಾರೆ.

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?
ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?
TV9 Web
| Edited By: ಆಯೇಷಾ ಬಾನು|

Updated on:Apr 06, 2022 | 9:37 AM

Share

ಕೊಪ್ಪಳ: ಹಿಂದೂ ಮುಸ್ಲಿಂ ಭಾಯ್ ಭಾಯ್ ಎಂದು ಭಾವೈಕ್ಯತೆಯಿಂದಿದ್ದ ರಾಜ್ಯದಲ್ಲಿ ವಿವಾದ, ಗಲಾಟೆ, ಸಂಘರ್ಷಗಳು ನಡೆಯುತ್ತಿವೆ. ಹಿಜಾಬ್ನಿಂದ ಶುರುವಾದ ಗಲಾಟೆ ಆಜಾನ್ ವರೆಗೂ ಬಂದಿದೆ. ಹಿಜಾಬ್, ಹಲಾಲ್-ಜಟ್ಕಾ, ಟಿಪ್ಪು ಸುಲ್ತಾನ್, ಭಗವದ್ಗೀತೆ, ಆಜಾನ್-ಹನುಮಾನ್ ಚಾಲೀಸ್ ಗಲಾಟೆಗಳು ರಾಜ್ಯದ ಜನರಿಗೆ ತಲೆ ನೋವಾಗಿದೆ. ಸದ್ಯ ಈ ಸಂಘರ್ಷದ ನಡುವೆ ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ-ಮುಸ್ಲಿಂ ನಡುವಿನ ಸೌಹಾರ್ದತೆ ತಿಳಿಸುತ್ತ ವಿವಾದವನ್ನು ಬಗೆಹರಿಸುವಂತೆ ವಿಡಿಯೋ ಮೂಲಕ ಮನವಿ ಸಲ್ಲಿಸಿದ್ದಾರೆ.

ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ಶಂಶುದ್ದೀನ್ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್ ನಿವಾಸಿ, ಆಟೋ ಚಾಲಕ ಶಂಶುದ್ದೀನ್ ಮನೆಯಲ್ಲಿ ಆಂಜನೇಯ ಫೋಟೋ ಇದೆ. ಈ ಮುಸ್ಲಿಂ ವ್ಯಕ್ತಿ ತನ್ನ ಮನೆಯಲ್ಲಿ ಆಂಜನೇಯ ಸ್ವಾಮಿಯ ಫೋಟೋ, ಹಾಗೂ ಕೊಪ್ಪಳದ ಗವಿ ಸಿದ್ದೇಶ್ವರ ಫೋಟೋಗೆ ಪೂಜೆ ಸಲ್ಲಿಸುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಮನನೊಂದಿರುವ ಶಂಶುದ್ದೀನ್, ವಿಡಿಯೋ ಮಾಡಿ ತಮ್ಮ ನೋವು ತೋಡಿಕೊಂಡಿದ್ದಾರೆ. ಹಿಂದೂಗಳು, ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಇದ್ದೇವೆ. ಯಾರೋ ಮಾಡುವ ಕೆಲಸದಿಂದ ಇಡೀ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ನಾನು ಕಳೆದ 20 ವರ್ಷದಿಂದ ಆಂಜನೇಯ ಭಕ್ತ. ಹೀಗಾಗಿ ಮನೆಯಲ್ಲಿ ಆಂಜನೇಯನ‌ ಫೋಟೋ ಹಾಕಿದ್ದೇವೆ.

ನಮ್ಮ ಮನೆಯ ಜಗಲಿಯಲ್ಲೂ ಹಿಂದೂ ದೇವರ ಫೊಟೋ ಇಟ್ಟು ಪೂಜೆ ಮಾಡ್ತೀನಿ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ದೇಣಿಗೆ ನೀಡಿದ್ದೆ. ಧಾರ್ಮಿಕ ಮುಖಂಡರು ಈ ವಿವಾದವನ್ನು ಬಗೆಹರಿಸಿ ಎಂದು ವಿಡಿಯೋ ಮೂಲಕ ಮುಸ್ಲಿಂ ವ್ಯಕ್ತಿ ಶಂಶುದ್ದೀನ್ ಮನವಿ ಮಾಡಿದ್ದಾರೆ.

hanuman devotee muslim man 1

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?

ಇದನ್ನೂ ಓದಿ: ಹುಬ್ಬಳ್ಳಿ: ಟ್ರಾಫಿಕ್ ಕ್ಲಿಯರ್ ಮಾಡುವ ವೇಳೆ ಅಪರಿಚಿತ ವಾಹನ ಡಿಕ್ಕಿ; ಪೊಲೀಸ್ ಕಾನ್ಸ್​ಟೇಬಲ್ ಸಾವು

ಸ್ಟಾರ್​ ಸುವರ್ಣದಲ್ಲಿ ‘ಲವ್ ಮಾಕ್ಟೇಲ್ 2’ ಸಿನಿಮಾ; ಪ್ರಸಾರ ಯಾವಾಗ?

Published On - 9:20 am, Wed, 6 April 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು