AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರೇ ನನ್ನ ಸಂಪಾದನೆ, ಅವರ ಮಧ್ಯೆಯೇ ಸಾಯೋದು: ಹೆಚ್​.ಡಿ. ಕುಮಾರಸ್ವಾಮಿ

ಬಿಜೆಪಿಯವರು ನಮ್ಮ ಮೈತ್ರಿ ಸರ್ಕಾರವನ್ನ ತೆಗೆದು ಈ ಭಾಗವನ್ನ ಕಲ್ಯಾಣ ಕರ್ನಾಟಕ ಅಂತ ಹೆಸರಿಟ್ಟಿದ್ದಾರೆ ಎಂದು ಜಿಲ್ಲೆಯ ಕುಷ್ಟಗಿಯ ಪಂಚರತ್ನ ಸಮಾವೇಶದಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದರು.

ರಾಜ್ಯದ ಜನರೇ ನನ್ನ ಸಂಪಾದನೆ, ಅವರ ಮಧ್ಯೆಯೇ ಸಾಯೋದು: ಹೆಚ್​.ಡಿ. ಕುಮಾರಸ್ವಾಮಿ
ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Jan 30, 2023 | 7:13 PM

Share

ಕೊಪ್ಪಳ: ಬಿಜೆಪಿಯವರು ನಮ್ಮ ಮೈತ್ರಿ ಸರ್ಕಾರವನ್ನ ತೆಗೆದು ಈ ಭಾಗವನ್ನ ಕಲ್ಯಾಣ ಕರ್ನಾಟಕ ಅಂತ ಹೆಸರಿಟ್ಟಿದ್ದಾರೆ ಎಂದು ಜಿಲ್ಲೆಯ ಕುಷ್ಟಗಿಯ ಪಂಚರತ್ನ ಸಮಾವೇಶದಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ನಾನು ಸಿಎಂ ಇದ್ದಾಗಲೇ ಕಲಬುರಗಿಯ ಶಾಸಕರು ಕಲ್ಯಾಣ ಕರ್ನಾಟಕ ಅಂತ ಹೆಸರಿಡಲು ಮನವಿ ಮಾಡಿದ್ದರು‌. ರೈತರ, ಬಡವರ ಕಲ್ಯಾಣ ಆದಮೇಲೆ ಹೆಸರಿಡೋಣ ಅಂತ ಹೇಳಿದ್ದೆ. ಆದರೆ ಪಾಪ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೆಸರಿಟ್ಟಿದ್ದಾರೆ‌. ಬಿಜೆಪಿ, ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿವೆ ಎಲ್ಲರಿಗೂ ಗೊತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೇ ಭ್ರಷ್ಟಾಚಾರದಂಥ ನೀಚ ಕೆಲಸ ಮಾಡಿಲ್ಲ. ರಾಜ್ಯದ ಜನರೇ ನನ್ನ ಸಂಪಾದನೆ, ಜನರ ಮಧ್ಯೆಯೇ ಸಾಯೋದು ಎಂದು ಹೇಳಿದರು.

ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್​.ಡಿ. ಕುಮಾರಸ್ವಾಮಿ ಕಿಡಿ

ನಾವು ಯಾವುದೇ ಶಾಪಿಂಗ್ ಮಾಲ್, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಲ್ಲ. ನಾನು ರೈತನ ಮಗ 45 ಎಕರೆಯಲ್ಲಿ ಕೃಷಿ ಮಾಡೋದು ನನ್ನ ಆಸೆ. 2 ಬಾರಿ ಆಕಸ್ಮಿಕವಾಗಿ ಸಿಎಂ ಆದಾಗ ನಿಮಗಾಗಿ ಕೆಲಸ ಮಾಡಿದ್ದೇನೆ. ಸರಾಯಿ ಹಾಗೂ ಲಾಟರಿ ನಿಷೇಧ ಮಾಡಿದ್ದೇನೆ. ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಬಿಜೆಪಿ ಸರ್ಕಾರ ಈಗ ನಿಲ್ಲಿಸಿದೆ ಎಂದು ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಇದನ್ನೂ ಓದಿ: ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡ, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದ ಕುಮಾರಣ್ಣ

ಹಾಸನ ಕ್ಷೇತ್ರದ ಟಿಕೆಟ್ ಸಮಸ್ಯೆ ಸುಗಮವಾಗಿ ಬಗೆಹರಿಯಲಿದೆ: ಕುಮಾರಸ್ವಾಮಿ ಸ್ಪಷ್ಟನೆ

ಇನ್ನು ಹಾಸನ ಕ್ಷೇತ್ರದ ಟಿಕೆಟ್ ಸಮಸ್ಯೆ ಸುಗಮವಾಗಿ ಬಗೆಹರಿಯಲಿದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. ಟಿಕೆಟ್​ ಹಂಚಿಕೆ ವಿಚಾರದಲ್ಲಿ ಯಾವುದೇ ಅಸಮಾಧಾನ ಇಲ್ಲ. ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣವಿಲ್ಲ. ಅತಿ ಹೆಚ್ಚು ಕುಟುಂಬ ರಾಜಕಾರಣ ಇರುವುದೇ ಬಿಜೆಪಿಯಲ್ಲಿ ಅಮಿತ್​ ಶಾ ನಮ್ಮ ಬಗ್ಗೆ ಏನು ಮಾತನಾಡೋದು ಎಂದು ಪ್ರಶ್ನಿಸಿದರು. ತಮ್ಮ ಮಗನಿಗೆ ಬಿಸಿಸಿಐನಲ್ಲಿ ಕಾರ್ಯದರ್ಶಿ ಸ್ಥಾನ ಕೊಡಿಸಿದ್ದಾರೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ನಿತ್ಯ ಜಾಗಟೆ ಹೊಡೆಯುವ ಗಿರಾಕಿ: ಕಾಂಗ್ರೆಸ್ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ

ಬಿಸಿಸಿಐ ಕಾರ್ಯದರ್ಶಿಯಾಗಲು ಜಯ್​ಶಾಗೆ ಏನು ಅರ್ಹತೆ ಇದೆ. ಹಳೇ ಮೈಸೂರು ಭಾಗ ಜೆಡಿಎಸ್​ನ ಭದ್ರಕೋಟೆ. ಉತ್ತರ ಕರ್ನಾಟಕದ ಭಾಗದಲ್ಲೂ ನಮಗೆ ಒಳ್ಳೆಯ ರೆಸ್ಪಾನ್ಸ್​ ಸಿಗ್ತಿದೆ. ಅದಕ್ಕಾಗಿ ರಾಷ್ಟ್ರಿಯ ಪಕ್ಷಗಳು ಮಂಡ್ಯಕ್ಕೆ ಹೋಗಿವೆ. ಉತ್ತರ ಕರ್ನಾಟಕ ಭಾಗದಲ್ಲೇ ನಾವು 40-45 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮತ್ತು ವಿಧವಾ ವೇತನ ಮಾಸಿಕ 2500 ರೂಪಾಯಿ ನೀಡುತ್ತೇವೆ. 40-50 ಪರ್ಸೆಂಟ್ ಮೂಲಕ ಸರ್ಕಾರದ ಖಜಾನೆಯನ್ನು ಕೆಲವು ವ್ಯಕ್ತಿಗಳು ದೋಚುತ್ತಿದ್ದಾರೆ. ನಿಮಗೆ ನೀಡಿದ ಭರವಸೆ ಈಡೇರಿಸದಿದ್ರೆ ಪಕ್ಷ ವಿಸರ್ಜನೆ ಮಾಡ್ತೀನಿ. ಮುಂದೆ ಯಾವತ್ತೂ ಜೆಡಿಎಸ್ ಮತ ಕೇಳಲು ಬರಲ್ಲ. 2 ಬಾರಿ ಹೃದಯ ಚಿಕಿತ್ಸೆ ಆಗಿದೆ, ಎಷ್ಟು ದಿನ ಬದುಕ್ತಿನೋ ಗೊತ್ತಿಲ್ಲ. ನಿಮ್ಮ ಬದುಕು ಸರಿಪಡಿಸೋದೆ ನನ್ನ ಗುರಿ. ನನ್ನ ಪರ ಜೈಕಾರ ಹಾಕುತ್ತೀರಿ ಕೂಗುತ್ತೀರಿ, ಆದ್ರೆ ಮತ ಹಾಕುವುದಿಲ್ಲ. ಇದರಲ್ಲಿ ನಮ್ಮದು ತಪ್ಪಿದೆ, ಅಭ್ಯರ್ಥಿ ಹಾಕುವುದರಲ್ಲಿ ಎಡವಿದ್ದೇವೆ. ಕುಷ್ಟಗಿಯ ತುಕಾರಾಂ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಕನಕಗಿರಿಯ ಅಶೋಕ್​ ಕೆಲಸ ನಮಗೆ ಸಮಾಧಾನ ತಂದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ