AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಹಿಂದೂ ಧಾರ್ಮಿಕ ಆಚರಣೆ; ಹಿಜಾಬ್ ಗಲಾಟೆ ನಡುವೆ ಮಾದರಿಯಾದ ಅಂತ್ಯ ಸಂಸ್ಕಾರ

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಹಿಂದೂ ವಿಧಿವಿಧಾನಕ್ಕೂ ಅವಕಾಶ ನೀಡಲಾಗಿದೆ. ಪೂಜೆ ಸಲ್ಲಿಸಿ, ಆರತಿ ಮಾಡಿ ಹುಸೇನ್ ಸಾಬ್ ನೂರಭಾಷಾ ಎಂಬುವವರ ಅಂತ್ಯಕ್ರಿಯೆ ಮಾಡಲಾಗಿದೆ.

ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಹಿಂದೂ ಧಾರ್ಮಿಕ ಆಚರಣೆ; ಹಿಜಾಬ್ ಗಲಾಟೆ ನಡುವೆ ಮಾದರಿಯಾದ ಅಂತ್ಯ ಸಂಸ್ಕಾರ
ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಹಿಂದೂ ಧಾರ್ಮಿಕ ಆಚರಣೆ; ಹಿಜಾಬ್ ಗಲಾಟೆ ನಡುವೆ ಮಾದರಿಯಾದ ಅಂತ್ಯ ಸಂಸ್ಕಾರ
TV9 Web
| Updated By: ಆಯೇಷಾ ಬಾನು|

Updated on: Feb 08, 2022 | 9:59 AM

Share

ಕೊಪ್ಪಳ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್(Hijab) ಮತ್ತು ಕೇಸರಿ ಶಾಲುಗಳ(Kesari Shawl) ಸಮರ ಜೋರಾಗಿದೆ. ಹಿಜಾಬ್ ಧರಿಸಿದ್ರೆ, ಕೇಸರಿ ಶಾಲು ಧರಿಸಿ ಬರ್ತೀವಿ ಅಂತಾ ವಿದ್ಯಾರ್ಥಿಗಳು ಪೈಪೋಟಿಗೆ ಬಿದ್ದಿದ್ದಾರೆ. ಸದ್ಯ ಈ ಗೊಂದಲದ ನಡುವೆ ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾದರಿಯಾಗಿದೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಹಿಂದೂ ವಿಧಿವಿಧಾನಕ್ಕೂ ಅವಕಾಶ ನೀಡಲಾಗಿದೆ. ಪೂಜೆ ಸಲ್ಲಿಸಿ, ಆರತಿ ಮಾಡಿ ಹುಸೇನ್ ಸಾಬ್ ನೂರಭಾಷಾ ಎಂಬುವವರ ಅಂತ್ಯಕ್ರಿಯೆ ಮಾಡಲಾಗಿದೆ. ರಾತ್ರಿಯಿಡೀ ಭಜನೆ ಮಾಡಿ, ಗ್ರಾಮಸ್ಥರು ಭಾವೈಕ್ಯತೆ ಮೆರೆದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆ ಅನೇಕ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದ್ರೆ ಈ ಹಿಜಾಬ್ ಗಲಾಟೆ ನಡುವೆಯೂ ಮುಸ್ಲಿಂ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾದರಿಯಾಗಿದೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕು ತಳಬಾಳ ಗ್ರಾಮದಲ್ಲಿ ನಾಟಿ ವೈದ್ಯರಾಗಿದ್ದ ಹುಸೇನ್ ಸಾಬ್ ನೂರಭಾಷಾ ಎಂಬುವವರು ಫೆಬ್ರವರಿ 6 ರಂದು ಮೃತಪಟ್ಟಿದ್ದರು. ಈ ವೇಳೆ ಗ್ರಾಮಸ್ಥರು ಅತ್ಯಸಂಸ್ಕಾರದಲ್ಲಿ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಮುಸ್ಲಿಂ ವ್ಯಕ್ತಿ ಅಂತ್ಯ ಸಂಸ್ಕಾರದ ವೇಳೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಿ ಹಿಂದೂ ಧರ್ಮದ ರೀತಿಯಲ್ಲೂ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಅಲ್ಲದೆ ರಾತ್ರಿ ಇಡೀ ಭಜನೆ ಮಾಡಿ, ಭಾವೈಕ್ಯತೆ ಸಾರಿದ್ದಾರೆ. ಮುಸ್ಲಿಂ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಹಿಂದೂ ಧಾರ್ಮಿಕ ಆಚರಣೆಗೂ ಅವಕಾಶ ನೀಡಲಾಗಿದ್ದು ವ್ಯಕ್ತಿ ಸತ್ತ ಮೇಲೂ ಭಾವೈಕ್ಯತೆಗೆ ಮಾದರಿಯಾಗಿದ್ದಾರೆ. ಮನುಷ್ಯನಲ್ಲಿ ಮಾನವೀಯತೆ, ಪ್ರೀತಿ, ವಿಶ್ವಾಸ ಇದ್ದರೆ ಜಾತಿ, ಧರ್ಮ ಅಡ್ಡಿಯಾಗಲ್ಲ ಎಂಬುವುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ.

hindu rituals followed during muslim man last rites 2

ಭಜನೆ ಮಾಡುತ್ತಿರುವ ಗ್ರಾಮಸ್ಥರು

hindu rituals followed during muslim man last rites 2

ಭಜನೆ ಮಾಡುತ್ತಿರುವ ಗ್ರಾಮಸ್ಥರು

ಇದನ್ನೂ ಓದಿ: ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವ ಮೊದಲು ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಸಚಿವ ಈಶ್ವರಪ್ಪ ಸವಾಲ್​

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​