Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಅಂಜನಾದ್ರಿ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ; 22 ದಿನಗಳಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ?

ಜಿಲ್ಲೆಯ ಗಂಗಾವತಿ(Gangavati) ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ(Anjanadri) ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದಿನಕ್ಕೆ ಒಂದು ಲಕ್ಷದಂತೆ ಸರಾಸರಿ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ 2 ವಿದೇಶಿ ನೋಟು, 3 ವಿದೇಶಿ ನಾಣ್ಯ ಸಿಕ್ಕಿವೆ.

ಐತಿಹಾಸಿಕ ಅಂಜನಾದ್ರಿ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ; 22 ದಿನಗಳಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ?
ಅಂಜನಾದ್ರಿ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 05, 2024 | 7:02 PM

ಕೊಪ್ಪಳ, ಜ.05: ಜಿಲ್ಲೆಯ ಗಂಗಾವತಿ(Gangavathi) ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ(Anjanadri) ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಕೇವಲ 22 ದಿನಗಳಲ್ಲಿ ಬರೊಬ್ಬರಿ 27 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ. ಹನುಮಮಾಲಾ ವಿಸರ್ಜನೆ ಹಿನ್ನೆಲೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಅದರಂತೆ ದೇವಸ್ಥಾನದಲ್ಲಿ ದಿನಕ್ಕೆ ಒಂದು ಲಕ್ಷದಂತೆ ಸರಾಸರಿ ಕಾಣಿಕೆ ಸಂಗ್ರಹವಾಗಿದೆ. ನಗದು ಜೊತೆಗೆ 2 ವಿದೇಶಿ ನೋಟು, 3 ವಿದೇಶಿ ನಾಣ್ಯ ಸಿಕ್ಕಿವೆ. ಇನ್ನು ತಹಶೀಲ್ದಾರ್​​​ ವಿಶ್ವನಾಥ್​​​ ಮುರಡಿ ನೇತೃತ್ವದಲ್ಲಿ ಪೊಲೀಸ್​​ ಬಂದೋಬಸ್ತ್​​​ ಸೇರಿದಂತೆ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ನಡೆಸಲಾಗಿತ್ತು.

ಅಂಜನಾದ್ರಿ ಬಗ್ಗೆ ಮಾಹಿತಿ

ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಬೆಟ್ಟವನ್ನು ಹತ್ತಿ, ಆಂಜನೇಯನ ದರ್ಶನ ಪಡೆಯಲು ಬರೊಬ್ಬರಿ 550 ಮೆಟ್ಟಿಲುಗಳನ್ನು ಏರಬೇಕು. ಜೊತೆಗೆ ಬೆಟ್ಟದ ಮೇಲಿನ ದೇವಾಲಯವು ನೋಡಲು ಆಕರ್ಷಕವಾಗಿದ್ದು, ಭಕ್ತ ಸಮೂಹವನ್ನು ಸ್ವಾಗತಿಸುತ್ತದೆ. ಈ ದೇವಾಲಯದ ಒಳಗಡೆ ಹನುಮನ ಇಷ್ಟದೇವತೆಗಳಾದ ರಾಮ-ಸೀತೆಯರನ್ನು ಪೂಜಿಸಲಾಗುತ್ತದೆ. ಇನ್ನು ವಿಶೇಷವೆಂದರೆ ಈ ದೇವಾಲಯದ ಒಳಗಡೆ ಇರುವ ಅರ್ಚಕರೊಬ್ಬರು ಹೋದಂತಹ ಪ್ರವಾಸಿಗರಿಗೆ ಕನ್ನಡ ಮತ್ತು ಹಿಂದಿ ಎರಡು ಭಾಷೆಗಳಲ್ಲಿಯೂ ಈ ಸ್ಥಳದ ಮಹಿಮೆಯನ್ನು ಚೆನ್ನಾಗಿ ತಿಳಿಸಿ ಕೊಡುತ್ತಾರೆ.

ಇದನ್ನೂ ಓದಿ:Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ಇನ್ನು ಈ ಅಂಜನಾದ್ರಿ ಬೆಟ್ಟದ ವಿಹಂಗಮ ದೃಶ್ಯಗಳು, ಬೆರಗುಗೊಳಿಸುವ ಸೂರ್ಯಾಸ್ತದ ನೋಟಗಳು ಮತ್ತು ಪರ್ವತಗಳು ಹಾಗೂ ಬಂಡೆಗಳ ನಡುವೆ ಹರಿಯುವ ತುಂಗಭದ್ರಾ ನದಿಯ ರಮಣೀಯ ನೋಟಗಳು ಬೆಟ್ಟ ಹತ್ತಿ ಬಂದ ಭಕ್ತರ ಎಲ್ಲಾ ಆಯಾಸವನ್ನು ಮರೆಸುತ್ತದೆ. ಜೊತೆಗೆ ಇಲ್ಲಿಂದ ಹಂಪಿಯ ಅವಶೇಷಗಳು ಮತ್ತು ನೆರೆಹೊರೆಯಲ್ಲಿರುವ ಇತರ ಭವ್ಯವಾದ ಬೆಟ್ಟಗಳನ್ನು ಸಹ ವೀಕ್ಷಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 5 January 24

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್