AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ, ಪೊಲೀಸ್ ಪೇದೆಯಿಂದ ಲವ್ ದೋಖಾ

ಹಾರೂಗೇರಿಯಲ್ಲಿ ಲಕ್ಷ್ಮವ್ವ ಚವಳಮ್ಮನವರ (38) ಹತ್ಯೆ ಮಾಡಲಾಗಿದೆ. ಪತಿ ತಿಮ್ಮಣ್ಣ, ಸಲಿಕೆಯಿಂದ ಹೊಡೆದು ಲಕ್ಷ್ಮವ್ವ ಹತ್ಯೆಗೈದಿದ್ದಾನೆ. ಆರೋಪಿ ತಿಮ್ಮಣ್ಣನನ್ನು ಮುಂಡರಗಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

Crime News: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ, ಪೊಲೀಸ್ ಪೇದೆಯಿಂದ ಲವ್ ದೋಖಾ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on:Feb 05, 2022 | 4:15 PM

Share

ಕೊಪ್ಪಳ: ಕಡಿಮೆ ದರದಲ್ಲಿ ಬಂಗಾರ ನೀಡುವುದಾಗಿ ನಂಬಿಸಿ ಹಣ ದೋಚುತ್ತಿದ್ದವರ ಬಂಧನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಅಳವಂಡಿ ಪೊಲೀಸರಿಂದ ಹರಪನಹಳ್ಳಿ ಮೂಲದ ನಾಲ್ಕು ಜನರ ಬಂಧನ ಮಾಡಲಾಗಿದೆ. ಬುನಾದಿ ತೆಗೆಯುವಾಗ ಬಂಗಾರ ಸಿಕ್ಕಿದೆ. ಕಡಿಮೆ ದರಕ್ಕೆ ಮಾರಾಟ ಮಾಡುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವಣಗೆರಿಯ ವೆಂಕಟೇಶ ಎಂಬುವವರನ್ನು ನಂಬಿಸಿ 5 ಲಕ್ಷ ಹಣ ದೋಚಿದ್ದರು. ರಮೇಶ ಚಿಕ್ಕಮಗಳೂರು ಎಂದು ಹೇಳಿ ವೆಂಕಟೇಶಗೆ ಫೋನು‌ ಮಾಡಿದ್ದ ಆರೋಪಿಗಳು, ಹಲಗೆರಿ ಬಳಿ ಹಣ ತಂದರೆ ಬಂಗಾರ ಕೊಡುವುದಾಗಿ ಹೇಳಿದ್ದರು ಎಂದು ತಿಳಿದುಬಂದಿದೆ.

ಹಲಗೆರಿಗೆ ಬಂದಾಗ ವೆಂಕಟೇಶರಿಂದ 5 ಲಕ್ಷ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಫೆಬ್ರವರಿ 1 ರಂದು ಘಟನೆ ನಡೆದಿತ್ತು. ಹರಪನಹಳ್ಳಿ ಮೂಲದ 6 ಜನತ ತಂಡದಿಂದ ಘಟನೆ ನಡೆದಿದೆ. ಪರಾರಿಯಾಗಿದ್ದ 6 ಜನರಲ್ಲಿ 4 ಜನರ ಬಂಧನ ಮಾಡಲಾಗಿದೆ. ಅಳವಂಡಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗದಗ: ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ

ಶೀಲ ಶಂಕಿಸಿ ಪತಿ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ. ಹಾರೂಗೇರಿಯಲ್ಲಿ ಲಕ್ಷ್ಮವ್ವ ಚವಳಮ್ಮನವರ (38) ಹತ್ಯೆ ಮಾಡಲಾಗಿದೆ. ಪತಿ ತಿಮ್ಮಣ್ಣ, ಸಲಿಕೆಯಿಂದ ಹೊಡೆದು ಲಕ್ಷ್ಮವ್ವ ಹತ್ಯೆಗೈದಿದ್ದಾನೆ. ಆರೋಪಿ ತಿಮ್ಮಣ್ಣನನ್ನು ಮುಂಡರಗಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ: ಪೊಲೀಸ್ ಪೇದೆಯಿಂದ ಲವ್ ದೋಖಾ

ಪೊಲೀಸ್ ಪೇದೆಯಿಂದ ಲವ್ ದೋಖಾ ಆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಆಸ್ತಕಟ್ಟಿ ಗ್ರಾಮದ ಮೋಹನ್ ಲಮಾಣಿ ಮೋಸ ಮಾಡಿದ ಯುವಕ. ಕಲಘಟಗಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಯುವತಿಯಿಂದ ಆತ್ಮಹತ್ಯೆಗೆ ಯತ್ನ ಮಾಡಲಾಗಿದೆ. ಮೋಹನ ಮಂಗಳೂರಿನಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಕೇಲವು ದಿನಗಳಿಂದ ಮದುವೆಗೆ ವಿರೋದ ವ್ಯಕ್ತಪಡಿಸಿದ್ದ ಯುವಕನ ವಿರುದ್ಧ ಕಲಘಟಗಿ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಬಳಿಕ ಮದುವೆಯಾಗುವುದಾಗಿ ಹೇಳಿದ್ದ ಯುವಕನನ್ನು ನಂಬಿ ಯುವತಿ ಮನೆಯವರು ಮದುವೆ ಲಗ್ನ ಪತ್ರಿಕೆ ಪ್ರೀಂಟ್ ಹಾಕಿದ್ದರು. ಈಗ ಮತ್ತೆ ಯುವಕ ಮದುವೆಗೆ ನಿರಾಕರಿಸಿ, ಬೆದರಿಕೆ ಹಾಕಿದ್ದು, ಯುವತಿ ಮನನೊಂದು ಆತ್ಮಹತ್ಯೆ ಯತ್ನ ಮಾಡಿದ್ದಾರೆ.

ಉಡುಪಿ: ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರಿಗೆ ಗಾಯ

ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರಿಗೆ ಗಾಯವಾದ ಘಟನೆ ಉಡುಪಿ ನಗರದ ಕಡಿಯಾಳಿ ಬಳಿ ಸಂಭವಿಸಿದೆ. ಗರ್ಭಿಣಿ ಸೇರಿದಂತೆ ನಾಲ್ವರಿಗೆ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತ ಸಂಭವಿಸಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು: ಗೋವಿಂದಪುರ ಜಂಕ್ಷನ್ ಬಳಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ಬಂಧನ

ಗೋವಿಂದಪುರ ಜಂಕ್ಷನ್ ಬಳಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಕೆ.ಜಿ.ಹಳ್ಳಿ ಸಂಚಾರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ. ಹಳ್ಳಿ ಸಂಚಾರಿ ಪೊಲೀಸರಿಂದ ವ್ಹೀಲಿಂಗ್ ಮಾಡ್ತಿದ್ದ ಆರೋಪಿ ಬಂಧನ ಮಾಡಲಾಗಿದೆ. ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ಯುವಕ ವೀಲಿಂಗ್ ಮಾಡು ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿತ್ತು. ಇದೀಗ ಕೆ.ಜಿ.ಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ವೀಲಿಂಗ್ ಮಾಡಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: Crime News: ಐಷಾರಾಮಿ ಹೊಟೇಲ್​ನಲ್ಲಿ ಜೂಜಾಡುತ್ತಿದ್ದ 6 ಮಂದಿ ಬಂಧನ, ಅನಧಿಕೃತ ನೇಮಕಾತಿ ಜ್ಞಾಪಕಾ ಪತ್ರಗಳ ಬಗ್ಗೆ ಎಚ್ಚರವಾಗಿರಿ

ಇದನ್ನೂ ಓದಿ: Crime Update: ವ್ಯಕ್ತಿ ಗಮನ ಬೇರೆಡೆ ಸೆಳೆದು ಕಳ್ಳತನ, ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ಹನಿಟ್ರ್ಯಾಪ್ ಆರೋಪಿಗಳ ಬಂಧನ

Published On - 4:14 pm, Sat, 5 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ