AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ದೂರು ದಾಖಲು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಸ್ತೆ ದುರಸ್ಥಿಗೆ ಆಗ್ರಹಿಸಿ ಅಕ್ಟೋಬರ್ 1 ರಂದು ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಲವರು ಅವರ ಕಾರು ಅಡ್ಡಗಟ್ಟಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಂದು ಆರೋಪಿಸಿದ ತಹಶೀಲ್ದಾರ್​ ವಿಠ್ಠಲ್ ಚೌಗಲಾ ಅವರು ಕವಲಗಾ ಗ್ರಾಮದ 14 ಜನರ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕೊಪ್ಪಳ: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ದೂರು ದಾಖಲು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಕವಲೂರು ಗ್ರಾಮಸ್ಥರ ಆಕ್ರೋಶ
ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 03, 2024 | 2:46 PM

Share

ಕೊಪ್ಪಳ, ಅ.03: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ತಹಶೀಲ್ದಾರ್(Tahsildar)​ ದೂರು ನೀಡಿರುವ ಘಟನೆ ಕೊಪ್ಪಳ(Koppal) ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ‌ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ವಿವರ

ರಸ್ತೆ ದುರಸ್ಥಿಗೆ ಆಗ್ರಹಿಸಿ ಅಕ್ಟೋಬರ್ 1 ರಂದು ಕವಲೂರು ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಸೇರಿದಂತೆ ಎಲ್ಲರೂ ಭಾಗಿಯಾಗಿದ್ದರು. ಗ್ರಾಮದ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಕವಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಹದಗೆಟ್ಟಿದ್ದರಿಂದ ಬಂದ್ ನಡೆಸಿ, ಗ್ರಾಮದ ಜನ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ

ವಲಗಾ ಗ್ರಾಮದ 14 ಜನರ ವಿರುದ್ಧ ದೂರು

ಇನ್ನು ಪ್ರತಿಭಟನೆ ದಿನ, ಮನವಿ ಸ್ವೀಕರಿಸಲು ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಪಿಡ್ಲೂಡಿ ಎಇಇ ವೆಂಕಟೇಶ್ ಅವರು ಬಂದಿದ್ದರು. ಈ ಸಮಯದಲ್ಲಿ ಕೆಲವರು ಅವರ ಕಾರು ಅಡ್ಡಗಟ್ಟಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಂದು ತಹಶೀಲ್ದಾರ್​ ವಿಠ್ಠಲ್ ಚೌಗಲಾ ಅವರು ಕವಲಗಾ ಗ್ರಾಮದ 14 ಜನರ ವಿರುದ್ಧ ದೂರು ನೀಡಿದ್ದಾರೆ. ರಸ್ತೆ ರಿಪೇರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಾರ್ವಜನಿಕರ‌ ಮೇಲೆ ದೂರು ದಾಖಲಿಸಿದ ತಹಶೀಲ್ದಾರ್​ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 3 October 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್