ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗೆ ಸಂಕಷ್ಟ; ಕಳೆದ ಒಂಬತ್ತು ತಿಂಗಳಿಂದ ವೇತನ ಸಿಗದೇ ಪರದಾಟ

ಅವರೆಲ್ಲ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಕಡಿಮೆ ಸಂಬಳಕ್ಕೆ ದುಡಿಯುವ ಅವರೆಲ್ಲ, ತಮಗೆ ಪ್ರತಿ ತಿಂಗಳಿಗೆ ಬರುವ ವೇತನದ ಮೇಲೆಯೇ ಜೀವನ ನಡೆಸುತ್ತಿದ್ದಾರೆ. ಆದ್ರೆ, ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿರುವ ಸರ್ಕಾರ, ಪ್ರತಿ ತಿಂಗಳು ದುಡಿಯುವ ಜನರಿಗೆ ಮಾತ್ರ ಸರಿಯಾಗಿ ವೇತನ ನೀಡುತ್ತಿಲ್ಲ. ಇದು ಹಾಸ್ಟೇಲ್​ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರ ಸಂಕಷ್ಟ ಹೆಚ್ಚಿಸುತ್ತಿದೆ.

ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗೆ ಸಂಕಷ್ಟ; ಕಳೆದ ಒಂಬತ್ತು ತಿಂಗಳಿಂದ ವೇತನ ಸಿಗದೇ ಪರದಾಟ
ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕಾಗಿ ಪರದಾಟ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 16, 2024 | 10:53 PM

ಕೊಪ್ಪಳ, ಮೇ.16: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಅನೇಕ ವಸತಿ ನಿಲಯಗಳಿವೆ. ಈ ವಸತಿ ನಿಲಯಗಳಲ್ಲಿ ಅಡುಗೆ ಸಿಬ್ಬಂಧಿ, ಕಾವಲುಗಾರರು, ಸ್ವಚ್ಚತೆ ಕೆಲಸ ಸೇರಿದಂತೆ ಅನೇಕ ಕೆಲಸಗಳಿಗಾಗಿ ಹೊರಗುತ್ತಿಗೆ(Outsourcing) ಆಧಾರದ ಮೇಲೆ ಏಜನ್ಸಿಗಳ ಮೂಲಕ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಪ್ರತಿ ತಿಂಗಳು ಹತ್ತರಿಂದ ಇಪ್ಪತ್ತು ಸಾವಿರ ವೇತನಕ್ಕಾಗಿ ರಾಜ್ಯದ ಸರ್ಕಾರಿ ಹಾಸ್ಟೇಲ್​ಗಳಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ, ಕೊಪ್ಪಳ ಜಿಲ್ಲೆಯಲ್ಲಿರುವ ಸರ್ಕಾರಿ ಹಾಸ್ಟೇಲ್​ಗಳಲ್ಲಿ ಕೂಡ 1145 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ವೇತನಕ್ಕಾಗಿ ಪರದಾಟ

ಕೊಪ್ಪಳ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಹಾಸ್ಟೇಲ್​ಗಳಲ್ಲಿಯೇ ಮುನ್ನೂರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದ್ರೆ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೇಲ್​ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಳೆದ ಎಂಟು ತಿಂಗಳಿಂದ ವೇತನ ಸಿಕ್ಕಿಲ್ಲ. ಬಿಸಿಎಂ ಹಾಸ್ಟೇಲ್ ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ಸಿಕ್ಕಿಲ್ಲ. ಇದು ಹಾಸ್ಟೇಲ್​ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಮಗೆ ವೇತನ ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಏಜನ್ಸಿಗಳಿಗೆ ಕೂಡ ಹತ್ತಾರು ಬಾರಿ ಮನವಿ ಸಲ್ಲಿಸಿದ್ದಾರೆ. ಆದ್ರೆ, ಯಾರು ಕೂಡ ಸ್ಪಂಧಿಸುತ್ತಿಲ್ಲವಂತೆ. ಹೀಗಾಗಿ ನಾವು ಜೀವನ ಮಾಡೋದು ಹೇಗೆ ಅಂತಿದ್ದಾರೆ ಕಾರ್ಮಿಕರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮುಂದುವರಿದ ತಾಪಮಾನ: ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ

ಇನ್ನು ಹಾಸ್ಟೇಲ್​ಗಳಲ್ಲಿ ಕೆಲಸ ಮಾಡುವ ಬಹುತೇಕ ಕಾರ್ಮಿಕರು ಬಡವರೇ ಆಗಿದ್ದಾರೆ. ಹೊಟ್ಟೆ ಚೀಲ ತುಂಬಿಸಿಕೊಳ್ಳಲು  ಅಡುಗೆ ಸೇರಿದಂತೆ ಇನ್ನಿತರ ಕೆಲಸ ಮಾಡುತ್ತಿರುವ ಕಾರ್ಮಿಕರು, ತಮಗೆ ಬರುವ ವೇತನದಲ್ಲಿಯೇ ಜೀವನ ನಡೆಸುತ್ತಿದ್ದರು. ಮನೆ ಬಾಡಿಗೆ, ತಿಂಗಳ ಮನೆ ಖರ್ಚು, ಮಕ್ಕಳ ಶಿಕ್ಷಣದ ಖರ್ಚು ವೆಚ್ಚ ಸೇರಿದಂತೆ ಎಲ್ಲಾ ಖರ್ಚನ್ನು ತಮಗೆ ಬರುತ್ತಿದ್ದ ವೇತನದಲ್ಲಿಯೇ ಸರಿದೂಗಿಸುತ್ತಿದ್ದರು. ಆದ್ರೆ, ಒಂದು ತಿಂಗಳ ವೇತನವೇ ಬರದಿದ್ದರೆ ಸಾಕಷ್ಟು ತೊಂದರೆಯಾಗುತ್ತದೆ. ಆದರೆ ಇಲ್ಲಿ ಕಳೆದ ಎಂಟು ತಿಂಗಳಿಂದ ವೇತನವೇ ಆಗಿಲ್ಲ. ಹೀಗಾಗಿ ದೈನಂದಿನ ಖರ್ಚು ವೆಚ್ಚಕ್ಕೂ ಕೂಡ ಕಾರ್ಮಿಕರು ಇದೀಗ ಪರದಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಇಷ್ಟಾದರೂ ಕೂಡ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಸತಿ ನಿಲಯಗಳ ಜವಾಬ್ದಾರಿ ಇರೋ ಇಲಾಖೆಗಳ ಸಚಿವರು ಮತ್ತು ಮೇಲಾಧಿಕಾರಿಗಳು ಅನೇಕ ನೆಪಗಳನ್ನು ಹೇಳಿ ವೇತನ ನೀಡುತ್ತಿಲ್ಲವಂತೆ. ಇಷ್ಟು ದಿನ ಅನುಧಾನ ಕೊರತೆ ನೆಪ ಹೇಳುತ್ತಿದ್ದ ಅಧಿಕಾರಿಗಳು ಇದೀಗ ಚುನಾವಣೆ ನೆಪ ಹೇಳುತ್ತಿದ್ದಾರಂತೆ. ಹೀಗಾದ್ರೆ ನಮ್ಮ ಜೀವನದ ಗತಿಯೇನು ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಕೇಳಿದ್ರೆ ಆದಷ್ಟು ಬೇಗನೆ ವೇತನ ನೀಡುತ್ತೇವೆ ಏದಮು ಹೇಳ್ತಿದ್ದಾರೆ. ಕಡಿಮೆ ಸಂಬಳಕ್ಕೆ ದುಡಿಯುವ ಕಾರ್ಮಿಕರಿಗೆ ಪ್ರತಿನಿತ್ಯ ವೇತನ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ನಾಲ್ಕರಿಂದ ಎಂಟು ತಿಂಗಳ ವೇತನ ಸಿಗದಿದ್ರೆ ಕಾರ್ಮಿಕರು ಕುಟುಂಬಗಳು ಬೀದಿಗೆ ಬೀಳುತ್ತವೆ. ಇನ್ನಾದರೂ ಗುತ್ತಿಗೆ ಪಡೆದಿರುವ ಏಜನ್ಸಿಗಳು, ಸರ್ಕಾರ, ಕಾರ್ಮಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 pm, Thu, 16 May 24

ತಾಜಾ ಸುದ್ದಿ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು