AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಟು ಅಯೋಧ್ಯೆ ರೈಲು ಸಂಪರ್ಕಕ್ಕೆ ಹೆಚ್ಚಿದ ಆಗ್ರಹ: ಪರಿಶೀಲನೆ ಭರವಸೆ ನೀಡಿದ ಸಚಿವ ಸೋಮಣ್ಣ

ರಾಮನ ಜನ್ಮಸ್ಥಳ ಅಯೋಧ್ಯೆಗೆ ರಾಮನ ಬಂಟ ಹನುಮಂತನ ಜನ್ಮಸ್ಥಳ ಅಂಜನಾದ್ರಿಯಿಂದ ರೈಲು ಸಂಪರ್ಕ ಕಲ್ಪಿಸಬೇಕು ಮತ್ತು ನೇರ ರೈಲು ಆರಂಭಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ನಂತರ ಈ ಬೇಡಿಕೆಯ ಕಾವು ಹೆಚ್ಚಾಗಿದೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಖುದ್ದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ.

ಅಂಜನಾದ್ರಿ ಟು ಅಯೋಧ್ಯೆ ರೈಲು ಸಂಪರ್ಕಕ್ಕೆ ಹೆಚ್ಚಿದ ಆಗ್ರಹ: ಪರಿಶೀಲನೆ ಭರವಸೆ ನೀಡಿದ ಸಚಿವ ಸೋಮಣ್ಣ
ಅಂಜನಾದ್ರಿ ಟು ಅಯೋಧ್ಯೆ ರೈಲು ಸಂಪರ್ಕಕ್ಕೆ ಹೆಚ್ಚಿದ ಆಗ್ರಹ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 18, 2025 | 4:57 PM

Share

ಕೊಪ್ಪಳ, ಜನವರಿ 18: ಅಯೋಧ್ಯೆಯಲ್ಲಿ ಶ್ರೀರಾಮ ನೆಲೆಸಿದ್ದರೆ, ರಾಮನ ಬಂಟ ಹನುಮಂತ ನೆಲಸಿರುವುದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ. ಸೀತೆಯನ್ನು ಹುಡಕುತ್ತಾ ಹೊರಟಿದ್ದ ರಾಮ, ಲಕ್ಷ್ಮಣರಿಗೆ, ನೆರವಾಗಿದ್ದು ಇದೇ ಕಿಷ್ಕಿಂಧೆಯ ಹನುಮಂತ ಮತ್ತು ವಾನರ ಸೇನೆ. ಇನ್ನು ಕಿಷ್ಕಿಂಧೆ ಅಂತ ಕರೆಯುವ ಅಂಜನಾದ್ರಿ ಮತ್ತು ಸುತ್ತಮುತ್ತಲಿನ ಅನೇಕ ಸ್ಥಳಗಳಲ್ಲಿ ರಾಮನ ಅನೇಕ ಹೆಜ್ಜೆ ಗುರುತುಗಳಿವೆ. ಕಿಷ್ಕಿಂಧೆಯಲ್ಲಿ ರಾಮ ಅನೇಕ ತಿಂಗಳ ಕಾಲವಿದ್ದು, ಚಾತುರ್ಮಾಸ ಆಚರಿಸಿದ, ಲಂಕಾಧಿಪತಿ ರಾವಣನ ವಿರುದ್ದ ಹೋರಾಟಕ್ಕೆ ಶಸ್ತಾಸ್ತ್ರಗಳು ಸಿದ್ಧವಾಗಿದ್ದು ಕೂಡಾ ಇದೇ ಕಿಷ್ಕಿಂಧೆ ಭಾಗದಲ್ಲಿ ಎಂಬ ಪ್ರತೀತಿ ಇದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂಬ ಅನೇದ ದಶಕಗಳ ಕನಸು ನನಸಾಗಿದ್ದು, ಕಳೆದ ವರ್ಷ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. ಆದರೆ ಆಡಳಿತಕ್ಕೆ ಬಂದ ಸರ್ಕಾರಗಳು, ರಾಮನಿಗೆ ನೀಡಿದ ಪ್ರಾಧಾನ್ಯತೆಯನ್ನು ರಾಮನ ಬಂಟ ಹನುಮನ ಜನ್ಮಸ್ಥಳ ಅಭಿವೃದ್ದಿಗೆ ನೀಡುತ್ತಿಲ್ಲ ಅನ್ನೋ ಆರೋಪವೂ ಕೇಳಿಬಂದಿದೆ.

ಈ ಮಧ್ಯೆ ಇದೀಗ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಖುದ್ದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ನೋಡಿದವರು ರಾಮನ ಬಂಟ, ಹನುಮನ ಜನ್ಮಸ್ಥಳ ಅಂಜನಾದ್ರಿ ನೋಡಲು ಬರುತ್ತಿದ್ದಾರೆ. ಅಂಜನಾದ್ರಿ ನೋಡಿದವರು ಅಯೋಧ್ಯೆಗೆ ಹೆಚ್ಚಿನ ಜನರು ಹೋಗುದ್ದಾರೆ. ಆದರೆ ನೇರವಾದ ರೈಲು ಸಂಪರ್ಕ ಇಲ್ಲದೇ ಇರುವುದರಿಂದ ಹೆಚ್ಚಿನ ಜನರಿಗೆ ಅನಾನುಕೂಲವಾಗುತ್ತಿದೆ. ಹೀಗಾಗಿ ಪ್ರತಿದಿನ ನೇರ ರೈಲು ಓಡಿಸಬೇಕು ಎಂಬುದು ರಾಮ ಮತ್ತು ಹನುಮ ಭಕ್ತರ ಆಗ್ರಹವಾಗಿದೆ.

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಹೆಸರು

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಎಂದು ಮರುನಾಮಕರಣ ಮಾಡಲು ಕೂಡಾ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರ ರೈಲ್ವೆ ಇಲಾಖೆಗೆ ಪ್ರಸ್ತಾವವನ್ನು ಕಳುಹಿಸಿದ್ದು, ಆದಷ್ಟು ಬೇಗನೆ ಮರುನಾಮಕರಣ ಮಾಡುವುದಾಗಿ ಸೋಮಣ್ಣ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 12 ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ

ರೈಲು ಸಂಪರ್ಕ ಕಲ್ಪಿಸುವಂತೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕೂಡಾ ಸಚಿವ ಸೋಮಣ್ಣಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?