ಹುನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಜ.22ರಂದು ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ

| Updated By: ವಿವೇಕ ಬಿರಾದಾರ

Updated on: Jan 21, 2024 | 5:17 PM

ಸೋಮವಾರ (ಜ.22) ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯುತ್ತದೆ. ಇತ್ತ ರಾಮನ ಬಂಟ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಕೆಳಗೆ 500 ಕೆಜಿ ತೂಕವಿರುವ, 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.

ಹುನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಜ.22ರಂದು ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ
ಶ್ರೀರಾಮನ ವಿಗ್ರಹ
Follow us on

ಕೊಪ್ಪಳ, ಜನವರಿ 21: ಸೋಮವಾರ (ಜ.22) ರಂದು ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ (Ramlalla) ಮೂರ್ತಿ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯುತ್ತದೆ. ಇತ್ತ ರಾಮನ ಬಂಟ ಹನುಮ ಜನ್ಮಸ್ಥಳ ಅಂಜನಾದ್ರಿ (Anjanadri) ಬೆಟ್ಟದ ಕೆಳಗೆ 500 ಕೆಜಿ ತೂಕವಿರುವ, 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಪಂಚಲೋಹದ ಶ್ರೀರಾಮನ ಮೂರ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯವರು ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ತಯಾರು ಮಾಡಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಸಂಸ್ಥೆಯವರು ಮುಜರಾಯಿ ಇಲಾಖೆಯ ಆಡಳಿತಾಧಿಕಾರಿ ಮಹಾಂತೇಶ್​ ಅವರಿಗೆ ಹಸ್ತಾಂತರಿಸಿದ್ದಾರೆ.

ಮೊದಲು ರಾಮನ ಮೂರ್ತಿ ಸ್ವೀಕರಿಸಲು ಮುಜರಾಯಿ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ರಾಮನ ಮೂರ್ತಿ ಸ್ವೀಕರಿಸುವಂತೆ ಹೇಳಿದ ಬಳಿಕ, ಮುಜರಾಯಿ ಇಲಾಖೆ ಕಾರ್ಯದರ್ಶಿ ಸೂಚನೆ ಮೇರೆಗೆ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Ayodhya Ram Mandir: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮಮಂದಿರ, ಫೋಟೋಗಳು ಇಲ್ಲಿವೆ

ಕಣ್ಮನ ಸೆಳೆಯುತ್ತಿದೆ ಅಯೋಧ್ಯೆ ರಾಮಮಂದಿರ ಸೆಟ್

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ‌ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ಬಿಜೆಪಿ ಯುವಘಟಕ ರಾಜ್ಯಾಧ್ಯಕ್ಷ ಹಾಗೂ ಸ್ಥಳಿಯ ಶಾಸಕ ದೀರಜ್ ಮುನಿರಾಜು ಅವರು ರಾಮಮಂದಿರ ಸೆಟ್​ ಅನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಸೆಟ್​ ಜನರ ಕಣ್ಮನ ಸೆಳೆಯುತ್ತಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಅಲ್ಲದೇ ಪೋಷಕರು ಮಕ್ಕಳಿಗೆ ರಾಮ, ಸೀತೆ ಮತ್ತು ಆಂಜನೇಯನ ವೇಷ ಹಾಕಿಸಿ ಸೆಟ್​ ಮುಂದೆ ನಿಲ್ಲಿಸಿ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವೀಕ್ಷಿಸಲು ಬೃಹತ್ ಎಲ್ಇಡಿ ವಾಲ್ ಅಳವಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sun, 21 January 24