AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಬಿಸಿ ತುಪ್ಪವಾದ ಇಕ್ಬಾಲ್ ಅನ್ಸಾರಿ; ಪಕ್ಷದ ಯಾವುದೇ ಸಭೆಗೆ ಹೋಗದಂತೆ ಬೆಂಬಲಿಗರಿಗೆ ಸೂಚನೆ

ತನ್ನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ, ಲೋಕಸಭಾ ಚುನಾವಣೆಯಲ್ಲಿ ಆದರ ಪರಿಣಾಮ ಗೊತ್ತಾಗಲಿದೆ ಅಂತ ಇಕ್ಬಾಲ್ ಅನ್ಸಾರಿ ಗುಡುಗಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಕರೆಯಲಾಗುವ ಯಾವುದೇ ಸಭೆಗಳಿಗೆ ಹೋಗಬೇಡಿ, ಯಾರು ಕರೆದರೂ ಹೋಗಬೇಡಿ ಎಂದು ಇಕ್ಬಾಲ್ ಅನ್ಸಾರಿ ತನ್ನ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್​ಗೆ ಬಿಸಿ ತುಪ್ಪವಾದ ಇಕ್ಬಾಲ್ ಅನ್ಸಾರಿ; ಪಕ್ಷದ ಯಾವುದೇ ಸಭೆಗೆ ಹೋಗದಂತೆ ಬೆಂಬಲಿಗರಿಗೆ ಸೂಚನೆ
ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 27, 2024 | 7:39 AM

Share

ಕೊಪ್ಪಳ, ಮಾರ್ಚ್​.27: ಕೇಂದ್ರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ (Congress) ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election) ಸಮರದಲ್ಲಿ ಗೆಲ್ಲಲು ನಾನಾ ಕಸರತ್ತು ಮಾಡುತ್ತಿದೆ. ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಈಗಾಗಲೇ ಟಿಕೆಟ್ ಸಿಗದೇ ಹತಾಶರಾಗಿರುವ ಕೊಪ್ಪಳ ಸಂಸದ ಕರಡಿ ಸಂಗಣ್ಣ (Karadi Sanganna) ಬಿಜೆಪಿಗೆ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಈಗ ಮತ್ತೊಂದೆಡೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ (Iqbal Ansari) ಕಾಂಗ್ರೆಸ್​ಗೆ ಬಿಸಿ ತುಪ್ಪವಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಕಾಂಗ್ರೆಸ್​ನಲ್ಲಿ ಬಂಡಾಯದ ಬೇಗುದಿ ಎದ್ದಿದೆ. ಕಾಂಗ್ರೆಸ್ ಪಕ್ಷದ ನಾಯಕರ ಮೇಲಿನ ಮುನಿಸು ಮರೆಯದ ಇಕ್ಬಾಲ್ ಅನ್ಸಾರಿ, ಲೋಕಸಭಾ ಚುನಾವಣೆ ಅಂಗವಾಗಿ ನಡೆಯುವ ಯಾವುದೇ ಸಭೆಗೆ ಹೋಗಬೇಡಿ. ಯಾರೇ ಸಭೆ ಕರೆದರೂ ಹೋಗಬೇಡಿ, ಸಮಸ್ಯೆ ಇನ್ನು ಬಗೆಹರಿದಿಲ್ಲ ಅಂತ ತಮ್ಮ ಬೆಂಬಲಿಗರಿಗೆ ಇಕ್ಬಾಲ್ ಅನ್ಸಾರಿ ಕಚೇರಿಯಿಂದ ಸಂದೇಶ ರವಾನೆಯಾಗಿದೆ. ತನ್ನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ, ಲೋಕಸಭಾ ಚುನಾವಣೆಯಲ್ಲಿ ಆದರ ಪರಿಣಾಮ ಗೊತ್ತಾಗಲಿದೆ ಅಂತ ಇಕ್ಬಾಲ್ ಅನ್ಸಾರಿ ಗುಡುಗಿದ್ದಾರೆ. ಇದು ಲೋಕಸಭಾ ಚುನಾವಣೆಯ ಗೆಲುವಿನ ಮೇಲೆ ಪರಿಣಾಮ ಬೀರಲಿದೆ. ಇನ್ನು ಅನ್ಸಾರಿ ಮುನಿಸು ಶಮನ ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ, ಗಂಗಾವತಿಯಲ್ಲಿರೋ ಅನ್ಸಾರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಳೆದ ವಾರ ಸಚಿವ ಶಿವರಾಜ್ ತಂಗಡಗಿ ಕೂಡಾ ಅನ್ಸಾರಿ ಜೊತೆ ಮಾತುಕತೆ ನಡೆಸಿದ್ದರು. ಆದರೆ ನಾಯಕರ ಸಂಧಾನ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು: ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಯಶಸ್ವಿ

ಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮುನಿಸು, ನಾಯಕರ ಸಂಧಾನಕ್ಕೂ ಬಗ್ಗೆದ ಹಿನ್ನೆಲೆ ಇದೀಗ ಅನ್ಸಾರಿ ವಿರುದ್ಧ ಸಭೆ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದೆ. ಅನ್ಸಾರಿ ನಡೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡೋ ಸಂಬಂಧ ಸಭೆ ನಡೆಯಲಿದೆ. ಮಾಜಿ ಸಚಿವ ಅನ್ಸಾರಿಗೆ ಶಾಕ್ ಕೊಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅನ್ಸಾರಿ ಬರದೇ ಇದ್ದರೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲು ಕೈ ಮುಖಂಡರು ಮುಂದಾಗಿದ್ದಾರೆ. ಸ್ವಕ್ಷೇತ್ರದಲ್ಲಿಯೇ ಅನ್ಸಾರಿಗೆ ಶಾಕ್ ಕೊಡಲು ಅನ್ಸಾರಿ ವಿರುದ್ಧ ಪಡೆಯೊಂದು ರೆಡಿಯಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ