AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಬಿಸಿ ತುಪ್ಪವಾದ ಇಕ್ಬಾಲ್ ಅನ್ಸಾರಿ; ಪಕ್ಷದ ಯಾವುದೇ ಸಭೆಗೆ ಹೋಗದಂತೆ ಬೆಂಬಲಿಗರಿಗೆ ಸೂಚನೆ

ತನ್ನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ, ಲೋಕಸಭಾ ಚುನಾವಣೆಯಲ್ಲಿ ಆದರ ಪರಿಣಾಮ ಗೊತ್ತಾಗಲಿದೆ ಅಂತ ಇಕ್ಬಾಲ್ ಅನ್ಸಾರಿ ಗುಡುಗಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಕರೆಯಲಾಗುವ ಯಾವುದೇ ಸಭೆಗಳಿಗೆ ಹೋಗಬೇಡಿ, ಯಾರು ಕರೆದರೂ ಹೋಗಬೇಡಿ ಎಂದು ಇಕ್ಬಾಲ್ ಅನ್ಸಾರಿ ತನ್ನ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್​ಗೆ ಬಿಸಿ ತುಪ್ಪವಾದ ಇಕ್ಬಾಲ್ ಅನ್ಸಾರಿ; ಪಕ್ಷದ ಯಾವುದೇ ಸಭೆಗೆ ಹೋಗದಂತೆ ಬೆಂಬಲಿಗರಿಗೆ ಸೂಚನೆ
ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Mar 27, 2024 | 7:39 AM

Share

ಕೊಪ್ಪಳ, ಮಾರ್ಚ್​.27: ಕೇಂದ್ರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ (Congress) ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election) ಸಮರದಲ್ಲಿ ಗೆಲ್ಲಲು ನಾನಾ ಕಸರತ್ತು ಮಾಡುತ್ತಿದೆ. ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಈಗಾಗಲೇ ಟಿಕೆಟ್ ಸಿಗದೇ ಹತಾಶರಾಗಿರುವ ಕೊಪ್ಪಳ ಸಂಸದ ಕರಡಿ ಸಂಗಣ್ಣ (Karadi Sanganna) ಬಿಜೆಪಿಗೆ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಈಗ ಮತ್ತೊಂದೆಡೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ (Iqbal Ansari) ಕಾಂಗ್ರೆಸ್​ಗೆ ಬಿಸಿ ತುಪ್ಪವಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಕಾಂಗ್ರೆಸ್​ನಲ್ಲಿ ಬಂಡಾಯದ ಬೇಗುದಿ ಎದ್ದಿದೆ. ಕಾಂಗ್ರೆಸ್ ಪಕ್ಷದ ನಾಯಕರ ಮೇಲಿನ ಮುನಿಸು ಮರೆಯದ ಇಕ್ಬಾಲ್ ಅನ್ಸಾರಿ, ಲೋಕಸಭಾ ಚುನಾವಣೆ ಅಂಗವಾಗಿ ನಡೆಯುವ ಯಾವುದೇ ಸಭೆಗೆ ಹೋಗಬೇಡಿ. ಯಾರೇ ಸಭೆ ಕರೆದರೂ ಹೋಗಬೇಡಿ, ಸಮಸ್ಯೆ ಇನ್ನು ಬಗೆಹರಿದಿಲ್ಲ ಅಂತ ತಮ್ಮ ಬೆಂಬಲಿಗರಿಗೆ ಇಕ್ಬಾಲ್ ಅನ್ಸಾರಿ ಕಚೇರಿಯಿಂದ ಸಂದೇಶ ರವಾನೆಯಾಗಿದೆ. ತನ್ನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ, ಲೋಕಸಭಾ ಚುನಾವಣೆಯಲ್ಲಿ ಆದರ ಪರಿಣಾಮ ಗೊತ್ತಾಗಲಿದೆ ಅಂತ ಇಕ್ಬಾಲ್ ಅನ್ಸಾರಿ ಗುಡುಗಿದ್ದಾರೆ. ಇದು ಲೋಕಸಭಾ ಚುನಾವಣೆಯ ಗೆಲುವಿನ ಮೇಲೆ ಪರಿಣಾಮ ಬೀರಲಿದೆ. ಇನ್ನು ಅನ್ಸಾರಿ ಮುನಿಸು ಶಮನ ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ, ಗಂಗಾವತಿಯಲ್ಲಿರೋ ಅನ್ಸಾರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಳೆದ ವಾರ ಸಚಿವ ಶಿವರಾಜ್ ತಂಗಡಗಿ ಕೂಡಾ ಅನ್ಸಾರಿ ಜೊತೆ ಮಾತುಕತೆ ನಡೆಸಿದ್ದರು. ಆದರೆ ನಾಯಕರ ಸಂಧಾನ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು: ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಯಶಸ್ವಿ

ಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮುನಿಸು, ನಾಯಕರ ಸಂಧಾನಕ್ಕೂ ಬಗ್ಗೆದ ಹಿನ್ನೆಲೆ ಇದೀಗ ಅನ್ಸಾರಿ ವಿರುದ್ಧ ಸಭೆ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದೆ. ಅನ್ಸಾರಿ ನಡೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡೋ ಸಂಬಂಧ ಸಭೆ ನಡೆಯಲಿದೆ. ಮಾಜಿ ಸಚಿವ ಅನ್ಸಾರಿಗೆ ಶಾಕ್ ಕೊಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅನ್ಸಾರಿ ಬರದೇ ಇದ್ದರೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲು ಕೈ ಮುಖಂಡರು ಮುಂದಾಗಿದ್ದಾರೆ. ಸ್ವಕ್ಷೇತ್ರದಲ್ಲಿಯೇ ಅನ್ಸಾರಿಗೆ ಶಾಕ್ ಕೊಡಲು ಅನ್ಸಾರಿ ವಿರುದ್ಧ ಪಡೆಯೊಂದು ರೆಡಿಯಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ