AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಜನಾರ್ದನರೆಡ್ಡಿ ಹೊಸ ಮನೆ ಗೃಹ ಪ್ರವೇಶ, ಸಕ್ರಿಯ ರಾಜಕೀಯಕ್ಕೆ ಮತ್ತೆ ಎಂಟ್ರಿ ಸಾಧ್ಯತೆ

ಇನ್ಮುಂದೆ ಗಂಗಾವತಿಯಲ್ಲಿ ಗಣಿಧಣಿ ರೆಡ್ಡಿ ರಾಜಕಾರಣ ಕನ್ಫರ್ಮ್. ಕೊಪ್ಪಳ ಜಿಲ್ಲೆ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಜನಾರ್ದನರೆಡ್ಡಿ ಹೊಸ ಮನೆ ಖರೀದಿಸಿದ್ದಾರೆ.

ಗಂಗಾವತಿ: ಜನಾರ್ದನರೆಡ್ಡಿ ಹೊಸ ಮನೆ ಗೃಹ ಪ್ರವೇಶ, ಸಕ್ರಿಯ ರಾಜಕೀಯಕ್ಕೆ ಮತ್ತೆ ಎಂಟ್ರಿ ಸಾಧ್ಯತೆ
ಜನಾರ್ದನರೆಡ್ಡಿ ಹೊಸ ಮನೆ ಗೃಹ ಪ್ರವೇಶಕ್ಕೆ ಸಿದ್ಧತೆ
Follow us
TV9 Web
| Updated By: ಆಯೇಷಾ ಬಾನು

Updated on:Dec 14, 2022 | 7:22 AM

ಕೊಪ್ಪಳ: ಗಣಿ ಉದ್ಯಮಿ, ಮಾಜಿ ಸಚಿವ ಜನಾರ್ದನರೆಡ್ಡಿ ಅವರು ಹೊಸ ಪಕ್ಷ ಕಟ್ಟಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಮತ್ತೊಂದೆಡೆ ಜನಾರ್ದನರೆಡ್ಡಿ ಅವರು ಗಂಗಾವತಿಯಿಂದ ಸ್ಪರ್ಧೆಗೆ ಇಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಅವರು ಗಂಗಾವತಿಯಲ್ಲಿ ಐಷಾರಾಮಿ ಮನೆಯೊಂದನ್ನು ಖರೀದಿಸಿದ್ದು ಇಂದು ಗೃಹ ಪ್ರವೇಶ ನಡೆಯಲಿದೆ.

ಇನ್ಮುಂದೆ ಗಂಗಾವತಿಯಲ್ಲಿ ಗಣಿಧಣಿ ರೆಡ್ಡಿ ರಾಜಕಾರಣ ಕನ್ಫರ್ಮ್. ಕೊಪ್ಪಳ ಜಿಲ್ಲೆ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಜನಾರ್ದನರೆಡ್ಡಿ ಹೊಸ ಮನೆ ಖರೀದಿಸಿದ್ದಾರೆ. ಇಂದು ಮಾಜಿ ಸಚಿವ ಜನಾರ್ದನರೆಡ್ಡಿ ಅವರ ಹೊಸ ಮನೆಯ ಗೃಹ ಪ್ರವೇಶ ನಡೆಯಲಿದ್ದು ಇದಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಜನಾರ್ದನರೆಡ್ಡಿ ದೆಹಲಿ ಪ್ರವಾಸ ಹಿನ್ನೆಲೆ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮೀರಿಂದ ಗೃಹ ಪ್ರವೇಶ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ-ರಾಮುಲು ದಶಕಗಳ ಸ್ನೇಹ ವಿಸರ್ಜನೆಯಾಯಿತೇ? ಸ್ನೇಹದ ಕಡಲಲ್ಲಿ ಹುಳಿ ಹಿಂಡಿದವರು ಯಾರು? ಕಂಪ್ಲೀಟ್ ಸ್ಟೋರಿ ಇಲ್ಲಿದೆ

ಇಂದು ಗೃಹ ಪ್ರವೇಶದ ಹಿನ್ನೆಲೆಯಲ್ಲಿ ಪೂಜಾ ಸಾಮಗ್ರಿಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಳ್ಳಾರಿ ಮೂಲದ ಅರ್ಚಕರಿಂದ ಕಾರ್ಯಕ್ರಮ ನೆರವೇರಲಿದೆ. ಸುಮಾರು 20ಕ್ಕೂ ಹೆಚ್ಚು ಅರ್ಚಕರು ಪೂಜಾ ವಿಧಾನಗಳಲ್ಲಿ ಭಾಗಿಯಾಗಲಿದ್ದಾರೆ. ಆಪ್ತರಿಗಷ್ಟೇ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು ಇಂದಿನಿಂದ ಜನಾರ್ದನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಗುರಿಯಾಗಿಸಿರುವ ಜನಾರ್ದನ ರೆಡ್ಡಿ ಗೃಹಪ್ರವೇಶ ಮಾಡಿ ಇಂದಿನಿಂದ ಸಕ್ರಿಯ ರಾಜಕೀಯಕ್ಕೆ ಇಳಿಯಲಿದ್ದಾರೆ. ಇನ್ನು ಜನಾರ್ಧನ ರೆಡ್ಡಿಯ ಗೃಹ ಪ್ರವೇಶ ಹಿನ್ನೆಲೆ ತಳಿರು ತೋರಣದಿಂದ ಮನೆ ಕಂಗೊಳಿಸುತ್ತಿದೆ. ರಾತ್ರಿಯಿಂದಲೇ ಪೂಜೆ, ಹೋಮ ಹವನ ಆರಂಭವಾಗಿದೆ.

Published On - 7:22 am, Wed, 14 December 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?